ಶಿವಮೊಗ್ಗ | ಮಾತೃವಾತ್ಸಲ್ಯ ಆಸ್ಪತ್ರೆಯಲ್ಲಿ ಪೂರ್ಣಾವಧಿ ಸೇವೆಗೆ ; ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಲಭ್ಯ

Date:

Advertisements

ಶಿವಮೊಗ್ಗದ ಖ್ಯಾತ ಹಿರಿಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರುಗಳಾದ ಡಾ. ಗೀತಾ ರವಿ ಹಾಗೂ ಡಾ. ಅಮಿತಾ ಹೆಗ್ಡೆಯವರು ಸುಮಾರು ಮೂವತ್ತೈದು ವರ್ಷಗಳ ಸುದೀರ್ಘ ಅನುಭವವನ್ನು ಹೊಂದಿದ್ದು, 20 ವರ್ಷಗಳಿಂದ ನೋವು ರಹಿತ ಹೆರಿಗೆಯಲ್ಲಿ ವಿಶೇಷ ಪರಿಣಿತರಾಗಿರುತ್ತಾರೆ.

ಅಲ್ಲದೇ ಬಂಜೆತನ ನಿವಾರಣೆ ಹಾಗೂ ಲ್ಯಾಪ್ರೋಸ್ಕೋಪಿಕ್ ತಜ್ಞರಾಗಿ ಸೇವೆ ಸಲ್ಲಿಸಿದ್ದಾರೆ. ಈ ವೈದ್ಯರುಗಳು ಇದೀಗ ಪೂರ್ಣಾವಧಿಯಾಗಿ ಮಾತೃವಾತ್ಸಲ್ಯ ಆಸ್ಪತ್ರೆಯಲ್ಲಿ ಲಭ್ಯವಿರುತ್ತಾರೆ ಎಂದು ಮಾತೃವಾತ್ಸಲ್ಯ ಆಸ್ಪತ್ರೆಯ ನಿರ್ದೇಶಕರಾದ ಡಾ. ಪೃಥ್ವಿ ಬಿ. ಸಿ. ಇವರು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಾತೃವಾತ್ಸಲ್ಯ ಆಸ್ಪತ್ರೆಯಲ್ಲಿ ಯಶಸ್ವಿನಿ ಯೋಜನೆ ಸೇರಿದಂತೆ ಹಲವು ಖಾಸಗಿ ವಿಮಾ ಸೌಲಭ್ಯಗಳು ಕೂಡ ಜಾರಿಯಲ್ಲಿದ್ದು, ಅರ್ಹರು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದರು.

ಮಾತೃವಾತ್ಸಲ್ಯ ಆಸ್ಪತ್ರೆಯಲ್ಲಿ ಅತೀ ಕಡಿಮೆ ದರದಲ್ಲಿ ಶಸ್ತ್ರಚಿಕಿತ್ಸೆ ಹಾಗೂ ಸಹಜ ಹೆರಿಗೆ ಸೌಲಭ್ಯ ಲಭ್ಯವಿದೆ. ಡಾ.ಗೀತಾ ರವಿ ಹಾಗೂ ಡಾ. ಅಮಿತಾ ಹೆಗ್ಡೆ ಇವರುಗಳ ಪಾಲ್ಗೊಳ್ಳುವಿಕೆಯಿಂದಾಗಿ ರೋಗಿಗಳಿಗೆ ಭರವಸೆಯ ಚಿಕಿತ್ಸೆ ಸಲಹೆ ಸಿಗಲಿದೆ ಎಂದರು.

ವಿಶೇಷವಾಗಿ ರೋಗಿಗಳಿಗಾಗಿ ರಿಯಾಯಿತಿಯ “ಮಾತೃವಾತ್ಸಲ್ಯ ಆರೋಗ್ಯ ಕಾರ್ಡ್” ಜಾರಿಗೊಳಿಸಲಾಗಿದ್ದು, ಆಸಕ್ತರು ಆಸ್ಪತ್ರೆಯಲ್ಲಿ ಪಡೆದುಕೊಳ್ಳಬಹುದು ಎಂದು ಮನವಿ ಮಾಡಿದ ಅವರು ಈ ಕಾರ್ಡ್ ಮೂಲಕ ಒಳರೋಗಿ ಹಾಗೂ ಹೆರಿಗೆ ಮತ್ತು ಶಸ್ತ್ರಚಿಕಿತ್ಸೆ ವಿಭಾಗದಲ್ಲಿ ರಿಯಾಯಿತಿ ಪಡೆಯಬಹುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಡಾ. ಗೀತಾ ರವಿ ಹಾಗೂ ಡಾ. ಅಮಿತಾ ಹೆಗ್ಡೆರವರು ತಮ್ಮ ಅನುಭವಗಳನ್ನು ಹಂಚಿಕೊಂಡರು. ಹಾಗೂ ಡಾ. ನಾಗಮಣಿ ಎಂ. ಸಿ. ಹಿರಿಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

Download Eedina App Android / iOS

X