ಚೆನ್ನೈ | ಕಲಾಕ್ಷೇತ್ರ ವಿದ್ಯಾರ್ಥಿಗಳ ಪ್ರತಿಭಟನೆ; ಅಧ್ಯಾಪಕನ ವಿರುದ್ಧ ಪ್ರಕರಣ

Date:

Advertisements
  • ಕಲಾಕ್ಷೇತ್ರ ಮಾಜಿ ವಿದ್ಯಾರ್ಥಿನಿಯಿಂದ ದೂರು ದಾಖಲು
  • ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಹರಿಪದ್ಮನ್‌ ವಿರುದ್ಧ ಪ್ರಕರಣ

ಚೆನ್ನೈನ ಕಲಾಕ್ಷೇತ್ರ ಶಿಕ್ಷಣ ಸಂಸ್ಥೆಯ ಬೋಧಕ ಸಿಬ್ಬಂದಿಯಿಂದ ಲೈಂಗಿಕ ದೌರ್ಜನ್ಯ ಆರೋಪಿಸಿ ವಿದ್ಯಾರ್ಥಿಗಳ ಪ್ರತಿಭಟನೆಯ ಒಂದು ದಿನದ ನಂತರ ಪೊಲೀಸರು ಶನಿವಾರ (ಏಪ್ರಿಲ್ 1) ಆರೋಪಿ ಸಹಾಯಕ ಅಧ್ಯಾಪಕರೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸಂಸ್ಥೆಯ ಮಾಜಿ ಮಹಿಳಾ ವಿದ್ಯಾರ್ಥಿಯೊಬ್ಬರು ಅಧ್ಯಾಪಕ ಹರಿಪದ್ಮನ್‌ ವಿರುದ್ಧ ದೂರು ನೀಡಿದ್ದಾರೆ. ಇದಕ್ಕೂ ಮುನ್ನ ಸಂಸ್ಥೆಯ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಸಂಸ್ಥೆಯ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದರು.

ಹರಿಪದ್ಮನ್‌ ಮತ್ತು ಇತರ ಮೂವರು ಸಿಬ್ಬಂದಿ ಲೈಂಗಿಕ ಕಿರುಕುಳ ಮತ್ತು ಮೌಖಿಕ ನಿಂದನೆ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.

ಅಲ್ಲದೆ, ಸುಮಾರು 90 ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯದ ಕುರಿತು ಕಲಾಕ್ಷೇತ್ರ ಸಿಬ್ಬಂದಿ ವಿರುದ್ಧ ಶುಕ್ರವಾರ (ಮಾರ್ಚ್‌ 31) ರಾಜ್ಯ ಮಹಿಳಾ ಆಯೋಗದ ಮುಖ್ಯಸ್ಥೆಗೆ ದೂರು ನೀಡಿದ್ದರು. ತಪ್ಪಿತಸ್ಥರು ಕಂಡು ಬಂದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ಭರವಸೆ ನೀಡಿದರು.

“ನಾವು ವರ್ಷಗಳಿಂದ ಕಲಾಕ್ಷೇತ್ರದಲ್ಲಿ ಲೈಂಗಿಕ ದೌರ್ಜನ್ಯ, ಮೌಖಿಕ ನಿಂದನೆ ಮತ್ತು ಚರ್ಮದ ಬಣ್ಣದ ಆಧಾರದ ಮೇಲೆ ತಾರತಮ್ಯ ಅನುಭವಿಸುತ್ತಿದ್ದೇವೆ. ಆದರೆ ಈ ಬಗ್ಗೆ ಆರೋಪ ಮಾಡಿದರೆ ಸಂಸ್ಥೆಯು ಅಸಡ್ಡೆ ಹಾಗೂ ನಿರ್ಲಕ್ಷ್ಯ ಧೋರಣೆ ತಾಳಿದೆ” ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಈ ಬಗ್ಗೆ ನಿರ್ಲಕ್ಷ್ಯ ತಾಳಿರುವ ನಿರ್ದೇಶಕಿ ರೇವತಿ ರಾಮಚಂದ್ರನ್‌ ಅವರನ್ನು ವಜಾಗೊಳಿಸಿ ಆಂತರಿಕ ದೂರು ಸಮಿತಿ ಪುನರ್‌ರಚಿಸಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್‌ ರೆಡ್ಡಿ ಮತ್ತು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ಗೆ ಪತ್ರ ಬರೆದಿದ್ದರು.

