ರಾಯಚೂರು | ಶಾಸಕ ಬಸನಗೌಡ ಪಾಟೀಲ ಯತ್ನಾಳರಿಗೆ ರಾಯಚೂರು ಪ್ರವೇಶ ತಡೆಯುವಂತೆ : ಎಸ್‌ಡಿಪಿಐ ಮನವಿ

Date:

Advertisements

ರಾಯಚೂರು ನಗರಕ್ಕೆ ಮಹಾಗಣಪತಿ ವಿಸರ್ಜನೆಯ ಅಂಗವಾಗಿ ಆಗಮಿಸುತ್ತಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪ್ರವೇಶ ನೀಡಬಾರದು ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ) ಪಕ್ಷವು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ ದ್ವೇಷ ಭಾಷಣ ಮಾಡಿ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡುವ ಕಾರಣ ಶಾಂತಿ ಭಂಗಕ್ಕೆ ಕಾರಣರಾಗಿದ್ದಾರೆ. ರಾಯಚೂರು ನಗರದಲ್ಲಿ ಮುಸ್ಲಿಮರ ಸಂಖ್ಯೆ ಹೆಚ್ಚಾಗಿರುವುದರಿಂದ ದ್ವೇಷ ಭಾಷಣ ಮಾಡುವ ಸಾಧ್ಯತೆ ಇರುತ್ತದೆ. ಇದರಿಂದ ಸೌಹಾರ್ದತೆಯ ನಾಡನ್ನು ಹಾಳು ಮಾಡುವ ಭೀತಿಯಿದೆ ಎಂದು ಆಗ್ರಹಿಸಿದರು.

ಯತ್ನಾಳ ಅನೇಕ ಬಾರಿ ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ಪ್ರಚೋದನಾತ್ಮಕ ಹೇಳಿಕೆಗಳು, ಮುಸ್ಲಿಂ ಮಹಿಳೆಯರ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಅವರು ನಿರಂತರವಾಗಿ ಮಾಡುತ್ತಿದ್ದಾರೆ ಹಾಗೂ ಇತ್ತೀಚೆಗೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಅವರ ಭೇಟಿಯ ನಂತರ ಗಲಭೆ ಉಂಟಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟಿತ್ತು. ಇದರಿಂದ ಸಮಾಜದಲ್ಲಿ ಭಿನ್ನಾಭಿಪ್ರಾಯ ಉಂಟಾಗುತ್ತಿದೆ. ಆದ್ದರಿಂದ ಕ್ರಿಮಿನಲ್ ಪ್ರೊಸೀಜರ್ ಕೋಡ್ ಹಾಗೂ ಸಂಬಂಧಿತ ಕಾನೂನುಗಳಡಿ ತಕ್ಷಣ ತಡೆ ಕ್ರಮ ಕೈಗೊಂಡು, ಯತ್ನಾಳರ ಪ್ರವೇಶ ಮತ್ತು ಕಾರ್ಯಕ್ರಮಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಸಿಂಧನೂರು | ತಾತ್ಕಾಲಿಕ ಸೇತುವೆ ಕೊಚ್ಚಿ ಹೋದ ಹಿನ್ನೆಲೆ ರಾಜ್ಯ ಹೆದ್ದಾರಿ ಬಂದ್

ಈ ಸಂದರ್ಭದಲ್ಲಿ ಸಂಘದ ಪ್ರಮುಖರಾದ ತೌಸಿಫ್ ಅಹ್ಮದ್, ಸೈಯದ್ ಮುರ್ಷದ್ ಜಾನಿ ಸಾಹೇಬ್, ಸೈಯದ್ ಶಮ್ರುದ್ದಿನ್, ಸೈಯದ್ ಮಾಸೂಮ್ ಶೇಖ್, ಅಕ್ಬರ್ ಹುಸೇನ್ ನಾಗುಂಡಿ, ಎಂ.ಡಿ.ಗೌಸ್, ಸೈಯದ್ ಅಬ್ದುಲ್‌ ಅಜೀಜ್, ಗೌಸ್ ಮೊಯಿನುದ್ದಿನ್, ಎಂ.ಡಿ.ಶಫಿ, ಎಂ.ಡಿ.ಖಾಜಾ ಮೊಯಿನುದ್ದಿನ್, ಆರೀಫ್, ರಿಯಾಜ್, ಮೋಹಿದ್ ಸೇರಿದಂತೆ ಅನೇಕರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

Download Eedina App Android / iOS

X