ಹಿಮಾಚಲ ಪ್ರದೇಶ ಸಂಪೂರ್ಣ ಸಾಕ್ಷರತಾ ರಾಜ್ಯ

Date:

Advertisements

ಹಿಮಾಚಲ ಪ್ರದೇಶದಲ್ಲಿ ಪ್ರತಿಯೊಬ್ಬ ಪ್ರಜೆಯೂ ಸಾಕ್ಷರತೆ ಹೊಂದಿದ್ದಾರೆ. ತ್ರಿಪುರ, ಮಿಜೋರಾಂ, ಗೋವಾ ಹಾಗೂ ಲಡಾಖ್ ನಂತರ ಸಂಪೂರ್ಣ ಸಾಕ್ಷರತೆ ಸಾಧಿಸಿರುವ 5ನೇ ರಾಜ್ಯ ಹಿಮಾಚಲ ಪ್ರದೇಶವಾಗಿದೆ ಎಂದು ಅಲ್ಲಿನ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ವರ್ಚುವಲ್ ಭಾಷಣ ಮಾಡಿದರು. “ರಾಜ್ಯವು ಸಂಪೂರ್ಣ ಸಾಕ್ಷರತೆ ಸಾಧಿಸಿದೆ. ಇದು ಸರ್ಕಾರ, ಸಮಾಜ ಮತ್ತು ಸ್ವಯಂಸೇವಕರ ಸಾಮೂಹಿಕ ಪ್ರಯತ್ನದ ಫಲವಾಗಿದೆ” ಎಂದು ಹೇಳಿದ್ದಾರೆ.

“ಸಾಕ್ಷರತೆ, ಸ್ವಾವಲಂಬಿ ಹಾಗೂ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನವೀಕೃತ ಕ್ರಮಗಳನ್ನು ಅನುಸರಿಸಬೇಕು. ಡಿಜಿಟಲ್ ಯುಗದಲ್ಲಿ ಸಾಕ್ಷರತೆಯನ್ನು ಉತ್ತೇಜಿಸಬೇಕು. ದೇಶಾದ್ಯಂತ ಓದುವುದು, ಬರೆಯುವುದು, ಸಂಖ್ಯಾಶಾಸ್ತ್ರದ ಕಲಿಕಾ ಕೌಶಲ್ಯಗಳನ್ನು ಸಕ್ರಿಯಗೊಳಿಸುವಲ್ಲಿ ಡಿಜಿಟಲ್ ತಂತ್ರಜ್ಞಾನದ ಪ್ರಮುಖ ಪಾತ್ರ ವಹಿಸುತ್ತದೆ” ಎಂದಿದ್ದಾರೆ.

“ಹಿಮಾಚಲ ಪ್ರದೇಶವು ಪರಿಪೂರ್ಣ ಕ್ರಿಯಾತ್ಮಕ ಸಾಕ್ಷರತೆಯನ್ನು ಸಾಧಿಸಿರುವ ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಲ್ಲಿ 5ನೇ ರಾಜ್ಯವಾಗಿದೆ. ತ್ರಿಪುರ, ಮಿಜೋರಾಂ ಮತ್ತು ಗೋವಾ ರಾಜ್ಯಗಳು ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶದ ನಂತರ, ಹಿಮಾಚಲ ಪ್ರದೇಶವು ಸಂಪೂರ್ಣ ಸಾಕ್ಷರತಾ ರಾಜ್ಯವೆಂದು ಘೋಷಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.

“ಸಾಕ್ಷರತೆಯು ಓದು ಮತ್ತು ಬರವಣಿಗೆಯನ್ನು ಮೀರಿದೆ. ಘನತೆ, ಸಬಲೀಕರಣ ಮತ್ತು ಸ್ವಾವಲಂಬನೆಗೆ ಒಂದು ಸಾಧನವಾಗಿದೆ” ಎಂದು ಅವರು ಹೇಳಿದ್ದಾರೆ.

ಭಾರತದ ಸಾಕ್ಷರತಾ ಪ್ರಮಾಣವು 2011ರಲ್ಲಿ 74% ಇತ್ತು. 2023–24ರ ವೇಳೆಗೆ, 80.9%ಗೆ ಏರಿಕೆಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

Download Eedina App Android / iOS

X