ಕೊಪ್ಪಳ | ಅಪಘಾತಗಳ ತಡೆಗೆ ಎನ್‌ಎಚ್-50ರಲ್ಲಿ ಸಿಸಿಟಿವಿ ಅಳವಡಿ‌ಕೆ: ಸಂಸದ ಕೆ ರಾಜಶೇಖರ್ ಹಿಟ್ನಾಳ್

Date:

Advertisements

ಕೊಪ್ಪಳ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-50(ಎನ್‌ಎಚ್‌-50)ರಲ್ಲಿ ಆಗಸ್ಟ್-2024ರ ಅಂತ್ಯದ ವೇಳೆಗೆ ಸುಮಾರು 190 ಅಪಘಾತಗಳು ಉಂಟಾಗಿ, ಅದರಲ್ಲಿ 59 ಸಾವುಗಳು ಸಂಭವಿಸಿದ್ದವು. ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿವೇಗವಾಗಿ ವಾಹನ ಚಲಾಯಿಸುವುದರಿಂದ ಅಪಘಾತಗಳು ಸಂಭವಿಸಿರುವುದು ಕಂಡುಬರುತ್ತಿದೆ. ಈ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು.

ಕೊಪ್ಪಳ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಅಳವಡಿಸಲಾದ ಸಿಸಿಟಿವಿಗಳ ಉದ್ಘಾಟನಾ ಕಾರ್ಯಕ್ರಮವು ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ನಡೆಯಿತು. ನಂತರ ಜಿಲ್ಲಾಡಳಿತ ಭವನದ ಸಂಸದರ ಕಚೇರಿಯಲ್ಲಿ ಸಂಸದ ರಾಜಶೇಖರ ಹಿಟ್ನಾಳ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

“ರಾಷ್ಟ್ರೀಯ ಹೆದ್ದಾರಿ-50ರಲ್ಲಿ ವಣಬಳ್ಳಾರಿ, ಬೂದಗುಂಪಾ ಕ್ರಾಸ್, ಅಮರೇಶ್ವರ ದೇವಸ್ಥಾನ ಕ್ರಾಸ್, ತುಂಗಭದ್ರಾ ನದಿ ಸೇತುವೆ-1 ಹತ್ತಿರ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ಇದಕ್ಕೆ ವಾಹನಗಳ ಅತಿಯಾದ ವೇಗದ ಸಂಚಾರವೇ ಕಾರಣ ಎಂಬುದು ತಿಳಿದಿರುತ್ತದೆ. ಈ ಹಿನ್ನೆಲೆಯಲ್ಲಿ ಅಪಘಾತ ವಲಯವಾದ ಈ ಸ್ಥಳಗಳಲ್ಲಿ ಅನುಮತಿಸಿದ ವೇಗಕ್ಕಿಂತ ಹೆಚ್ಚು ವೇಗವಾಗಿ ಸಂಚರಿಸುವ ವಾಹನಗಳನ್ನು ನಿಯಂತ್ರಣ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ” ಎಂದರು.

“ರಾಷ್ಟ್ರೀಯ ಹೆದ್ದಾರಿ 50ರಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟಲು ವಾಹನ ವೇಗ ನಿಯಂತ್ರಣಮಾಡಲು ಭದ್ರತಾ ಸುರಕ್ಷತೆ ಹಾಗೂ ಸಿಸಿಟಿವಿ ಅಳವಡಿಕೆಗಾಗಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದ್ದು, ಇದಕ್ಕಾಗಿ ₹2 ಕೋಟಿ ₹5 ಲಕ್ಷ ಮಂಜೂರು ಮಾಡಿದ್ದಾರೆ. ಇದರಲ್ಲಿ 1 ಕೋಟಿ 39 ಲಕ್ಷ ರೂಪಾಯಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಣಬಳ್ಳಾರಿ, ಬೂದಗುಂಪಾ ಕ್ರಾಸ್, ಅಮರೇಶ್ವರ ದೇವಸ್ಥಾನ ಕ್ರಾಸ್, ತುಂಗಭದ್ರಾ ನದಿ ಸೇತುವೆ-1 ಮತ್ತು ಮುನಿರಾಬಾದ್ ಪೋಲಿಸ್ ಠಾಣೆಯಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ” ಎಂದು ತಿಳಿಸಿದರು.

