ದಾವಣಗೆರೆ | ನಿಯಮ ಮೀರಿಲ್ಲ, ಕ್ಷೇತ್ರದ ಅಭಿವೃದ್ಧಿಗೆ ಹಿರಿಯರ ಸಲಹೆ ಸ್ವೀಕರಿಸುವೆ: ಶಾಸಕ ಶಿವಗಂಗಾ ಬಸವರಾಜ್

Date:

Advertisements

“ಮಾಜಿ ಶಾಸಕ ಮಾಡಾಳ್ ವಿರುಪಾಕ್ಷಪ್ಪನವರ ಪತ್ರಿಕಾ ಹೇಳಿಕೆ ಸರಿಯಲ್ಲ. ಕಾಮಗಾರಿಗಳ ವಿಷಯದಲ್ಲಿ ನಿಯಮಾವಳಿ ಮೀರಿಲ್ಲ. ಕಿರಿಯ ಶಾಸಕನಾಗಿ ಕ್ಷೇತ್ರದ ಯಾವುದೇ ಮಾಜಿ ಶಾಸಕರು, ಹಿರಿಯರು ಸಲಹೆ ಕೊಟ್ಟರೂ ಸ್ವೀಕರಿಸಿ ಕ್ಷೇತ್ರದ ಅಭಿವೃದ್ಧಿಗೆ ಸ್ಪಂದಿಸುವೆ” ಎಂದು ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಕಾಮಗಾರಿಗಳ ವಿವರಣೆಗಳನ್ನು ಶಾಸಕರಾದ ಶಿವಗಂಗಾ ಬಸವರಾಜ್ ದಾಖಲೆಗಳ ಸಮೇತ ಬಹಿರಂಗಪಡಿಸಿದರು.

ದಾವಣಗೆರೆ ಜಿಲ್ಲೆ ಚನ್ನಗಿರಿ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ನಾನು ಶಾಸಕನಾದ ಮೇಲೆ ಕಾಮಗಾರಿಗಳಿಗೆ ನಿಯಮಾವಳಿ ಮೀರಿ ಹೋಗಿರುವುದಿಲ್ಲ. ಹಾಗೇನಾದರೂ ತಪ್ಪಿ ನಡೆದಾಗ ತಿದ್ದುವ ಹಕ್ಕು ಮಾಜಿ ಶಾಸಕರುಗಳಾದ ಹಿರಿಯರಾದ ವಡ್ನಾಳ್ ರಾಜಣ್ಣ, ಮಹಿಮಾ ಪಟೇಲ್, ಮಾಡಾಳ್ ವಿರುಪಾಕ್ಷಪ್ಫನವರಿಗೆ ಇದೆ. ಕಿರಿಯ ವಯಸ್ಸಿನ ಶಾಸಕನಾಗಿ ಕ್ಷೇತ್ರದಲ್ಲಿನ ಯಾವುದೇ ಹಿರಿಯರು ಸಲಹೆ ಕೊಟ್ಟರೂ ತೆಗೆದುಕೊಂಡು ಕ್ಷೇತ್ರದ ಅಭಿವೃದ್ಧಿಗೆ ಸ್ಪಂದಿಸುತ್ತೇನೆ” ಎಂದು ಸ್ಪಷ್ಟಪಡಿಸಿದರು.

“ಸಾಸ್ವೆಹಳ್ಳಿ ಏತ ನೀರಾವರಿ ವಡ್ನಾಳ್ ರಾಜಣ್ಣನವರ ಹೋರಾಟದ ಫಲ. ಇನ್ನುಳಿದ ಕಾಮಗಾರಿಗಳಿಗೆ ನಾನು ನಿಯಮಾವಳಿ ಮೀರದೆ ಹೋರಾಟ ಮಾಡಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇನೆ. ಇದಲ್ಲದೆ ಚನ್ನಗಿರಿ ತಾಲೂಕಿಗೆ ನೂತನ ಸರ್ಕಾರಿ ಮೆಡಿಕಲ್ ಕಾಲೇಜ್ ತರುವ ಹೋರಾಟ ನಡೆದಿದೆ ಎಂದು ಕ್ಷೇತ್ರದ ಜನರಿಗೆ ತಿಳಿದಿರಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪ್ರಜಾಪ್ರಭುತ್ವ ದಿನ; ನನ್ನ ಮತ, ನನ್ನ ಹಕ್ಕು ಧ್ಯೇಯ ವಾಕ್ಯದೊಂದಿಗೆ ಸೈಕಲ್ ಜಾಥಾ

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಮಾವಿನಕಟ್ಟೆ ಶ್ರೀಕಾಂತ್, ಹರೋನಹಳ್ಳಿ ವಿಜಯಗೌಡ್ರು, ಕೆರೆಬಿಳಚಿ ಜಬೀವುಲ್ಲಾ, ಸಂತೇಬೆನ್ನೂರು ಬ್ಲಾಕ್ ಆಧ್ಯಕ್ಷರು ಹಾಗು ಪುರಸಭೆ ಸದಸ್ಯರಾದ ಗೌಸ್ ಪೀರ್, ಇಮ್ರಾನ್, ಶಿವಾಜಿರಾವ್, ಜಿತೇಂದ್ರ ರಾಜ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

Download Eedina App Android / iOS

X