ಬೆಳಗಾವಿ : ಶಾಲಾ ಕೊಠಡಿ ನಿರ್ಮಾಣಕ್ಕೆ ಶಾಸಕರಿಂದ ಚಾಲನೆ

Date:

Advertisements

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಎರಡು ಶಾಲಾ ಕೊಠಡಿಗಳ ನಿರ್ಮಾಣಕ್ಕಾಗಿ ಭೂಮಿ ಪೂಜೆ ಕಾರ್ಯಕ್ರಮವನ್ನು ಶಾಸಕ ಅಶೋಕ ಪಟ್ಟಣ ಅವರು ನೆರವೇರಿಸಿದರು.

ಅಂದಾಜು ಮೊತ್ತ 24 ಲಕ್ಷ ರೂ. ಹಾಗೂ 14.45 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಎರಡು ಶಾಲಾ ಕೊಠಡಿಗಳ ನಿರಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅಶೋಕ ಪಟ್ಟಣ ಅವರು, “ಶಾಲೆಗೆ ಅಗತ್ಯವಿರುವ ಗೇಟ್‌ ನಿರ್ಮಾಣ ಹಾಗೂ ಇತ್ತೀಚೆಗೆ ನಿರ್ಮಿಸಲಾದ ಕಾರ್ಯಕ್ರಮ ಭವನಕ್ಕೆ ಮೆಟ್ಟಿಲುಗಳನ್ನು ಕೂಡ ನಿರ್ಮಿಸಿ ಕೊಡಲಾಗುತ್ತದೆ,” ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ (SDMC) ಅಧ್ಯಕ್ಷರು, ಸದಸ್ಯರು, ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಾಲಾಪೂರ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

ಶಿಕ್ಷಕರಿಂದ ಶಾಲಾ ಅಭಿವೃದ್ಧಿ ಕಾರ್ಯ

ಸಾಲಾಪೂರ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಂಭಾಗದಲ್ಲಿ ಕಲ್ಲುಗಳು ಹಾಗೂ ಗಿಡಗಂಟಿಗಳು ಬೆಳೆದು, ವಿಧ್ಯಾರ್ಥಿಗಳು ಪ್ರಾರ್ಥನೆ ಮಾಡಲು ಮತ್ತು ಆಟವಾಡಲು ತೊಂದರೆ ಅನುಭವಿಸುತ್ತಿದ್ದರು. ಈ ಪರಿಸ್ಥಿತಿಯನ್ನು ಗಮನಿಸಿದ ಶಿಕ್ಷಕರು ಗ್ರಾಮಸ್ಥರ ಸಹಕಾರದೊಂದಿಗೆ , ಸ್ವಂತ ಹಣದಲ್ಲಿ ಸುಮಾರು ₹35,000ರಿಂದ ₹40,000 ವೆಚ್ಚ ಮಾಡಿ ಜೆಸಿಬಿ ಮೂಲಕ ಮೈದಾನವನ್ನು ಸಮತಟ್ಟುಗೊಳಿಸಿದ್ದಾರೆ.

ಈ ಕಾರ್ಯಕ್ಕೆ ಗ್ರಾಮಸ್ಥರೂ ಕೈಜೋಡಿಸಿದ್ದು, ಈಗ ಶಾಲಾ ಮೈದಾನವು ಮಕ್ಕಳಿಗೆ ಓಡಾಡಲು, ಕ್ರೀಡೆಗಳಲ್ಲಿ ಪಾಲ್ಗೊಳ್ಳಲು ಹಾಗೂ ಪ್ರಾರ್ಥನೆ ಮಾಡಲು ಸುಗಮವಾಗಿದೆ.

ಶಿಕ್ಷಕರ ಸೇವಾಭಾವನೆಗೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದು, ಅವರ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ.

ee dina logo with tagline copy
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಜಾರಕಿಹೊಳಿ ಸಹೋದರರಿಂದ ಹುಕ್ಕೇರಿಯಲ್ಲಿ ಮದ್ಯ–ಮಾಂಸ ಬಾಡೂಟ : ರಮೇಶ ಕತ್ತಿ ಆರೋಪ

ಬೆಳಗಾವಿ ಜಿಲ್ಲೆಯ ಸಹಕಾರಿ ಸಂಘಗಳ ಚುನಾವಣಾ ಹಿನ್ನಲೆಯಲ್ಲಿ ಹುಕ್ಕೇರಿ ತಾಲೂಕಿನ ಹಲವು...

ಬೆಳಗಾವಿ : ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬದಲಾವಣೆ ಪ್ರಿಂಟ್ ಮಿಸ್ಟೇಕ್ ? : ಶಾಸಕ ರಾಜು ಕಾಗೆ

ಬೆಳಗಾವಿ ಜಿಲ್ಲೆಯ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಶಾಸಕ ರಾಜು ಕಾಗೆ...

ಬೆಳಗಾವಿ : ಸಭೆಯಲ್ಲಿ ಕಣ್ಣೀರು ಹಾಕಿದ ಮಾಜಿ ಸಂಸದ ರಮೇಶ ಕತ್ತಿ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ದಿವಂಗತ ಮಾಜಿ ಸಚಿವ...

ಬೆಳಗಾವಿ : ನಗರದಲ್ಲಿ ರೈತರ ಪ್ರತಿಭಟನೆ ಎಫ್‌ಐಆರ್ ದಾಖಲು

ಜೈ ಕಿಸಾನ್ ತರಕಾರಿ ಮಾರುಕಟ್ಟೆ ಓಪನ್ ಮಾಡುವಂತೆ ಆಗ್ರಹಿಸಿ ಚೆನ್ನಮ್ಮ ವೃತ್ತದಲ್ಲಿ...

Download Eedina App Android / iOS

X