ಸದ್ಯದ ಪರಿಸ್ಥಿತಿಯಲ್ಲಿ ಲೋಡ್ ಶೆಡ್ಡಿಂಗ್ ಅನಿವಾರ್ಯ: ಸಚಿವ ಪರಮೇಶ್ವರ್‌

Date:

Advertisements
  • ರಾಜ್ಯದ ಹನ್ನೊಂದು ಜಿಲ್ಲೆಗಳಲ್ಲಿ ಸರಾಸರಿಗಿಂತ ಕಡಿಮೆ ಮಳೆ
  • ‘ಕೆಲವು ಭಾಗ ಬರ ಪೀಡಿತ ಪ್ರದೇಶಗಳೆಂದು ಘೋಷಿಸಲಾಗುವುದು’

ರಾಜ್ಯದ ಸುಮಾರು ಹನ್ನೊಂದು ಜಿಲ್ಲೆಗಳಲ್ಲಿ ಈ ವರ್ಷ ಸರಾಸರಿಗಿಂತ ಕಡಿಮೆ ಮಳೆಯಾಗಿದೆ. ಜಲವಿದ್ಯುತ್ ಉತ್ಪಾದನೆಗೆ ಧಕ್ಕೆಯಾಗಿದ್ದು, ಲೋಡ್ ಶೆಡ್ಡಿಂಗ್ ಮಾಡುವ ಮೂಲಕ ನಾವು ವಿದ್ಯುತ್ ಬೇಡಿಕೆ ನಿರ್ವಹಿಸಬೇಕಾಗಿದೆ ಎಂದು ಸಚಿವ ಜಿ ಪರಮೇಶ್ವರ್‌ ಹೇಳಿದರು.

ತುಮಕೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಮಳೆ ಕೊರತೆಯಿಂದಾಗಿ ವಿದ್ಯುತ್ ಉತ್ಪಾದನೆಗೆ ಧಕ್ಕೆಯಾಗುವ ಸಂಭವವಿದೆ. ಸದ್ಯದ ಪರಿಸ್ಥಿತಿಯಲ್ಲಿ ಲೋಡ್ ಶೆಡ್ಡಿಂಗ್ ಅನಿವಾರ್ಯ” ಎಂದರು.

“ತುಮಕೂರಿನ ಶೇ.35ರಷ್ಟು ರೈತರು ಮಾತ್ರ ಬಿತ್ತನೆ ಆರಂಭಿಸಿದ್ದಾರೆ. ಮಳೆ ಕಡಿಮೆಯಾಗಿರುವುದೇ ಕಡಿಮೆ ಪ್ರಮಾಣದಲ್ಲಿ ರೈತರು ಬಿತ್ತನೆ ಮಾಡಲು ಕಾರಣವಾಗಿದೆ. ಮಳೆ ಕಡಿಮೆಯಾದ ಕಾರಣ ರಾಜ್ಯದ ಕೆಲವು ಭಾಗಗಳನ್ನು ಬರ ಪೀಡಿತ ಪ್ರದೇಶಗಳೆಂದು ಘೋಷಿಸಲಾಗುವುದು” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಹುಸಿ ದೇಶಭಕ್ತರ ಮೋದಿ ಕಾಲ; ಗಾಂಧಿ ಅವಮಾನಿಸುವ ಕಾಲ

“ರಾಜ್ಯದ ಬಹುತೇಕ ಜಲಾಶಯಗಳಲ್ಲಿ ಕಡಿಮೆ ನೀರಿದೆ. ಕೃಷ್ಣರಾಜ ಸಾಗರ ಮತ್ತು ಕಬಿನಿ ಜಲಾಶಯಗಳಲ್ಲಿ ಆಗಸ್ಟ್ 11 ರ ಹೊತ್ತಿಗೆ ಅವುಗಳ ಪೂರ್ಣ ಸಂಗ್ರಹ ಸಾಮರ್ಥ್ಯದ ಅರ್ಧದಷ್ಟು ನೀರು ಇದೆ. 31 ಜಿಲ್ಲೆಗಳ ಪೈಕಿ 18 ಜಿಲ್ಲೆಗಳಲ್ಲಿ ಮಾತ್ರ ಆಗಸ್ಟ್ 11 ರ ಹೊತ್ತಿಗೆ ಸಾಮಾನ್ಯ ಮಳೆಯಾಗಿದೆ” ಎಂದರು.

ಸರ್ಕಾರವು ತನ್ನ ಐದು ಚುನಾವಣಾ ಗ್ಯಾರಂಟಿಗಳನ್ನು ಪೂರೈಸಲು ಹಣವನ್ನು ಸಂಗ್ರಹಿಸಲು ಒತ್ತಡದಲ್ಲಿದೆ. ಈಗ ಬರಗಾಲದಿಂದ ಸಂತ್ರಸ್ತರಾದ ರೈತರಿಗೆ ರಾಜ್ಯ ಸರ್ಕಾರ ಪರಿಹಾರ ನೀಡಬೇಕಾಗಿದೆ. ಇದರಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ರೂ. ಹೊರೆಯಾಗಲಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X