ಗುಂಡ್ಲುಪೇಟೆ | ಹುಲಿ ಪತ್ತೆಗೆ ಬೋನಿಟ್ಟ ಅರಣ್ಯ ಇಲಾಖೆ; ಸಿಬ್ಬಂದಿಯನ್ನೇ ಕೂಡಿಟ್ಟ ಗ್ರಾಮಸ್ಥರು

Date:

Advertisements

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕು, ಬೊಮ್ಮಲಾಪುರ ಗ್ರಾಮ ವ್ಯಾಪ್ತಿಯಲ್ಲಿ ಹುಲಿ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಹುಲಿ ಹಿಡಿಯಲು ಬೋನಿರಿಸಿದ್ದರು. ಇದುವರೆಗೆ ಹುಲಿ ಸೆರೆ ಹಿಡಿಯಲಿಲ್ಲ ಎನ್ನುವ ಕಾರಣಕ್ಕೆ ಗ್ರಾಮಸ್ಥರು ಅರಣ್ಯ ಸಿಬ್ಬಂದಿಗಳನ್ನು ಬೋನಿನಲ್ಲಿ ಕೂಡಿಟ್ಟ ಘಟನೆ ವರದಿಯಾಗಿದೆ.

ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಹುಲಿ ಉಪಟಳ ಹೆಚ್ಚಿದೆ. ಕಾಡಂಚಿನ ಗ್ರಾಮಗಳಲ್ಲಿ ಆಗಿಂದಾಗ್ಗೆ ಹುಲಿ ಕಾಣಿಸಿಕೊಳ್ಳುತ್ತಿರುವುದು ಗ್ರಾಮಸ್ಥರಿಗೆ ಭಯದ ವಾತಾವರಣ ಸೃಷ್ಟಿಸಿದೆ. ಇದೇ ಕಾರಣಕ್ಕೆ ಅರಣ್ಯ ಅಧಿಕಾರಿಗಳ ಗಮನಕ್ಕೆ ತಂದು ಹುಲಿ ಹಿಡಿಯುವಂತೆ ಒತ್ತಾಯಿಸಿದ್ದರು.

ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಇಲಾಖೆಯವರು ಬೊಮ್ಮಲಾಪುರ ಗ್ರಾಮದಲ್ಲಿ ಹುಲಿ ಹಿಡಿಯಲು ಬೋನು ಇರಿಸಿದ್ದರು. ಆದರೇ, ಹುಲಿ ಬೋನಿಗೆ ಬಿದ್ದಿರಲಿಲ್ಲ. ಇದರಿಂದ ಹತಾಶರಾಗಿದ್ದ ಗ್ರಾಮಸ್ಥರು ಗ್ರಾಮಕ್ಕೆ ಬಂದ ಅರಣ್ಯ ಸಿಬ್ಬಂದಿಗಳನ್ನು ಹುಲಿಗಿಟ್ಟ ಬೋನಿನಲ್ಲಿ ಕೂಡಿ ಹಾಕಿದ್ದಾರೆ.

ಡಿ ಆರ್ ಎಫ್ ಓ ಶಿವಕುಮಾರ್ ಅವರು ಈದಿನ.ಕಾಮ್ ಜೊತೆ ಮಾತನಾಡಿ ಬೊಮ್ಮಲಾಪುರ ಗ್ರಾಮದಲ್ಲಿ ಗ್ರಾಮಸ್ಥರು ಅರಣ್ಯ ಸಿಬ್ಬಂದಿಗಳನ್ನು ಹುಲಿ ಬೋನಿನಲ್ಲಿ ಕೊಡಿಟ್ಟಿದ್ದು ವಿಷಾಧನಿಯ. ಅರಣ್ಯ ಇಲಾಖೆ ಗ್ರಾಮಸ್ಥರ ಒತ್ತಾಯದ ಅನುಸಾರ ಹತ್ತು ಕಡೆ ಸಿಸಿ ಟಿವಿ ಇರಿಸಿ ಹುಲಿ ಪತ್ತೆಗೆ ಪ್ರಯತ್ನಿಸಲಾಗುತ್ತಿದೆ. ಅದಲ್ಲದೇ, ದ್ರೋಣ್ ಮೂಲಕವು ಪತ್ತೇಗಾಗಿ ಪ್ರಯತ್ನಿಸುತ್ತಿದ್ದು ಇದುವರೆಗೆ ಹುಲಿ ಕಂಡು ಬಂದಿಲ್ಲ. ಪ್ರತಿ ದಿನ ಅಲ್ಲದಿದ್ದರೂ ಹುಲಿ ಕಂಡು ಬಂದ ಮಾಹಿತಿ ಅನುಸರಿಸಿ ಕೂಂಬಿಂಗ್ ನಡೆಸಲಾಗುತ್ತಿದ್ದರು ಹುಲಿ ಪತ್ತೆಯಾಗಿಲ್ಲ.

ವಿಡಿಯೋ ವೀಕ್ಷಿಸಿ : https://x.com/eedinanews/status/1965349342564524524?t=9SsKvJq-EfWZ9jxVeVPdEg&s=19

ಇಂದು ಸಹ ಆನೆ ಕರಿಸಲಾಗಿತ್ತು. ಆದರೇ, ಗ್ರಾಮಸ್ಥರು ಗ್ರಾಮಕ್ಕೆ ತೆರಳಿದ್ದ ಅರಣ್ಯ ಇಲಾಖೆ ಸಿಬ್ಬಂದಿಯವರನ್ನೆಲ್ಲ ಅದೇ ಬೋನಿನಲ್ಲಿ ಕೂಡಿ ಹಾಕಿದ್ದು ಸರಿಯಲ್ಲ. ಮೇಲಾಧಿಕಾರಿಗಳ ಜೊತೆ ಚರ್ಚಿಸಿ ಪ್ರಕರಣದ ಕುರಿತಾಗಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X