ರೈತರ‌‌ ಅನುಕೂಲಕ್ಕಾಗಿ ಏಕೀಕೃತ ಕರೆ ಕೇಂದ್ರಕ್ಕೆ ಚಾಲನೆ: ಸಚಿವ ಚಲುವರಾಯಸ್ವಾಮಿ

Date:

Advertisements
  • 1800-425-3553 ನೂತನ ಏಕೀಕೃತ ಸಹಾಯವಾಣಿ ಆರಂಭ
  • ಸಚಿವರಿಂದ ಭೀಮಾ ಪಲ್ಸ್ ತೊಗರಿ ಬೇಳೆ ಬ್ರಾಂಡ್ ಬಿಡುಗಡೆ

ಕೃಷಿಗೆ ಸಂಬಂಧಿತ ಮಾಹಿತಿ, ಸಲಹೆ ಮಾರ್ಗದರ್ಶನ‌ ಪಡೆಯಲು ಏಕೀಕೃತ ರೈತ ಕರೆ ಕೇಂದ್ರ ಹೆಚ್ಚು ಪರಿಣಾಮಕಾರಿಯಾಗಲಿದೆ ಎಂದು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.

ಕೃಷಿ ಇಲಾಖೆಯ ಕೃಷಿ ಆಯುಕ್ತಾಲಯದಲ್ಲಿ ರೈತ ಕರೆ ಕೇಂದ್ರ ಉದ್ಘಾಟಿಸಿ, ನಂತರ ಸಂಗಮ ಸಭಾಂಗಣದಲ್ಲಿ 2023-24 ನೇ ಸಾಲಿನ ಬೆಳೆ ಸಮೀಕ್ಷೆ ಕಾರ್ಯಕ್ರಮದಡಿ ತಾಲ್ಲೂಕು ಮಟ್ಟದ ಮಾಸ್ಟರ್ ತರಬೇತುದಾರರಿಗೆ ಏರ್ಪಡಿಸಿದ್ದ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ ಉದ್ಘಾಟಿಸುವ ಮೂಲಕ ಭೀಮಾ ಪಲ್ಸ್ ತೊಗರಿ ಬೇಳೆ ಬ್ರಾಂಡ್ ಬಿಡುಗಡೆ ಮಾಡಿ ಮಾತನಾಡಿದರು.

“ಬೆಳೆ, ಹವಾಮಾನ, ವಿಮೆ, ರೈತ ವಿದ್ಯಾನಿಧಿ, ಕೃಷಿ ಸಂಜೀವಿನಿ, ಪಿಎಂ ಕಿಸಾನ್, ಕೆ‌ ಕಿಸಾನ್, ಬೆಳೆ ಸಮೀಕ್ಷೆ ಮತ್ತಿತರ ವಿಷಯಗಳಲ್ಲಿ ಉಪಯುಕ್ತ ಮಾಹಿತಿ, ಸಲಹೆ ಹಾಗೂ ಮಾರ್ಗದರ್ಶನಗಳನ್ನು ಸುಲಭವಾಗಿ ಒದಗಿಸುವುದು ಏಕೀಕೃತ ರೈತ ಕರೆ ಕೇಂದ್ರದ ಉದ್ದೇಶ” ಎಂದರು.

Advertisements

“ಈ ಹಿಂದೆ ವಿವಿಧ ಯೋಜನೆಗಳಿಗೆ ಇದ್ದ 8 ಪ್ರತ್ಯೇಕ ಕರೆ ಸಂಖ್ಯೆಗಳನ್ನು ಒಗ್ಗೂಡಿಸಿ ಏಕೀಕೃತ ಕರೆ ಕೇಂದ್ರ ಸ್ಥಾಪಿಸಲಾಗಿದೆ
1800-425-3553 ನೂತನ ಏಕೀಕೃತ ಸಹಾಯವಾಣಿ ಕರೆ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ” ಎಂದು ಸಚಿವರು ವಿವರಿಸಿದರು.

“ಮಾಹಿತಿ ಹಾಗೂ ತಾಂತ್ರಿಕ ನೆರವಿನ ಜೊತೆಗೆ ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆಗೂ ಇಲಾಖೆ ಮುಂದಾಗಿದೆ ಇದರ ಅಂಗವಾಗಿ ಭೀಮಾ ಫಲ್ಸ್ ಎಂಬ ಬ್ರಾಡ್ ತೊಗರಿ ಬೇಳೆ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಿನ ಯುದ್ಧದಲ್ಲಿ ಮಾನ ಕಳೆದುಕೊಳ್ಳುತ್ತಿರುವ ನಾಯಕರು

“ರೈತರಿಗೆ ಸರ್ಕಾರದ ‌ಯೋಜನೆಗಳು ಸಮರ್ಪಕವಾಗಿ ತಲುಪಲು ಬೆಳೆ ಸಮೀಕ್ಷೆ ಕೂಡ ಪ್ರಮುಖ. ಕ್ಷೇತ್ರ ಮಟ್ಟದಲ್ಲಿ ಸಮೀಕ್ಷೆ ನಡೆಸುವವರಿಗೆ ತಾಂತ್ರಿಕ ಅರಿವು ಹಾಗೂ ಇತರ ಮಾಹಿತಿ ಅಗತ್ಯ. ಹೀಗಾಗಿ ರಾಜ್ಯ ಮಟ್ಟದಲ್ಲಿ ಬೆಳೆ ಸಮೀಕ್ಷೆ ಮಾಸ್ಟರ್ ತರಬೇತುದಾರರ ತರಬೇತಿ ಹಮ್ಮಿಕೊಳ್ಳಲಾಗಿದೆ. ಎಲ್ಲ ಅಧಿಕಾರಿ ಸಿಬ್ಬಂದಿ ಜವಾಬ್ದಾರಿಯಿಂದ ರೈತರ ಹಿತ ಗಮ‌ದಲ್ಲಿಟ್ಟು ಸಮೀಕ್ಷೆ ನಡೆಸಬೇಕು” ಎಂದು ಅವರು ಹೇಳಿದರು.

ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ.ಅನ್ಬುಕುಮಾರ್, ಕೃಷಿ ಇಲಾಖೆ ಆಯುಕ್ತ ವೈ ಎಸ್ ಪಾಟೀಲ್, ತೋಟಗಾರಿಕೆ ಇಲಾಖೆ ನಿರ್ದೇಶಕ ಡಿ ಎಸ್ ರಮೇಶ್, ರೇಷ್ಮೆ ಅಭಿವೃದ್ಧಿ ಆಯುಕ್ತ ರಾಜೇಶ್ ಗೌಡ, ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆ ನಿರ್ದೆಶಕ ಮಾಧುರಾಮ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X