ಮೈಸೂರು | ದಸರಾ ಉದ್ಘಾಟನೆ; ಹೈಕೋರ್ಟ್ ಆದೇಶ ಸ್ವಾಗತಾರ್ಹ : ದಲಿತ ಮಹಾಸಭಾ

Date:

Advertisements

ಮೈಸೂರಿನ ಪುರಭವನ ಆವರಣದಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ದಲಿತ ಮಹಾಸಭಾ ಕಾರ್ಯಕರ್ತರು ದಸರಾ ಉದ್ಘಾಟಕರ ಆಯ್ಕೆ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಪಿಐಎಲ್ ವಜಾ ಮಾಡಿರುವುದನ್ನು ಸ್ವಾಗತಿಸಿ, ಸಂತಸ ವ್ಯಕ್ತಪಡಿಸಿದರು.

ದಲಿತ ಮಹಾಸಭಾ ಅಧ್ಯಕ್ಷ ಎಸ್. ರಾಜೇಶ್ ಮಾತನಾಡಿ, “ಈ ಹಿಂದಿನ ದಸರಾ ಉದ್ಘಾಟಕರಾಗಿದ್ದ ನಿಸಾರ್ ಅಹಮ್ಮದ್ ಅವರು ಮುಸ್ಲಿಮ್ ಸಮುದಾಯವರಾಗಿದ್ದಾರೆ. ಹಂಪಾ ನಾಗರಾಜು ಜೈನ ಸಮುದಾಯದವರಾಗಿದ್ದು, ಅಂದಿನ ಸಂದರ್ಭದಲ್ಲಿ ಬಿಜೆಪಿ ಹಾಗೂ ಸಂಘಪರಿವಾರ ವಿರೋಧ ವ್ಯಕ್ತಪಡಿಸಲಿಲ್ಲ. ಆದರೇ, ಇವಾಗ ಬೂಕರ್ ಪ್ರಶಸ್ತಿ ವಿಜೇತರಾದ ಭಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದಾಗ ವಿರೋಧ ವ್ಯಕ್ತ ಪಡಿಸಿ, ಘನ ನ್ಯಾಯಾಲಯದಲ್ಲಿ ಪಿಐಎಲ್ ಸಲ್ಲಿಸಿದ್ದರು. ಆದರೇ, ಘನ ನ್ಯಾಯಾಲಯವು ಸರ್ಕಾರದ ನಿರ್ಧಾರ ಯಾವುದೇ ಕಾನೂನಾತ್ಮಕ ಅಥವಾ ಸಂವಿಧಾನಿಕ ಹಕ್ಕುಗಳ ಉಲ್ಲಂಘನೆ ಆಗಿಲ್ಲ ಎಂದು ಅರ್ಜಿಗಳನ್ನು ವಜಾಗೊಳಿಸಿರುವುದು ಸ್ವಾಗತಾರ್ಹ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ | ಹುಣಸೂರು | ರೈತ ಸಂಘದ ಪಿತಾಮಹ ಎಚ್. ಎಸ್. ರುದ್ರಪ್ಪ : ಹೊಸೂರು ಕುಮಾರ್

ಮುಖಂಡರುಗಳಾದ ಮರಿದೇವಯ್ಯ, ಶಿವಣ್ಣ, ಕುಕ್ಕರಹಳ್ಳಿ ನಂಜುಂಡಸ್ವಾಮಿ, ಸುನೀಲ್ ನಾರಾಯಣ, ಕುರುಬರಹಳ್ಳಿ ಪ್ರಕಾಶ್, ಅಮ್ರಾನ್ ಪಾಷ, ಮಹದೇವು, ಎಸ್. ಎ. ರಹೀಮ್ ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

Download Eedina App Android / iOS

X