ರಾಯಚೂರು | ಬಿಡಾಡಿ ದನಗಳ ಹಾವಳಿ ತಡೆಗೆ ಸಾರ್ವಜನಿಕರ ಆಗ್ರಹ

Date:

Advertisements

ಸಿಂಧನೂರು ನಗರದ ಬೀದಿಗಳಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದೆ. ಮುಖ್ಯ ರಸ್ತೆ ಮೇಲೆ ವಾಸ್ತವ್ಯ ಹೂಡುವ ಬಿಡಾಡಿ ದನಗಳಿಂದ ವಾಹನ ಸವಾರರು, ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ಈ ಬಗ್ಗೆ ನಗರಸಭೆ ಗಮನಕ್ಕೆ ತಂದರೂ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. ದನಗಳ ಹಾವಳಿಗೆ ಕೂಡಲೇ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

“ವಿವಿಧ ಕೆಲಸಗಳಿಗಾಗಿ ತಾಲೂಕಿನ ಜನರು ನಗರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಇದರಿಂದ ವಾಹನಗಳ ಸಂಚಾರ ಕೂಡ ಹೆಚ್ಚಾಗಿದೆ. ಈ ಮಧ್ಯೆ ಬಿಡಾಡಿ ದನಗಳ ಕಾಟವೂ ಮಿತಿ ಮೀರಿದೆ. ನಗರಸಭೆ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯ ಧೋರಣೆ ತೋರುತ್ತಿದ್ದಾರೆ” ಎಂದು ಅಧಿಕಾರಿಗಳ ವಿರುದ್ಧ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಹೋರಾಟಗಾರ ಬಸವರಾಜ್ ಬಾದರ್ಲಿ ಈದಿನ.ಕಾಮ್ ಜೊತೆ ಮಾತನಾಡಿ, “ಸಂಜೆ ವೇಳೆ ಜನದಟ್ಟಣೆ ಹೆಚ್ಚಾಗುತ್ತದೆ. ಇದೇ ಸಂದರ್ಭದಲ್ಲಿ ರಸ್ತೆ ತುಂಬಾ ಬಿಡಾಡಿ ದನಗಳದ್ದೇ ಕಾರುಬಾರು. ದಿನವಿಡೀ ಬೀದಿ, ಬೀದಿ ಸುತ್ತಾಡಿ, ಸಂಜೆ ರಸ್ತೆ ಮಧ್ಯೆದಲ್ಲಿಯೇ ಮಲಗುವ ಬಿಡಾಡಿ ದನಗಳಿಂದ ವಾಹನ ಸಂಚಾರ ಸ್ಥಗಿತವಾಗುತ್ತಿದೆ. ಇದನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಕೂಡ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

Advertisements

“ನಗರಸಭೆ ಅಧಿಕಾರಿಗಳಿಗೆ ಹಲವು ಬಾರಿ ಗಮನಕ್ಕೆ ಬಂದಿದೆ. ಅವರು ಕೂಡ ಆಟೋ ಮೈಕ್ ಮೂಲಕ ಜನರಿಗೆ ಮಾಹಿತಿ ನೀಡಿದರು .ಆದರೂ ದನಗಳ ಮಾಲೀಕರು ಕ್ಯಾರೇ ಎನ್ನುತ್ತಿದ್ದಾರೆ . ಮಾರುಕಟ್ಟೆಯಲ್ಲಿ ಬೀಡು ಬಿಟ್ಟಿ ಬಿಡಾಡಿ ದನಗಳು ತರಕಾರಿ, ಹಣ್ಣು ತಿಂದು ಹಾಳುಮಾಡುತ್ತಿವೆ. ಇನ್ನು ಬುಟ್ಟಿ ವ್ಯಾಪಾರಿಗಳಂತೂ ಬೀಡಾಡಿ ದಿನಗಳಿಂದ ರೋಸಿ ಹೋಗಿದ್ದಾರೆ. ವ್ಯಾಪಾರಿಗಳು ಅನುಭವಿಸುವ ನಷ್ಟದ ಬಗ್ಗೆ ಯಾರೊಬ್ಬ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕೂಡಲೇ ನಗರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡು ಬೀಡಾಡಿ ದನಗಳ ತಿರುಗಾಟಕ್ಕೆ ಕಡಿವಾಣ ಹಾಕಬೇಕು” ಎಂದು ವ್ಯಾಪಾರಸ್ತರು ಆಗ್ರಹಿಸಿದರು.

ಸಿಂಧನೂರು ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು ಈದಿನ.ಕಾಮ್ ಜೊತೆ ಮಾತನಾಡಿ, “ನಗರದಲ್ಲಿ ಬೀಡಾಡಿ ದನಗಳ ಹಾವಳಿ ಕುರಿತು ಗಮನಕ್ಕೆ ಬಂದಿದೆ, ಬೀಡಾಡಿ ದನ ಅಥವಾ ಬೇರೆ ಯಾವುದೇ ದನಗಳು ಇರಲಿ ಅವುಗಳನ್ನು ವಿಲೇವಾರಿ ಮಾಡಿ ಗೋಶಾಲೆಗೆ ಸೇರಿಸಲು ಹೊಸ ಉಪ ಕಾಯ್ದೆ ತರಲಾಗುತ್ತಿದೆ. ಎರಡು ವಾರದೊಳಗೆ ಈ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X