₹70 ಲಕ್ಷ ವೆಚ್ಚದಲ್ಲಿ ಜಂಕ್ಷನ್ ಸ್ಥಳಗಳಲ್ಲಿ ಬೆಳಕಿನ ಸೌಲಭ್ಯ ಒದಗಿಸಲು ತುಂಗಭದ್ರಾ ನದಿ ಸೇತುವೆ-1, ಅಮರೇಶ್ವರ ದೇವಸ್ಥಾನ ಕ್ರಾಸ್, ವಣಬಳ್ಳಾರಿ, ಬೇವೂರ ಕ್ರಾಸ್, ಹಿರೇವಂಕಲಕುಂಟಾ, ತುಂಗಭದ್ರಾ ನದಿ ಸೇತುವೆ-2 ಈ ಸ್ಥಳಗಳಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸಲಾಗುತ್ತಿದೆ. ಸಿಸಿಟಿವಿ ಅಳವಡಿಕೆಯಿಂದ ಅಪರಾಧಗಳನ್ನು ತಡೆಗಟ್ಟಲು, ಅಪಘಾತಕ್ಕೀಡಾದ ಮತ್ತು ಓಡಿಹೋದ ಪ್ರಕರಣಗಳಲ್ಲಿ ವಾಹನಗಳನ್ನು ಪತ್ತೆಹಚ್ಚಲು, ರಸ್ತೆ ಅಪಘಾತಗಳನ್ನು ತಪ್ಪಿಸಲು ಅತಿ ವೇಗವನ್ನು ಪರಿಶೀಲಿಸಲು ಸಮಗ್ರ ಕಣ್ಗಾವಲು ಹಾಗೂ ಮೇಲ್ವಿಚಾರಣೆ ಮಾಡಲು ಪೊಲೀಸ್ ಇಲಾಖೆಗೆಗೆ ಅನುಕೂಲವಾಗಲಿದೆ” ಎಂದು ಹೇಳಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ವಿವಿಧ ಯೋಜನೆಗಳು:

“ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿವಿಧ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದ್ದು, ₹28.89 ಕೋಟಿ ವೆಚ್ಚದಲ್ಲಿ ಮೆತಗಲ್ ಕ್ರಾಸ್, ₹27.28 ಕೋಟಿ ವೆಚ್ಚದಲ್ಲಿ ಶಹಪೂರ, ₹19.43 ಕೋಟಿ ವೆಚ್ಚದಲ್ಲಿ ಹಿಟ್ನಾಳ ಕ್ರಾಸ್ ಮತ್ತು ₹29.04 ಕೋಟಿ ವೆಚ್ಚದಲ್ಲಿ ಹುಲಗಿ ಕ್ರಾಸ್ ಸೇರಿದಂತೆ ಒಟ್ಟು ₹104.64 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ನಾಲ್ಕು ಮೇಲ್ಸೇತುವೆ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಕಾಮಗಾರಿ, ಕಾರ್ಯಕ್ರಮಗಳಲ್ಲಿ ಪಾರದರ್ಶಕತೆ, ಗುಣಮಟ್ಟ ಕಾಪಾಡಿ; ಪ್ರಲ್ಹಾದ ಜೋಶಿ

ಪತ್ರಿಕಾಗೋಷ್ಠಿಯಲ್ಲಿ ಸಂಸದರ ಆಪ್ತ ಸಹಾಯಕ ಅರುಣ, ವೀರಭದ್ರಪ್ಪ ನಾಯಕ್, ಮಾಜಿ ಸಂಸದ ಕರಡಿ ಸಂಗಣ್ಣ, ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್ ಅರಸಿದ್ದಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್ ಹೇಮಂತ್ ಕುಮಾರ್, ಕೊಪ್ಪಳ ಡಿವೈಎಸ್‌ಪಿ ಮುತ್ತಣ್ಣ ಸವರಗೋಳ, ಜನಪ್ರತಿನಿಧಿಗಳು, ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X