ವಿದ್ಯಾರ್ಥಿಗಳ ಪ್ರತಿಭಟನೆಯ ನಂತರ ವಿದ್ಯಾಸಂಸ್ಥೆಯನ್ನು ಮುಚ್ಚಲಾಗಿದೆ. ಪ್ರತಿಭಟನೆಯ ಗಂಟೆಗಳ ನಂತರ ವಿದ್ಯಾರ್ಥಿಗಳಿಗೆ ವಸತಿಗೃಹಗಳನ್ನು (ಹಾಸ್ಟೆಲ್) ತೆರವುಗೊಳಿಸುವಂತೆ ಕಲಾಕ್ಷೇತ್ರ ಸೂಚಿಸಿದೆ.

ಲಲಿತ ಕಲೆಯ ರುಕ್ಮಿಣಿ ದೇವಿ ಕಾಲೇಜು (ಆರ್‌ಡಿಸಿಎಫ್ಎ) ಮಾರ್ಚ್ 30 ಸಂಜೆ 5.15ರಿಂದ ಏಪ್ರಿಲ್ 6ವರೆಗೆ ಸ್ಥಗಿತಗೊಳ್ಳಲಿದೆ ಎಂದು ವಿದ್ಯಾಸಂಸ್ಥೆ ಸುತ್ತೋಲೆ ಹೊರಡಿಸಿದೆ.

ಆರೋಪಿ ಅಧ್ಯಾಪಕನ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಲು ಆಗ್ರಹಿಸಿ ಕಾಲೇಜಿನ ಆವರಣದಲ್ಲಿರುವ ಆಲದ ಮರದ ಕೆಳಗೆ ವಿದ್ಯಾರ್ಥಿಗಳು ಗುರುವಾರ ಬೆಳಿಗ್ಗೆಯಿಂದ ಮೌನ ಪ್ರತಿಭಟನೆ ನಡೆಸಿದರು. ಸಂಜೆಯ ನಂತರ ಕಾಲೇಜಿನಿಂದ ತಿರುವನ್ಮಯೂರ್ ರಸ್ತೆಯವರೆಗೆ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಗೋವಾ | ಡಚ್‌ ಪ್ರಜೆ, ವ್ಯಕ್ತಿಗೆ ಕಿರುಕುಳ, ಹಲ್ಲೆ ; ರೆಸಾರ್ಟ್‌ ಸಿಬ್ಬಂದಿ ಬಂಧನ

ವಿದ್ಯಾರ್ಥಿಗಳು ಕಲಾಕ್ಷೇತ್ರ ಆವರಣದಲ್ಲಿ ಜಮಾಯಿಸಿ ಪೊಲೀಸರ ಸುಪರ್ದಿಯಲ್ಲಿ ಪ್ರತಿಭಟನೆ ನಡೆಸಿದರು. ಅನೇಕ ಪೊಲೀಸ್ ವಾಹನಗಳು ಅಲ್ಲಿದ್ದವು. ಈ ಕುರಿತ ಫೋಟೋಗಳು ಎಲ್ಲೆಡೆ ಹರಿದಾಡಿವೆ. ಪೊಲೀಸರು ವಿದ್ಯಾರ್ಥಿಗಳ ಬೇಡಿಕೆಗಳನ್ನು ಆಲಿಸಲು ಮುಂದಾದರು.

ಗುರುವಾರ ಬೆಳಿಗ್ಗೆಯಿಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪತ್ರಿಕೆಯೊಂದಕ್ಕೆ ಹೇಳಿಕೆ ನೀಡಿರುವ ವಿದ್ಯಾರ್ಥಿಗಳು, ಹರಿ ಪದ್ಮನ್ ಎಂಬ ವ್ಯಕ್ತಿಯನ್ನು ಆರೋಪಿಯನ್ನಾಗಿ ಹೆಸರಿಸಿದರು. ಅಲ್ಲದೆ ವಿದ್ಯಾರ್ಥಿಗಳು ಕಲಾಕ್ಷೇತ್ರ ನಾಲ್ಕು ಸಿಬ್ಬಂದಿಯನ್ನು ಹೆಸರಿಸಿದರು. ಆರೋಪಿ ಕಾಲೇಜು ಸಿಬ್ಬಂದಿ ಹರಿ ಪದ್ಮನ್ ಬೆಳಗಿನ ಪ್ರಾರ್ಥನೆ ವೇಳೆ ಕಾಲೇಜು ಆವರಣಕ್ಕೆ ಆಗಮಿಸಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

Download Eedina App Android / iOS

X