ಬೆಳಗಾವಿ | ಡಿಸಿಸಿ ಬ್ಯಾಂಕ್ ಚುನಾವಣೆ; ಗ್ರಾಮ ದೇವತೆ ಮೇಲೆ ಆಣೆ ಪ್ರಮಾಣ

Date:

Advertisements

ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ (ಬಿಡಿಸಿಸಿ) ಚುನಾವಣೆ ರಾಜಕೀಯ ಧ್ರುವೀಕರಣಕ್ಕೆ ನಾಂದಿ ಹಾಡಿದೆ. ಮೂರು ದಶಕಗಳ ಕಾಲ ಬ್ಯಾಂಕಿನ ಮೇಲೆ ಪಾರಮ್ಯ ಸಾಧಿಸಿದ್ದ ಕತ್ತಿ ಕುಟುಂಬವನ್ನು ದೂರ ಇಡಲು ಜಾರಕಿಹೊಳಿ ಸಹೋದರರು ಇನ್ನಿಲ್ಲದ ಅಸ್ತ್ರಗಳನ್ನು ಪ್ರಯೋಗಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಕತ್ತಿ ಕುಟುಂಬದ ಆಪ್ತರು ‘ಗ್ರಾಮದೇವಿ ಮೇಲೆ ಆಣೆ’ ಮಾಡಲು ತಂತ್ರ ರೂಪಿಸಿದ್ದಾರೆ.

ಅಕ್ಟೋಬರ್ 19ರಂದು ಈ ಬ್ಯಾಂಕ್ ಚುನಾವಣೆ ನಿಗದಿಯಾಗಿದೆ. ಆದರೆ, ತಿಂಗಳ ಹಿಂದಿನಿಂದಲೇ ಇನ್ನಿಲ್ಲದ ಸರ್ಕಸ್ ಆರಂಭವಾಗಿವೆ. ಇಷ್ಟು ವರ್ಷ ಬ್ಯಾಂಕಿನತ್ತ ತಲೆ ಹಾಕದ ಜಾರಕಿಹೊಳಿ ಸಹೋದರರು ಈಗ ಶತಾಯ ಗತಾಯ ಹಿಡಿತ ಸಾಧಿಸಲು ಮುಂದಾಗಿದ್ದಾರೆ. ಆದರೆ, ತಮ್ಮ ನಾಯಕನನ್ನು ಬಿಟ್ಟುಕೊಡಲು ಒಲ್ಲದ ಹುಕ್ಕೇರಿ ತಾಲೂಕಿನ ಹಲವರು ಆಣೆ ಪ್ರಮಾಣದ ಮೊರೆ ಹೋಗಿದ್ದಾರೆ. ಮೇಲಾಗಿ, ಇದರ ವಿಡಿಯೊ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲೂ ಹರಿಬಿಟ್ಟಿದ್ದಾರೆ. ಚುನಾವಣೆಯಲ್ಲಿ ಕತ್ತಿ ಕುಟುಂಬ ಹಾಗೂ ಜಾರಕಿಹೊಳಿ ಸಹೋದರರ ಹಗ್ಗ ಜಗ್ಗಾಟದಲ್ಲಿ ಗೆಲ್ಲುವವರಾರೆಂದು ಕಾದು ನೋಡಬೇಕಿದೆ.

ಇದನ್ನೂ ಓದಿ: ಬೆಳಗಾವಿ | ಧರ್ಮಾಂದತೆಯ ‘ದ್ವೇಷ’ದ ವಿಷವನ್ನು ಸೋಲಿಸಿದ ಮುಸ್ಲಿಮ್ ಶಿಕ್ಷಕನ ‘ಪ್ರೀತಿ’

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X