ಮದ್ದೂರು ಘಟನೆ | ಬಿಜೆಪಿ-ಜೆಡಿಎಸ್ ನಾಯಕರಿಂದ ಪ್ರಚೋದನೆ ಕೆಲಸ: ಸಚಿವ ಚಲುವರಾಯಸ್ವಾಮಿ

Date:

Advertisements

ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆ ವಿಚಾರಕ್ಕೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದು, “ನಿನ್ನೆ ಮೆರವಣಿಗೆ ನಡೆಯುವ ಸಂಧರ್ಭದಲ್ಲಿ ಮಸೀದಿ ಕಡೆಯಿಂದ ಕಲ್ಲುಗಳು ಎಸೆದ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ ವಿಚಾರಣೆ ನಡೆಸಿ ನಂತರ ಇಪ್ಪತ್ತೊಂದು ಜನರನ್ನು ಈಗಾಗಲೇ ಬಂಧಿಸಲಾಗಿದೆ” ಎಂದು ಹೇಳಿದ್ದಾರೆ.

“ಯಾವ ಹಿಂದೂಗಳ ಮೇಲೂ ಕೇಸ್ ದಾಖಲಾಗಿಲ್ಲ, ಗಲಭೆ ನಡೆದ ಕೆಲವೇ ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಘಟನೆ ನಡೆದ ತಕ್ಷಣ ಇಷ್ಟು ಬೇಗ ಕ್ರಮ ತೆಗೆದು ಕೊಂಡ ಪ್ರಕರಣ ಬೇರೆ ಯಾವುದೂ ಇಲ್ಲ‌. ಆದ್ರೆ ಬಿಜೆಪಿಯ ಹಾಗೂ ಕೆಲವು ಜೆಡಿಎಸ್ ನಾಯಕರು ಪ್ರಚೋದಿಸುವ ಕೆಲಸ ಮಾಡ್ತಾ ಇದ್ದಾರೆ” ಎಂದು ಆರೋಪಿಸಿದ್ದಾರೆ.

“ಇನ್ನಷ್ಟು ಬಿಗಿ ಕ್ರಮಗಳನ್ನು ತೆಗೆದುಕೊಳ್ಳಲು ಹೇಳಬಹುದಿತ್ತು. ಅದು ಬಿಟ್ಟು ಕೋಮುಗಲಭೆಗೆ ಪ್ರಚೋದನೆ ಕೊಡಬಾರದಿತ್ತು. ಮದ್ದೂರಿನಲ್ಲಿ ಹಿಂದೆ ಎಂದೂ ಈ ರೀತಿಯ ಘಟನೆ ನಡೆದಿಲ್ಲ. ಹೊರಗಡೆಯಿಂದ ಬಂದು ಯಾರೋ‌ ಗಲಭೆ ಮಾಡಿರಬಹುದು ಎಂಬ ಬಗ್ಗೆ ವಿಚಾರಣೆ ಮಾಡ್ತಾ ಇದ್ದೇವೆ” ಎಂದು ತಿಳಿಸಿದ್ದಾರೆ.

“ಯಾವುದೇ ಸಮಾಜ ಇದ್ದರೂ ಅವರ ಮೇಲೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ತೀವಿ. ಬಿಜೆಪಿ, ಜೆಡಿಎಸ್ ನವರು ರಾಜಕಾರಣವಾಗಿ ನಮ್ಮನ್ನು ಎದುರಿಸಾಗದೆ ಪ್ರಚೋದನೆ ಮಾಡ್ತಾ ಇದ್ದಾರೆ. ನಾವು ಯಾರ ಓಲೈಕೆ ಸಹಾ ಮಾಡುತ್ತಿಲ್ಲ. ಹಾಗಿದ್ದರೆ ಯಾಕೆ ಇಪ್ಪತ್ತೊಂದು ಜನರ ಬಂಧನ ಮಾಡ್ತಾ ಇದ್ದೆವು” ಎಂದು ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ.

“ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಸಹಿಸಲು ಆಗ್ತಿಲ್ಲ. ಸದನದಲ್ಲಿ ನಮ್ಮನ್ನು ಎದುರಿಸಲು ಅವರಿಗೆ ಆಗೋದಿಲ್ಲ. ಹೀಗಾಗಿ ಇವಾಗ ಇಂತಹಾ ಘಟನೆಗಳು ಆದಾಗ ಪ್ರಚೋದನೆ ಕೊಡುವ ಕೆಲಸ ಮಾಡ್ತಾ ಇದ್ದಾರೆ” ಎಂದು ದೂರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮದ್ದೂರು | ಬಿಜೆಪಿ ಪರ ಕಾರ್ಯಕರ್ತರಿಂದ ಪ್ರತಿಭಟನೆ, ಮತ್ತೆ ಕಲ್ಲು ತೂರಾಟ

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಭಾನುವಾರ ರಾತ್ರಿ ಗಣೇಶ ಮುರ್ತಿ ವಿಸರ್ಜನಾ ಮೆರವಣಿಗೆ...

ಮದ್ದೂರು ಕಲ್ಲು ತೂರಾಟ | ಎರಡು ಪ್ರಕರಣ ದಾಖಲು, 21 ಜನರ ಬಂಧನ: ಮಂಡ್ಯ ಎಸ್​​ಪಿ ಬಾಲದಂಡಿ

ಗಣೇಶ ವಿಸರ್ಜನೆ ಮೆರವಣಿಗೆಯ ಸಂದರ್ಭದಲ್ಲಿ ಒಂದು ಮಸೀದಿಯ ಬಳಿ ಕಲ್ಲು ತೂರಾಟ...

ಮದ್ದೂರು | ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ಎಂಟು ಜನರಿಗೆ ಗಾಯ

ಮಂಡ್ಯ ಜಿಲ್ಲೆಯ ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ಭಾನುವಾರ ರಾತ್ರಿ ಗಣಪತಿ...

ಮಂಡ್ಯ | ಸೆ.13ಕ್ಕೆ ‘ಸ್ವರಾಜ್ ಉತ್ಸವ’ : ಶಾಸಕ ದರ್ಶನ್ ಪುಟ್ಟಣ್ಣಯ್ಯ

ಮಂಡ್ಯ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ 'ಗಾಂಧೀಜಿಯವರ...

Download Eedina App Android / iOS

X