ಸಹಜ ಸ್ಥಿತಿಗೆ ಮರಳಿದ ಮದ್ದೂರು: ಅಂಗಡಿ ಮುಂಗಟ್ಟು ಓಪನ್‌, ವ್ಯಾಪಾರ ವಹಿವಾಟು ಆರಂಭ

Date:

Advertisements

ಮಂಡ್ಯ ಜಿಲ್ಲೆಯ ಮದ್ದೂರು ನಗರದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಹಿನ್ನೆಲೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಇದೀಗ ಮದ್ದೂರು ಸಹಜ ಸ್ಥಿತಿಯತ್ತ ಮರಳಿದ್ದು, ವ್ಯಾಪಾರ ವಹಿವಾಟು ನಡೆಸಲಾಗುತ್ತಿದೆ.

ಮದ್ದೂರು ನಗರದಲ್ಲಿ ವರ್ತಕರು ಅಂಗಡಿ-ಮುಂಗಟ್ಟುಗಳನ್ನು ತೆರೆಯುತ್ತಿದ್ದು, ಮೂರು ದಿನದ ಬಳಿಕ ಜನಜೀವನ ಸಹಜ ಸ್ಥಿತಿಗೆ ಮರಳಿದೆ. ಆದರೆ ಮದ್ದೂರಿನಲ್ಲಿ ಪೊಲೀಸ್‌ ಬಂದೋ ಬಸ್ತ್‌ ಮುಂದುವರೆದಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ ಆರೋಪ: ಸಿ ಟಿ ರವಿ ವಿರುದ್ಧ ಸುವೋ ಮೋಟೋ ಪ್ರಕರಣ ದಾಖಲು

ಭಾನುವಾರ ರಾತ್ರಿ ಮದ್ದೂರಿನ ರಾಮ್‌ ರಹೀಮ್‌ ನಗರ ಮಸೀದಿ ಮುಂಭಾಗದ ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಬಳಿಕ ಸೋಮವಾರ ಹಿಂದೂಪರ ಸಂಘಟನೆಗಳು ಬೃಹತ್‌ ಪ್ರತಿಭಟನೆ ನಡೆಸಿ ಘಟನೆಯನ್ನು ಖಂಡಿಸಿದ್ದವು. ಬುಧವಾರ ಬಿಜೆಪಿ ನಾಯಕರು ಸೇರಿದಂತೆ ಮದ್ದೂರಿನ ಜನತೆ ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆ ನಡೆಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

Download Eedina App Android / iOS

X