ಬೀದರ್‌ | ತುರ್ತು ನೆರವಿನ ಸಂಖ್ಯೆಗಳ ಸ್ಟಿಕ್ಕರ್ ಬಿಡುಗಡೆ

Date:

Advertisements

ಬೀದರ್ ಬೆಟರ್‍ಮೆಂಟ್ ಫೌಂಡೇಷನ್‍ನಿಂದ ಹೊರ ತರಲಾದ ತುರ್ತು ನೆರವಿನ ಸಂಖ್ಯೆಗಳ ಸ್ಟಿಕ್ಕರ್ ಅನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ನಗರದಲ್ಲಿ ಗುರುವಾರ ಬಿಡುಗಡೆ ಮಾಡಿದರು.

ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ನೆರವಾಗುವ ದಿಸೆಯಲ್ಲಿ ಫೌಂಡೇಷನ್ ತುರ್ತು ಸಂಖ್ಯೆಗಳ ಸ್ಟಿಕ್ಕರ್ ಹೊರ ತಂದಿರುವುದು ಪ್ರಶಂಸನೀಯ ಎಂದು ಹೇಳಿದರು.

ಫೌಂಡೇಷನ್ ಅಧ್ಯಕ್ಷ ಡಾ.ಅಬ್ದುಲ್ ಖದೀರ್ ಮಾತನಾಡಿ, ʼಫೌಂಡೇಷನ್‍ನಿಂದ ಮನೆ-ಮನೆಗೆ ಅಂಟಿಸಲು ತುರ್ತು ನೆರವಿನ ಸಂಖ್ಯೆಗಳ ಒಟ್ಟು 10 ಸಾವಿರ ಸ್ಟಿಕ್ಕರ್ ವಿತರಿಸಲಾಗುತ್ತಿದೆ. ಸ್ಟಿಕ್ಕರ್ ಪೊಲೀಸ್ ಠಾಣೆ, ಆಸ್ಪತ್ರೆ, ಆಂಬುಲನ್ಸ್, ಮಹಿಳಾ ಸಹಾಯವಾಣಿ, ರಾಷ್ಟ್ರೀಯ ಟೆಲಿಮೆಂಟಲ್ ಹೆಲ್ತ್ ಕಾರ್ಯಕ್ರಮ, ಜೆಸ್ಕಾಂ, ಏರ್‍ಪೋರ್ಟ್, ಮಹಾನಗರ ಪಾಲಿಕೆ ಸೇರಿದಂತೆ ಮಹತ್ವದ ದೂರವಾಣಿ ಸಂಖ್ಯೆಗಳನ್ನು ಒಳಗೊಂಡಿದೆʼ ಎಂದು ತಿಳಿಸಿದರು.

ʼತುರ್ತು ಸಂಖ್ಯೆಗಳು ಕಳ್ಳತನ, ಅಪಘಾತ, ಅನಾರೋಗ್ಯ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಸಹಕಾರಿಯಾಗಲಿವೆ. ಕಾರಣ, ಸಾರ್ವಜನಿಕರು ಮನೆಯ ಗೋಡೆ, ಬಾಗಿಲು ಮತ್ತಿತರ ಗಮನ ಸೆಳೆಯುವ ಸ್ಥಳಗಳಲ್ಲಿ ಸ್ಟಿಕ್ಕರ್ ಅಂಟಿಸಬೇಕುʼ ಎಂದು ಕೋರಿದರು.

ಇದೇ ವೇಳೆ ಬೀದರ್ ಬೆಟರ್‍ಮೆಂಟ್ ಫೌಂಡೇಷನ್ ವತಿಯಿಂದ ಕೈಗೊಳ್ಳಲಾದ ವಿವಿಧ ಸಾಮಾಜಿಕ ಕಾರ್ಯಗಳ ಸಂಕ್ಷಿಪ್ತ ವರದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಸಲ್ಲಿಸಲಾಯಿತು.

ಇದನ್ನೂ ಓದಿ : ಬೀದರ್‌ | ವರದಕ್ಷಿಣೆ ಕಿರುಕುಳ ಆರೋಪ : ಗಂಡ, ಮಾವ, ಅತ್ತೆ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್

ಫೌಂಡೇಷನ್‍ನ ಡಾ.ಮಕ್ಸೂದ್ ಚಂದಾ, ಮುಹಮ್ಮದ್ ರಫಿಕ್ ಅಹಮ್ಮದ್, ಮುಹಮ್ಮದ್ ಹುಸೇನಿ, ಮುಕ್ತಾರ್ ಅಹಮ್ಮದ್, ಹಾಮೇದ್ ಖಾದ್ರಿ, ತಾಹ ಕಲೀಮುಲ್ಲಾ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X