ಕೃಷ್ಣಾ ಮೇಲ್ದಂಡೆ ಯೋಜನೆ | ಭೂಮಿ ಖರೀದಿಗೆ ದರ ನಿಗದಿ, ಸರ್ಕಾರದಿಂದ ರೈತರಿಗೆ ಎಷ್ಟು ಪರಿಹಾರ?

Date:

Advertisements

ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಅನುಷ್ಠಾನಕ್ಕೆ ಅವಶ್ಯವಿರುವ ಜಮೀನು ಸ್ವಾಧೀನಕ್ಕಾಗಿ ಮತ್ತು ಪರಿಹಾರ ನಿಗದಿ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಮುಳುಗಡೆಯಾಗುವ ನೀರಾವರಿ ಜಮೀನಿಗೆ ಒಂದು ಎಕರೆಗೆ 40 ಲಕ್ಷ ರೂ. ಮತ್ತು ಒಣ ಬೇಸಾಯದ ( ಖುಷ್ಕಿ ) ಜಮೀನಿಗೆ 30 ಲಕ್ಷ ರೂ. ದಂತೆ ಭೂಮಿ ಖರೀದಿಗೆ ಸರ್ಕಾರ ತೀರ್ಮಾನ ಮಾಡಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ, “ಒಟ್ಟಾರೆ ಈ ಯೋಜನೆಗೆ 70 ಸಾವಿರ ಕೋಟಿ ರೂ. ಬೇಕು. ಪ್ರತಿ ವರ್ಷ 15-20 ಖರ್ಚು ಮಾಡುತ್ತೇವೆ. ಹೇಗೆ ಹಣ ಹೊಂದಿಸಬೇಕು ಎಂಬುದನ್ನು ಸರ್ಕಾರ ಮುಂದಿನ ಹಂತದಲ್ಲಿ ತೀರ್ಮಾನ ಮಾಡಲಿದೆ” ಎಂದು ಹೇಳಿದರು.

“ಇನ್ನು ಕಾಲುವೆ ನಿರ್ಮಾಣಕ್ಕೆ, 51,000 ಎಕರೆ ಜಮೀನು ಬೇಕಾಗಿದೆ. ಇದಕ್ಕೆ ಪರಿಹಾರವಾಗಿ ಒಣ ಭೂಮಿಗೆ ಎಕರೆಗೆ 25 ಲಕ್ಷ ಹಾಗೂ ನೀರಾವರಿ ಭೂಮಿಗೆ 30 ಲಕ್ಷ ಪರಿಹಾರ ಕೊಡಲು ತೀರ್ಮಾನ ಮಾಡಲಾಗಿದೆ. ಭೂಮಿ ಮುಳುಗಡೆ, ಕಾಲುವೆ, ಪುನರ್ವಸತಿಗೆ ಒಟ್ಟು 1,33,000 ಜಮೀನು ಅಗತ್ಯ ಇದೆ. ಯೋಜನೆಯಿಂದ 20 ಗ್ರಾಮಗಳು ಮುಳುಗಡೆ ಆಗಲಿದೆ‌. ಯೋಜನೆಗೆ ಒಟ್ಟು 70,000 ಕ್ಕೂ ಹೆಚ್ಚು ಕೋಟಿ ಖರ್ಚು ಆಗಲಿದೆ” ಎಂದು ವಿವರಿಸಿದರು.

“ಆಲಮಟ್ಟಿ ಜಲಾಶಯವನ್ನು 519.6 ಮೀಟರ್ 524.256 ಮೀಟರ್ ಎತ್ತರಕ್ಕೆ ಏರಿಸಲು ಟ್ರಿಬ್ಯೂನಲ್ ಅವಾರ್ಡ್ ಮಾಡಿದೆ. 75,000 ಕ್ಕೂ ಹೆಚ್ಚು ಎಕರೆ ಭೂಮಿ ಮುಳುಗಡೆ ಆಗಲಿದೆ. 5 ಲಕ್ಷ ಹೆಕ್ಟೇರ್ ನೀರಾವರಿ ಭೂಮಿಯ ಅಗತ್ಯ ಇದೆ. ಯೋಜನೆಯಿಂದ ರೈತರ ಭೂಮಿಗೆ ನೀರು ಸಿಗಲಿದೆ. ರೈತರಿಗೆ ಅನುಕೂಲ ಆಗಲಿದೆ. ಈ ನಿಟ್ಟಿನಲ್ಲಿ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಈ ವಿಚಾರವಾಗಿ ಚರ್ಚೆ ನಡೆಸಲಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

Download Eedina App Android / iOS

X