ಮಣಿಪುರ ಹಿಂಸಾಚಾರ | ತನಿಖೆಗೆ 53 ಅಧಿಕಾರಿಗಳ ಸಿಬಿಐ ತಂಡ ರಚನೆ

Date:

Advertisements

ಮಣಿಪುರ ಹಿಂಸಾಚಾರ ಪ್ರಕರಣಗಳ ತನಿಖೆಗಾಗಿ ಸಿಬಿಐ 53 ಮಂದಿ ಅಧಿಕಾರಗಳ ತಂಡ ರಚನೆ ಮಾಡಿದೆ. ತಂಡದಲ್ಲಿ 29 ಮಹಿಳಾ ಆಧಿಕಾರಿಗಳು ಇದ್ದಾರೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಸಂಖ್ಯೆಯ ಮಹಿಳಾ ಅಧಿಕಾರಿಗಳನ್ನು ಏಕಕಾಲದಲ್ಲಿ ಪ್ರಕರಣದ ತನಿಖೆಗೆ ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ.

ಜಂಟಿ ನಿರ್ದೇಶಕ ಘನಶ್ಯಾಮ್ ಉಪಾಧ್ಯಾಯ ಅವರ ಮೇಲ್ವಿಚಾರಣೆಯಲ್ಲಿ ತಂಡವನ್ನು ರಚಿಸಲಾಗಿದೆ. ಮೂವರು ಡಿಐಜಿಗಳಾದ ಲವ್ಲಿ ಕಟಿಯಾರ್, ನಿರ್ಮಲಾ ದೇವಿ ಮತ್ತು ಮೋಹಿತ್ ಗುಪ್ತಾ ಮತ್ತು ಪೊಲೀಸ್ ವರಿಷ್ಠಾಧಿಕಾರಿ ರಾಜ್‌ವೀರ್ ಅವರು ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Advertisements

ಸಿಬಿಐ ತನಿಖೆ ನಡೆಸುತ್ತಿರುವ ಈ ಹಲವು ಪ್ರಕರಣಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ತನಿಖೆಗೆ ಒಳಪಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಆ ಪ್ರಕರಣಗಳನ್ನು ಉಪ ಪೊಲೀಸ್ ವರಿಷ್ಠಾಧಿಕಾರಿ ಶ್ರೇಣಿಯ ಅಧಿಕಾರಿಗಳು ತನಿಖೆ ಮಾಡಲಿದ್ದಾರೆ.

ಇಬ್ಬರು ಮಹಿಳಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಆರು ಮಹಿಳಾ ಉಪ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿ 53 ಸದಸ್ಯರ ತಂಡವನ್ನು ಪ್ರಕರಣದ ತನಿಖೆಗೆ ನಿಯೋಜಿಸಲಾಗಿದೆ.

ಇನ್ನು 16 ಇನ್ಸ್‌ಪೆಕ್ಟರ್‌ಗಳು ಮತ್ತು 10 ಸಬ್‌ ಇನ್‌ಸ್ಪೆಕ್ಟರ್‌ಗಳು ಸಹ ತಂಡದ ಭಾಗವಾಗಲಿದ್ದಾರೆ.ಸಾಮಾನ್ಯವಾಗಿ ಇಷ್ಟು ದೊಡ್ಡ ಪ್ರಕರಣಗಳನ್ನು ಸಿಬಿಐಗೆ ಹಸ್ತಾಂತರಿಸಿದಾಗ, ಅಧಿಕಾರಿಗಳನ್ನು ನಿಯೋಜಿಸಲು ಸಿಬಿಐ ಸಂಸ್ಥೆಯು ಇತರ ರಾಜ್ಯದ ಮೇಲೆ ಕೂಡ ಅವಲಂಬಿತವಾಗಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಹೊಲಗೇರಿ ಇದ್ದ ಕಡೆಗೆ ಊರಿನ ಜನ ಬಂದರೆ ಹೊರತು- ಊರು ಇದ್ದ ಕಡೆ ಹೊಲಗೇರಿ ಎಂದಿಗೂ ಹೋಗಿಲ್ಲ

ಮಣಿಪುರದ ಪ್ರಕರಣದಲ್ಲಿ, ತನಿಖೆಯಲ್ಲಿ ಪಕ್ಷಪಾತದ ಆರೋಪಗಳನ್ನು ತಪ್ಪಿಸಲು ಸ್ಥಳೀಯ ಅಧಿಕಾರಿಗಳ ಸಹಭಾಗಿತ್ವ ಕಡಿಮೆ ಮಾಡಲು ಪ್ರಯತ್ನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಬಿಐ ಈಗಾಗಲೇ ಎಂಟು ಪ್ರಕರಣಗಳನ್ನು ದಾಖಲಿಸಿದೆ, ಮೇ 4 ರಂದು ಮಹಿಳೆಯ ಬೆತ್ತಲೆ ಮಾಡಿದ ಪ್ರಕರಣ ಕೂಡ ಇದರಲ್ಲಿ ಸೇರಿದೆ.ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ ಇನ್ನೂ ಒಂಬತ್ತು ಪ್ರಕರಣಗಳನ್ನು ತನಿಖೆ ಮಾಡಲು ಸಿಬಿಐ ಸಿದ್ಧವಾಗಿದೆ. ಈ ಮೂಲಕ ಒಟ್ಟು 17 ಪ್ರಕರಣಗಳನ್ನು ಸಿಬಿಐ ತನಿಖೆ ನಡೆಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X