ನೆಹರೂ ಹೆಸರಿನಿಂದಲ್ಲ, ಕೆಲಸದಿಂದ ಗುರುತಿಸಿದ್ದಾರೆ : ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಪರೋಕ್ಷ ಟಾಂಗ್

Date:

Advertisements

ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯದ ಹೆಸರನ್ನು ಈಗ ಕೇಂದ್ರ ಸರ್ಕಾರವು ಅಧಿಕೃತವಾಗಿ ಪ್ರಧಾನ ಮಂತ್ರಿ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಎಂದು ಬದಲಾಯಿಸಿದೆ.

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಹೆಸರು ಬದಲಾವಣೆಗೆ ಅನುಮೋದನೆ ನೀಡಲಾಗಿದ್ದು, ಸೋಮವಾರದಿಂದಲೇ ಜಾರಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಹೆಸರು ಬದಲಾವಣೆಯ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ, ‘ನೆಹರೂ ಅವರು ಹೆಸರಿನಿಂದ ಗುರುತಿಸಿಕೊಂಡಿಲ್ಲ. ಅವರು ತಮ್ಮ ಕೆಲಸ ಕಾರ್ಯದಿಂದ ಗುರುತಿಸಿಕೊಂಡಿದ್ದಾರೆ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಲಡಾಖ್‌ಗೆ ತೆರಳುವ ಮುನ್ನ ದೆಹಲಿಯ ವಿಮಾನ ನಿಲ್ದಾಣದಲ್ಲಿ ಸುದ್ದಿ ಸಂಸ್ಥೆ ಎಎನ್‌ಐ ಪ್ರತಿನಿಧಿ ಕೇಳಿದ ಪ್ರಶ್ನೆಗೆ ಸರಳವಾಗಿ ಉತ್ತರಿಸಿದ ರಾಹುಲ್ ಗಾಂಧಿ, ‘ನೆಹರೂ ಜೀ ಕೀ ಪೆಹಚಾನ್ ಉನ್ಕೇ ಕರಮ್ ಹೇ, ಉನ್ಕಾ ನಾಮ್ ನಹೀ’ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಪರೋಕ್ಷ ಟಾಂಗ್ ನೀಡಿದ್ದಾರೆ.

ನವದೆಹಲಿಯ ತೀನ್ ಮೂರ್ತಿ ಭವನವು ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಅಧಿಕೃತ ನಿವಾಸವಾಗಿತ್ತು. ಆ ನಂತರ ಈ ಸಂಕೀರ್ಣವನ್ನು ವಸ್ತು ಸಂಗ್ರಹಾಲಯವಾಗಿ ಪರಿವರ್ತಿಸಿ, ‘ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ’ ಎಂದು ನಾಮಕರಣ ಮಾಡಿ, ಸ್ಥಾಪಿಸಲಾಗಿತ್ತು. ಆದರೆ ಈಗ ನರೇಂದ್ರ ಮೋದಿ ಸರ್ಕಾರ, ‘ಪ್ರಧಾನ ಮಂತ್ರಿ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ’ ಎಂದು ಬದಲಾಯಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇತಿಹಾಸ ಇಲ್ಲದವರು ಮತ್ತೊಬ್ಬರ ಇತಿಹಾಸವನ್ನು ಅಳಿಸಲು ಹೊರಟಿದ್ದಾರೆ. ಹೆಸರು ಬದಲಿಸುವುದರಿಂದ ನೆಹರೂ ಅವರ ವ್ಯಕ್ತಿತ್ವವನ್ನು ಕುಗ್ಗಿಸಲು ಸಾಧ್ಯವಿಲ್ಲ’ ಎಂದು

ಇದಕ್ಕೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇತಿಹಾಸ ಇಲ್ಲದವರು ಮತ್ತೊಬ್ಬರ ಇತಿಹಾಸವನ್ನು ಅಳಿಸಲು ಹೊರಟಿದ್ದಾರೆ ಹೆಸರು ಬದಲಿಸುವುದರಿಂದ ಪ್ರಧಾನಿ ವ್ಯಕ್ತಿತ್ವವನ್ನು ಕುಗ್ಗಿಸಲು ಸಾಧ್ಯವಿಲ್ಲ’ ಎಂದು ವಾಗ್ದಾಳಿ ನಡೆಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಒಳಮೀಸಲಾತಿ ಆದೇಶ ಕಾನೂನಾಗಲು ಸುಗ್ರೀವಾಜ್ಞೆ ಜಾರಿಗೊಳಿಸಿ: ಮಾಜಿ ಸಚಿವ ಆಂಜನೇಯ

"ಒಳಮೀಸಲಾತಿ ಆದೇಶವು ಕೇವಲ ಸರ್ಕಾರಿ ಆದೇಶವಾಗಿದ್ದು, ಅದು ಕಾನೂನಿನ ಚೌಕಟ್ಟಿಗೆ ಬರಲು...

ನೈಜ ದೇಶಭಕ್ತರು ಪಾಕ್ ವಿರುದ್ಧದ ಪಂದ್ಯ ನೋಡಿಲ್ಲ: ಬಿಜೆಪಿ, ಟೀಮ್ ಇಂಡಿಯಾವನ್ನು ಟೀಕಿಸಿದ ಸಂಜಯ್ ರಾವತ್

ಪಾಕಿಸ್ತಾನ ವಿರುದ್ಧದ ಏಷ್ಯಾ ಕಪ್ ಫೈನಲ್‌ನಲ್ಲಿ ಟೀಮ್ ಇಂಡಿಯಾ ಆಡಿದ ವಿಚಾರದಲ್ಲಿ...

ಸಿದ್ದರಾಮಯ್ಯ ಗ್ಯಾರಂಟಿ ಕಾಪಿ: ಬಿಹಾರದ ಮಹಿಳೆಯರ ಮೂಗಿಗೆ ತುಪ್ಪ ಸವರಿದ ಮೋದಿ!

ಬಿಹಾರದ ರಾಜಕೀಯ ಚದುರಂಗದಾಟದಲ್ಲಿ, ಈ ಬಾರಿಯ ಚುನಾವಣೆಯಲ್ಲಿ ಗ್ಯಾರಂಟಿ ತಂತ್ರಗಾರಿಕೆ ಚುನಾವಣೆಯನ್ನು...

ಚಿಕ್ಕಮಗಳೂರು l ಮತಗಳ್ಳತನ ವಿರುದ್ಧ ಜನಜಾಗೃತಿ ಅಭಿಯಾನ, ಪ್ರತಿಭಟನೆ; ದುರ್ಗಾಚರಣ್ ಕುಂಚೂರು

ಮತಗಳ್ಳತನದ ವಿರುದ್ಧ ದೇಶದಾದ್ಯಂತ ಸಂಚಲನ ಮೂಡಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ...

Download Eedina App Android / iOS

X