ಮಂಗಳೂರು | ಕುಡುಪು ಗುಂಪು ಹತ್ಯೆ ಪ್ರಕರಣ; ಆರೋಪಿ ರವೀಂದ್ರ ನಾಯ್ಕಗೆ ನಿರೀಕ್ಷಣಾ ಜಾಮೀನು

Date:

Advertisements

ಮಂಗಳೂರು ನಗರದ ಹೊರವಲಯದ ಕುಡುಪು ಬಳಿ ಏ.27ರಂದು ನಡೆದ ಕೇರಳದ ವಯನಾಡಿನ ಮುಹಮ್ಮದ್ ಆಶ್ರಫ್ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರವೀಂದ್ರ ನಾಯ್ಕಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಈಗಾಗಲೇ ಹತ್ಯೆಗೆ ಸಂಬಂಧಿಸಿದಂತೆ ಕುಡುಪು ಮತ್ತು ಸುತ್ತಮುತ್ತಲಿನ ಪರಿಸರದ ಸಚಿನ್ ಟಿ., ದೇವದಾಸ್ ಅಂಚನ್, ಮಂಜುನಾಥ್, ನಟೇಶ್ ಕುಮಾರ್, ಯಾನೆ ಸಂತೋಷ್, ದೀಕ್ಷಿತ್ ಕುಮಾರ್, ವಿವಿಯನ್ ಆಲ್ವಾರಿಸ್, ಶ್ರೀದತ್ತ, ಧನುಷ್, ಕಿಶೋರ್ ಕುಮಾರ್, ರಾಹುಲ್, ಪ್ರದೀಪ್ ಕುಮಾರ್, ಮನೀಷ್ ಶೆಟ್ಟಿ, ಸಾಯಿದೀಪ್, ಸಂದೀಪ್ ಬಸವರಾಜ್, ದೀಕ್ಷಿತ್ ಯಾನೆ ಮುನ್ನ, ಅನಿಲ್, ಯತಿರಾಜ್ ಯಾನೆ ಯತಿನ್, ಆದರ್ಶ್ ಪಂಡಿತ್, ಸಚಿನ್, ಕೆ. ಸುಶಾಂತ್, ಅನಿಲ್ ಕುಮಾರ್ ಸಹಿತ 21 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಈ ಪೈಕಿ 6 ಮಂದಿಗೆ ಜಾಮೀನು ಲಭಿಸಿದೆ. 15 ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

ಉಡುಪಿ | ಉಚ್ಚಿಲ ದಸರಾ : ಇಂದು ವೈಭವದ ಭವ್ಯ ಶೋಭಾ ಯಾತ್ರೆ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀಕ್ಷೇತ್ರ ಉಚ್ಚಿಲದಲ್ಲಿ...

Download Eedina App Android / iOS

X