ಉಡುಪಿ | ದ್ವೇಷ ಭಾಷಣ, ಹಿಂದು ಐಕ್ಯ ವೇದಿಕೆಯ ರವೀಶ ತಂತ್ರಿ ವಿರುದ್ಧ ಪ್ರಕರಣ ದಾಖಲು

Date:

Advertisements

ಕಾರ್ಕಳದಲ್ಲಿ ನಿನ್ನೆ ದಿನ ಶ್ರೀ ಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆ ವತಿಯಿಂದ ನಡೆದ ಜನಾಗ್ರಹ ಸಭೆಯಲ್ಲಿ ದ್ವೇಷ ಭಾಷಣ ಮಾಡಿದ ಅರೋಪದ ಮೇರೆಗೆ ಹಿಂದು ಐಕ್ಯ ವೇದಿಕೆ ಕೇರಳ ಇದರ ರವೀಶ ತಂತ್ರಿ ಕುಂಟಾರು ವಿರುದ್ಧ ಪ್ರಕರಣ ದಾಖಲಾಗಿದೆ.

ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕುಂದೂರು ಗ್ರಾಮದ ಕುಕ್ಕುಂದೂರು ಗ್ರಾಮ ಪಂಚಾಯತ್‌ ಎದುರುಗಡೆ ಮೈದಾನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆ ಕಾರ್ಕಳ ತಾಲೂಕು, ಉಡುಪಿ ಜಿಲ್ಲೆ ಇವರ ವತಿಯಿಂದ ಜನಾಗ್ರಹ ಸಭೆ ನಡೆದಿದ್ದು, ಈ ಸಭೆಯಲ್ಲಿ ರವೀಶ ತಂತ್ರಿ ಕುಂಟಾರು ಹಿಂದೂ ಐಕ್ಯ ವೇದಿಕೆ ಕೇರಳ ಇವರು ದಿಕ್ಸೂಚಿ ಭಾಷಣಗಾರರಾಗಿ ಭಾಗವಹಿಸಿದ್ದರು.

ಇವರು ಸಭೆಯಲ್ಲಿ ಸಾರ್ವಜನಿರನ್ನು ಉದ್ದೇಶಿಸಿ ಉದ್ದೇಶಪೂರ್ವಕವಾಗಿ ಶಾಂತಿಭಂಗ ಕೃತ್ಯದಲ್ಲಿ ತೊಡಗಿ ದ್ವೇಷಾಸೂಯೆಗೆ ವೈಮನಸಿಗೆ, ಶತ್ರುತ್ವಕ್ಕೆ ಪ್ರಚೋದನೆ ನೀಡಿ ದ್ವೇಷಪೂರಿತ ಭಾಷಣ ಮಾಡಿರುತ್ತಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣಾ ಅಪರಾದ ಕ್ರಮಾಂಕ : 114/2025. ಕಲಂ. 353(2) 196(1)(a) BNS 2023ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X