ಕಲಬುರಗಿ | ಶೌಚಾಲಯ, ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಸ್ಲಂ ನಿವಾಸಿಗಳ ಪ್ರತಿಭಟನೆ

Date:

Advertisements

ಶೌಚಾಲಯ, ಕುಡಿಯುವ ನೀರು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಲಬುರಗಿ ನಗರದ ವಾರ್ಡ-2 ಮತ್ತು 53 ರ ವ್ಯಾಪ್ತಿಯಲ್ಲಿ ಬರುವ ರಾಮನಗರ ಭಾಗ-2ರ ಬುದ್ಧ ನಗರ ಸ್ಲಂ ನಿವಾಸಿಗಳು ಖಾಲಿ ಕೊಡ, ಚೊಂಬು ಹಿಡಿದು ಪ್ರತಿಭಟನೆ ನಡೆಸಿದರು.

ಸೋಮವಾರ ನಗರದ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕದಿಂದ ನಡೆದ ಪ್ರತಿಭಟನೆಯಲ್ಲಿ ಮಹಿಳೆಯರು ಕೈಯಲ್ಲಿ ಖಾಲಿ ಕೊಡ, ಚೊಂಬು ಹಿಡಿದು ಜಗತ್ ವೃತ್ತದಿಂದ ಮಹಾನಗರ ಪಾಲಿಕೆಯವರೆಗೆ ಪ್ರತಿಭಟನೆ ನಡೆಸಿ ಪಾಲಿಕೆಯ ಆಯುಕ್ತರಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಸಂಚಾಲಕಿ ರೇಣುಕಾ ಸರಡಗಿ ಮಾತನಾಡಿ, ‘ಕಲಬುರಗಿ ನಗರದ ಬುದ್ದ ನಗರ ಸ್ಲಂ ಮಹಿಳೆಯರಿಗೆ ಹಲವು ವರ್ಷಗಳಿಂದ ಶೌಚಾಲಯ ಇಲ್ಲದೆ ತೊಂದರೆ ಅನುಭವಿಸುತ್ತಿದ್ದು, ಬಯಲು ಶೌಚಾಲಯವೇ ಗತಿ ಎಂಬಂತಾಗಿದೆ. ನಗರದ ಮಹಿಳೆಯರಿಗೆ ಶೌಚಾಲಯ ವ್ಯವಸ್ಥೆ ವ್ಯವಸ್ಥೆ ಕಲ್ಪಿಸದಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಇಲ್ಲಿನ ನಿವಾಸಿಗಳು ಸುಮಾರು ಎರಡ್ಮೂರು ಕಿ.ಮೀ. ದೂರದಿಂದ ಕುಡಿಯುವ ನೀರು ತರಬೇಕಾದ ಸ್ಥಿತಿಯಿದ್ದು, ಇದರಿಂದ ನಿತ್ಯದ ಕೂಲಿ ಕೆಲಸಕ್ಕೆ ತೆರಳುವ ಮಹಿಳೆಯರು ಪರದಾಡುತ್ತಿದ್ದಾರೆ. ಕೂಡಲೇ ಸ್ಲಂ ನಿವಾಸಿಗಳಿಗೆ ಶೌಚಾಲಯ ಮತ್ತು ಕುಡಿಯುವ ನೀರಿನ ಸೌಲಭ್ಯ ಒದಗಿಸಬೇಕು’ ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಅಧ್ಯಕ್ಷೆ ಗೌರಮ್ಮ ಮಾಕಾ, ಕಾರ್ಯದರ್ಶಿ ಶರಣು ಕಣ್ಣಿ, ಸ್ಲಂ ಜನಾಂದೋಲನ ಕರ್ನಾಟಕ ಸಂಘದ ಮುಖಂಡರು, ಸ್ಲಂ ನಿವಾಸಿಗಳು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X