ಭಾರತ-ಪಾಕ್ ಕ್ರಿಕೆಟ್ ಪಂದ್ಯ: ಆಪರೇಷನ್ ಸಿಂಧೂರ vs ಆರ್ಥಿಕ ಲಾಭ; ಕೇಂದ್ರಕ್ಕೆ ಯಾವುದು ಮುಖ್ಯ?

Date:

Advertisements

ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಆ ಭಯೋತ್ಪಾದಕ ದಾಳಿಯ ವಿರುದ್ಧ ಭಾರತವು ‘ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ಪ್ರತಿದಾಳಿ ನಡೆಸಿತ್ತು. ಆ ಘಟನೆಯು ಭಾರತ-ಪಾಕ್ ಸಂಬಂಧವು ಮತ್ತಷ್ಟು ಕುಸಿಯುವಂತೆ ಮಾಡಿದೆ. ಇದೆಲ್ಲದರ ನಡುವೆ, ‘ಏಪ್ಯಾ ಕಪ್‌’ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್‌ ತಂಡಗಳು ಎದುರಾಳಿಗಳಾಗಿ ಆಡಲು ಸಿದ್ದವಾಗಿವೆ. ಪಾಕ್ ತಂಡದೊಂದಿಗೆ ಆಡುವ ಬಿಸಿಸಿಐನ ನಿರ್ಧಾರದ ವಿರುದ್ಧ ಭಾರತೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತ ಮತ್ತು ಪಾಕ್ ತಂಡಗಳು ಕ್ರಿಕೆಟ್‌ ಪಂದ್ಯದಲ್ಲಿ ಆಡುವುದಾದರೆ, ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಆರ್ಥವೇ ಇಲ್ಲ. ಇದು, ಪಹಲ್ಗಾಮ್‌ ದಾಳಿಯಲ್ಲಿ ಬಲಿಯಾದ 26 ಮಂದಿ ಭಾರತೀಯರಿಗೆ ಮಾಡುವ ಅವಮಾನ ಎಂದು ದಾಳಿಯಲ್ಲಿ ಮೃತಪಟ್ಟವರ ಕುಟುಂಬಸ್ಥರು ಹಾಗೂ ಭಾರತದ ಹಲವು ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಹಲ್ಗಾಮ್ ದಾಳಿಯಲ್ಲಿ ತನ್ನ ಸಹೋದರ ಕಳೆದುಕೊಂಡ ಸಾವನ್ ಪರ್ಮರ್ ಎಂಬವರು, “ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್‌ ತಂಡಗಳ ನಡುವೆ ಪಂದ್ಯ ಆಯೋಜಿಸಲಾಗುತ್ತಿರುವುದು ನಮಗೆ ತೀವ್ರ ದುಃಖತಂದಿದೆ. ಭಾರತವು ಪಾಕಿಸ್ತಾನದೊಂದಿಗೆ ಯಾವುದೇ ರೀತಿಯ ಸಂಪರ್ಕ ಉಳಿಸಿಕೊಳ್ಳಬಾರದು. ನೀವು ಪಂದ್ಯವನ್ನು ಆಡಿದರೆ, ನನ್ನ ಸಹೋದರ ಮರಳಿ ಬರುತ್ತಾನೆಯೇ” ಎಂದು ಪ್ರಶ್ನಿಸಿದ್ದಾರೆ.

“ಆಪರೇಷನ್ ಸಿಂದೂರ ಇನ್ನೂ ಮುಗಿದಿಲ್ಲವೆಂದು ಸರ್ಕಾರ ಹೇಳುತ್ತಿದೆ. ಹಾಗಿದ್ದರೆ, ಈ ಪಂದ್ಯವನ್ನು ಯಾಕೆ ನಡೆಸಲಾಗುತ್ತಿದೆ” ಎಂದಿದ್ದಾರೆ.

ಭಾರತ-ಪಾಕ್ ಪಂದ್ಯದ ವಿಚಾರವಾಗಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಎಐಎಂಐಎಂ ಅಧ್ಯಕ್ಷ, ಸಂಸದ ಅಸಾದುದ್ದೀನ್ ಓವೈಸಿ, “ಪಾಕಿಸ್ತಾನದ ಜೊತೆ ಭಾರತ ತಂಡ ಆಟವಾಡಲು ಕೇಂದ್ರ ಸರ್ಕಾರ ಅವಕಾಶ ನೀಡಿದೆ. 26 ಜನರ ಜೀವಗಳಿಗಿಂತ ಆರ್ಥಿಕ ಲಾಭವೇ ಮುಖ್ಯವಾಯಿತೇ? ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

“ಭಾರತೀಯರ ಜೀವಕ್ಕಿಂತ ಹಣಗಳಿಸುವುದೇ ಮುಖ್ಯವೇ? ಬಿಸಿಸಿಐ ಒಂದು ಕ್ರಿಕೆಟ್ ಪಂದ್ಯದಿಂದ ಎಷ್ಟು ಹಣ ಪಡೆಯುತ್ತದೆ? 2000–3000 ಕೋಟಿ ರೂ.ಗಳೇ? “26 ಮಂದಿ ಭಾರತೀಯರನ್ನು ಕೊಂದ ಭಯೋತ್ಪಾದಕರಿಗೆ ನೆಲೆ ಒದಗಿಸಿದ್ದ ಪಾಕಿಸ್ತಾನದ ವಿರುದ್ಧ ಕ್ರಿಕೆಟ್ ಪಂದ್ಯ ಆಡಲು ನಿರಾಕರಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವೇ? ನಾವು ದಾಳಿಗೆ ಬಲಿಯಾದ ನಾಗರಿಕರ ಪರವಾಗಿ ಅಂದು ನಿಂತಿದ್ದೆವು, ಇಂದೂ ನಿಲ್ಲುತ್ತೇವೆ. ಮುಂದೆಯೂ ನಿಲ್ಲುತ್ತೇವೆ” ಎಂದು ಹೇಳಿದ್ದಾರೆ.

“ರಕ್ತ ಮತ್ತು ನೀರು ಒಟ್ಟಿಗೆ ಹರಿಯಲು ಸಾಧ್ಯವಿಲ್ಲ. ಸಿಂಧೂ ನದಿ ನೀರು ಹರಿಸುವ ವಿಚಾರದಲ್ಲಿ ಮಾತುಕತೆಯ ನಡೆಸುವುದೇ ಇಲ್ಲ ಎಂದಿದ್ದ ಮೋದಿ ಅವರು, ಈಗ ಪಂದ್ಯ ಆಡಿಸಿ, ದೇಶಕ್ಕೆ ಯಾವ ಸಂದೇಶ ನೀಡಲು ಮುಂದಾಗಿದ್ದಾರೆ” ಎಂದು ಓವೈಸಿ ಪ್ರಶ್ನಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

Download Eedina App Android / iOS

X