ಸೌಜನ್ಯ ಕೇಸ್‌ ಬಗ್ಗೆ ಅಪಪ್ರಚಾರ; ಸ್ನೇಹಮಯಿ ಕೃಷ್ಣ ವಿರುದ್ಧ ದೂರು

Date:

Advertisements
"ಸೌಜನ್ಯ ಕೊಲೆಗಾರರ ಪತ್ತೆಗೆ ನಡೆಸುತ್ತಿರುವ ಹೋರಾಟದ ದಾರಿ ತಪ್ಪಿಸುವ ದುರುದ್ದೇಶದಿಂದ ಸೌಜನ್ಯ ಕೊಲೆಗಾರರು ಸ್ನೇಹಮಯಿಯನ್ನು ಮೈಸೂರಿನಿಂದ ಕರೆತಂದಿರುವ ಸಂಶಯವಿರುತ್ತದೆ” ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಧರ್ಮಸ್ಥಳದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಪ್ರಚಾರ ಮಾಡುತ್ತಿರುವ ಸ್ನೇಹಮಯಿ ಕೃಷ್ಣ ವಿರುದ್ಧ ಪ್ರಕರಣ ದಾಖಲಿಸಿ, ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ಬೆಳ್ತಂಗಡಿ ಸರ್ಕಲ್ ಇನ್‌ಸ್ಪೆಕ್ಟರ್‌ಗೆ ದೂರು ನೀಡಲಾಗಿದೆ.

ಬೆಳ್ತಂಗಡಿ ತಾಲ್ಲೂಕಿನ ಇಂದಬೆಟ್ಟು ನಿವಾಸಿ, ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ವೆಂಕಪ್ಪ ಕೋಟ್ಯಾನ್ ದೂರು ದಾಖಲಿಸಿದ್ದಾರೆ.

ಮೈಸೂರಿನ ನಿವಾಸಿಯಾಗಿರುವ ಸ್ನೇಹಮಯಿಯನ್ನು ‘ಸೌಜನ್ಯ ಕೊಲೆಗಾರರೇ ಧರ್ಮಸ್ಥಳಕ್ಕೆ ಕರೆಸಿ’ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

“ಉಜಿರೆ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಸೌಜನ್ಯ, ಧರ್ಮಸ್ಥಳದ ಸ್ನಾನಘಟ್ಟದ ಬಳಿ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿರುವಾಗ ಅಪಹರಣಕ್ಕೆ ಒಳಗಾಗಿದ್ದರು. ಆಕೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿ 13 ವರ್ಷಗಳಾಯಿತು. ನೈಜ ಆರೋಪಿಗಳ ಪತ್ತೆಗಾಗಿ ಸೌಜನ್ಯ ಕುಟುಂಬದವರೊಂದಿಗೆ ಹೋರಾಟ ಮಾಡುತ್ತಿದ್ದೇವೆ. ತನಿಖಾ ಸಂಸ್ಥೆಗಳಿಂದ ಬಂಧನಕ್ಕೆ ಒಳಪಟ್ಟು, ಆರೋಪ ಪಟ್ಟಿ ಎದುರಿಸಿದ ಸಂತೋಷ್ ರಾವ್ ನಿರಪರಾಧಿ ಎಂದು ಗೊತ್ತಾಗಿದೆ. ಸೌಜನ್ಯ ಪ್ರಕರಣದಲ್ಲಿ ಸಂತೋಷ್ ರಾವ್ ಪಾತ್ರವಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆ. ನೈಜ ಆರೋಪಿಗಳ ಪತ್ತೆ ಮಾಡುವಂತೆ ಸೌಜನ್ಯರ ತಾಯಿ ಕುಸುಮಾವತಿ ಅವರೊಂದಿಗೆ ನಾವು ಸಾಕಷ್ಟು ಹೋರಾಟ ನಡೆಸುತ್ತಿದ್ದೇವೆ. ಇದರ ನಡುವೆ ಮೈಸೂರಿನಿಂದ ಬಂದ ಸ್ನೇಹಮಯಿ ಕೃಷ್ಣ, ಯಾರದೋ ಚಿತಾವಣೆಯ ಮೇರೆಗೆ ವರ್ತಿಸುತ್ತಿದ್ದಾರೆ” ಎಂದು ದೂರಿನಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿರಿ: ಧರ್ಮಸ್ಥಳ ಪ್ರಕರಣ: ಸಾಕ್ಷಿದಾರ ಪ್ರದೀಪ್ ಹೇಳಿಕೆ ಕೋರ್ಟ್‌ನಲ್ಲಿ ದಾಖಲು

“ಸೌಜನ್ಯಳನ್ನು ಆಕೆಯ ಮಾವ ವಿಠ್ಠಲ ಗೌಡ ಅವರೇ ಕೊಲೆ ಮಾಡಿರುವುದಾಗಿ ಸ್ನೇಹಮಯಿ ಕೃಷ್ಣ ಸುಳ್ಳು ಆರೋಪ ಮಾಡಿ, ದಿನಾಂಕ 08-09-2025 ರಂದು ದೂರನ್ನೂ ನೀಡಿ ಪತ್ರಿಕೆಗಳಿಗೆ ಹೇಳಿಕೆ ಕೊಟ್ಟಿದ್ದಾರೆ. ಆ ಮೂಲಕ ನಮ್ಮ ಹೋರಾಟದ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದ್ದಾರೆ. ಸೌಜನ್ಯ ಕೊಲೆಗಾರರ ಪತ್ತೆಗೆ ನಡೆಸುತ್ತಿರುವ ಹೋರಾಟದ ದಾರಿ ತಪ್ಪಿಸುವ ದುರುದ್ದೇಶದಿಂದ ಸೌಜನ್ಯ ಕೊಲೆಗಾರರು ಸ್ನೇಹಮಯಿಯನ್ನು ಮೈಸೂರಿನಿಂದ ಕರೆತಂದಿರುವ ಸಂಶಯವಿರುತ್ತದೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.

“ಸ್ನೇಹಮಯಿ ಸುಳ್ಳು ಆರೋಪ ಮಾಡಿರುವುದರ ಬಗ್ಗೆ ಕೂಲಂಕಷ ತನಿಖೆ ನಡೆಸಬೇಕು. ಸುಳ್ಳು ದೂರು ನೀಡಲು ಸ್ನೇಹಮಯಿಯನ್ನು ಪ್ರೇರೇಪಿಸಿದವರ ಪತ್ತೆ ಮಾಡಬೇಕು. ವಿಠ್ಠಲ ಗೌಡರಿಗೆ ಹಾಗೂ ಹೋರಾಟಗಾರರಿಗೆ ಅವಮಾನ ಮಾಡಿರುವುದರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

Download Eedina App Android / iOS

X