ಬೀದರ್‌ | ಕಾರಂಜಾ ಕಾಲುವೆಯಲ್ಲಿ ಬಿದ್ದು ಬಾಲಕ ಸಾವು

Date:

Advertisements

ಭಾಲ್ಕಿ ತಾಲ್ಲೂಕಿನ ಹುಣಜಿ (ಕೆ) ಗ್ರಾಮ ಸಮೀಪದಲ್ಲಿ ತುಂಬಿ ಹರಿಯುತ್ತಿರುವ ಕಾರಂಜಾ ಜಲಾಶಯದ ಕಾಲುವೆಯಲ್ಲಿ ಬಿದ್ದು ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

ಹುಣಜಿ(ಕೆ) ಗ್ರಾಮದ ಹರೀಶ ರಾಜಕುಮಾರ ಮಾನಕರ್ (16) ಮೃತ ಬಾಲಕ. ಬೆಳಿಗ್ಗೆ ಹರೀಶ ಮನೆಯಿಂದ ಹೊಲಕ್ಕೆ ಹೋಗಿ ಕೆಲಹೊತ್ತು ಕೆಲಸ ಮಾಡಿದ್ದಾನೆ. ಬಳಿಕ ಶೌಚಾಲಯಕ್ಕೆ ಹೋಗಿ ಬರುವೆ ಎಂದು ಹೇಳಿ ಹೋಗಿ ಕಾಲುವೆಯಲ್ಲಿ ಬಿದ್ದಿದ್ದಾನೆ. ಮರಳಿ ಬರಲಿಲ್ಲ ಎಂದು ಗಾಬರಿಗೊಂಡ ಪೋಷಕರು ಎಲ್ಲೆಡೆ ಹುಡುಕಾಡಿದರೂ ಮಾಹಿತಿ ಸಿಗಲಿಲ್ಲ. ಆತಂಕಗೊಂಡ ಪಾಲಕರು ಧನ್ನೂರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಮರುದಿನ ಬೆಳಿಗ್ಗೆ ಹರೀಶ ಶವ ಕಾಲುವೆಯಲ್ಲಿ ಪತ್ತೆಯಾಗಿದೆ. ಕೈಕಾಲು ತೊಳೆದುಕೊಳ್ಳುವುದಕ್ಕಾಗಿ ಕಾಲುವೆ ಬಳಿ ಹೋದಾಗ ಆಯತಪ್ಪಿ ಒಳಗೆ ಬಿದ್ದು ನೀರಿನ ರಭಸದಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟ ಶಂಕೆ ವ್ಯಕ್ತವಾಗಿದೆ. ಧನ್ನೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌

ಕಳೆದ ಮೂರು ತಿಂಗಳ ಹಿಂದೆ ಎಸ್‌ಎಸ್‌ಎಲ್‌ಸಿ ಪೂರೈಸಿದ ಹರೀಶನ ಜನ್ಮದಿನ ಸೆ.8ರಂದು ಇತ್ತು. ನಾಳೆ ನನ್ನ ಜನ್ಮದಿನ ಇದೆ ಆಚರಿಸೋಣ ಎಂದು ಎಲ್ಲರಿಗೂ ಹೇಳಿದನಂತೆ. ಆದರೆ, ಜನ್ಮದಿನ ಆಚರಿಸಿಕೊಳ್ಳಬೇಕಾದ ಹರೀಶ ಅಂದೇ ಶವವಾಗಿ ಪತ್ತೆಯಾಗಿದ್ದಾನೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಆರೋಪ : ಇಬ್ಬರು ಪಿಡಿಒ ಅಮಾನತು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X