ಕಲಬುರಗಿ | ರೇವಣಸಿದ್ದೇಶ್ವರ ಅಗ್ರೋ ಏಜೆನ್ಸಿ ವಿರುದ್ಧ ಕ್ರಮಕ್ಕೆ ರೈತ ಸಂಘ ಆಗ್ರಹ

Date:

Advertisements

ರೈತರಿಗೆ ಹೆಚ್ಚಿನ ದರದಲ್ಲಿ ಬೀಜ ವಿತರಿಸಿ ವಂಚಿಸಿದ ಆಳಂದ ತಾಲ್ಲೂಕಿನ ರೇವಣಸಿದ್ದೇಶ್ವರ ಅಗ್ರೋ ಏಜೆನ್ಸಿ ಕೇಂದ್ರದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ.

ಈ ಕುರಿತು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾಧ್ಯಕ್ಷ ನಾಗೇಂದ್ರಪ್ಪ ತಾಂಬೆ ಗುರುವಾರ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸಮದ್ ಪಟೇಲ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

‘ರೇವಣಸಿದ್ದೇಶ್ವರ ಆಗ್ರೋ ಏಜೆನ್ಸಿಯಲ್ಲಿ ರೈತರಿಗೆ ಬೇಕಾದಂತಹ ಯೂರಿಯಾ, ಡಿಎಪಿಯನ್ನು ಮೂಲ ದರಕ್ಕಿಂತ ಅಧಿಕ ದರದಲ್ಲಿ ಮಾರಾಟ ಮಾಡಿ ರೈತರಿಗೆ ವಂಚಿಸಿದ್ದಾರೆ. ಈ ಬಗ್ಗೆ ಸಾಕ್ಷ್ಯಧಾರ ವಿಡಿಯೊ ಸೆರೆ ಹಿಡಿಯಲಾಗಿದೆ. ಹೀಗಾಗಿ ಕೂಡಲೇ ರೇವಣಸಿದ್ದೇಶ್ವರ ಅಗ್ರೋ ಏಜೆನ್ಸಿ ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

‘ರೈತ ಸಂಘಟನೆಯು ಕ್ರಮ ಜರುಗಿಸಲು ಮೂರು ದಿನಗಳ ಕಾಲಾವಕಾಶ ನೀಡುತ್ತಿದೆ. ಒಂದು ವೇಳೆ ರೇವಣಸಿದ್ದೇಶ್ವರ ಅಗ್ರೋ ಏಜೆನ್ಸಿ ಸ್ಟೇಷನ್ ಗಣಗಾಪುರ ಅವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ರೈತ ಸಂಘಟನೆಯಿಂದ ಕೃಷಿ ಇಲಾಖೆ ಕಚೇರಿ ಎದುರು ಹೋರಾಟ ಮಾಡಲಾಗುವುದುʼ ಎಂದರು.

ಇದನ್ನೂ ಓದಿ : ಬೀದರ್‌ | ವರದಕ್ಷಿಣೆ ಕಿರುಕುಳ ಆರೋಪ : ಗಂಡ, ಮಾವ, ಅತ್ತೆ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X