ರೆಡ್ಡಿ ಜನಸಂಘದ ಶತಮಾನೋತ್ಸವ ಸೆಪ್ಟೆಂಬರ್ 24

Date:

Advertisements

ಕರ್ನಾಟಕ ರೆಡ್ಡಿ ಜನಸಂಘದ ಶತಮಾನೋತ್ಸವ ಸಮಾರಂಭವನ್ನು ಸೆಪ್ಟೆಂಬರ್ 24ರಂದು ಬೆಂಗಳೂರಿನ ಗಾಯತ್ರಿ ವಿಹಾರದ ಅರಮನೆ ಮೈದಾನದಲ್ಲಿ ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ ಎಂದು ಎರೆಹೊಸಹಳ್ಳಿಯ ರೆಡ್ಡಿ ಗುರುಪೀಠದ ವೇಮನಾನಂದ ಸ್ವಾಮೀಜಿ ಬೆಳಗಾವಿ ನಗರದಲ್ಲಿ ತಿಳಿಸಿದ್ದಾರೆ.

ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, “ರೆಡ್ಡಿ ಜನಸಂಘವು 100ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಸಂಭ್ರಮಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಮಾಜದ ಶಾಸಕರು, ಮಾಜಿ ಶಾಸಕರು, ಮುಖಂಡರು ಹಾಗೂ ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಸುಮಾರು 35 ಲಕ್ಷ ರೆಡ್ಡಿ ಸಮುದಾಯದವರು ಇದ್ದರೂ ಕಾಂತರಾಜು ವರದಿ ಕೇವಲ 7 ಲಕ್ಷ ಜನರಷ್ಟೇ ಇದ್ದಾರೆ ಎಂದು ತಪ್ಪು ಮಾಹಿತಿ ನೀಡಿದೆ. ಇದರ ಪರಿಣಾಮವಾಗಿ ನಾವು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಮಾಜದ ಸದಸ್ಯರಿಗೆ ಕರೆ ನೀಡಿದ ಸ್ವಾಮೀಜಿ, ಸೆಪ್ಟೆಂಬರ್ 22ರಿಂದ ಆರಂಭವಾಗುವ ಸಮೀಕ್ಷೆಯಲ್ಲಿ ಯಾರೂ ಉಪಪಂಗಡಗಳ ಹೆಸರನ್ನು ಬರೆಯಿಸಬಾರದು. ಧರ್ಮದ ಕಾಲಂನಲ್ಲಿ ‘ಹಿಂದೂ’ ಹಾಗೂ ಜಾತಿ ಕಾಲಂನಲ್ಲಿ ‘ರೆಡ್ಡಿ’ ಎಂದೇ ಬರೆಯಿಸುವ ಮೂಲಕ ನಿಖರವಾದ ಜನಸಂಖ್ಯೆ ಹೊರಬರಬೇಕು ಎಂದು ತಿಳಿಸಿದ್ದಾರೆ.

ee dina logo with tagline copy
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

Download Eedina App Android / iOS

X