ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿಯಾಗಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಶಶಿಕಾಂತ ಉಡಿಕೇರಿ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ.
ಕುಲಪತಿ ಪ್ರೊ.ದಯಾನಂದ ಅಗಸರ ಅವಧಿ ಕಳೆದ ಜನವರಿಯಲ್ಲಿ ಮುಕ್ತಾಯವಾಗಿತ್ತು. ಎಂಟು ತಿಂಗಳ ಬಳಿಕ ನೂತನ ಕುಲಪತಿ ನೇಮಕವಾಗಿದೆ. ಉಡಿಕೇರಿ ಅವರ ಅವಧಿ ನಾಲ್ಕು ವರ್ಷಗಳಾಗಿರಲಿವೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಉಡಿಕೇರಿ ಅವರು ಬಳ್ಳಾರಿ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವರಾಗಿ (ಮೌಲ್ಯಮಾಪನ) ಕಾರ್ಯನಿರ್ವಹಿಸಿದ್ದಾರೆ.