ಧರ್ಮಸ್ಥಳ | ಬಂಗ್ಲೆಗುಡ್ಡೆ ಸ್ಥಳದಲ್ಲಿ ಎಸ್‌ಐಟಿ ಶೋಧ, 9 ಕಡೆ ಮಾನವನ ಮೂಳೆಗಳು ಪತ್ತೆ!

Date:

Advertisements

ಧರ್ಮಸ್ಥಳ ಗ್ರಾಮಕ್ಕೆ ಅಂಟಿಕೊಂಡ ಅರಣ್ಯ ಪ್ರದೇಶದಲ್ಲಿ ನೂರಾರು ಶವಗಳನ್ನು ಅಕ್ರಮವಾಗಿ ಹೂಳಲಾಗಿದೆ ಎನ್ನುವ ಪ್ರಕರಣಕ್ಕೆ ಮತ್ತಷ್ಟು ಜೀವ ಬಂದಿದೆ.

ಎಸ್‌ಐಟಿಯಿಂದ ಬುಧವಾರ ನಡೆದ ಬಂಗ್ಲೆಗುಡ್ಡೆ ಕಾಡಿನೊಳಗಿನ ಸ್ಥಳ ಮಹಜರು ವೇಳೆ ಒಂಬತ್ತು ಕಡೆ ಮಾನವನ ಮೂಳೆಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಈ ಹಿಂದೆ ಸಾಕ್ಷಿ ದೂರುದಾರ ಗುರುತಿಸಿದ ಸ್ಥಳದ 11ನೇ ಪಾಯಿಂಟ್ ಬಳಿಯಲ್ಲಿ ಅಸ್ಥಿಪಂಜರಗಳು ಪತ್ತೆಯಾಗಿವೆ. ಅಸ್ಥಿಪಂಜರಗಳನ್ನು ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ.

ಈ ಹಿಂದೆ ಸಾಕ್ಷಿದಾರ ವಿಠಲಗೌಡರನ್ನು ಎಸ್ಐಟಿ ಅಧಿಕಾರಿಗಳು ಕರೆದುಕೊಂಡು ‌ಬಂದು ಎರಡು ಸಲಾ ಇದೇ ಜಾಗದ ಬಳಿ ಸ್ಥಳ ಮಹಜರು ನಡೆಸಿದ್ದರು. ಆ ಸಂದರ್ಭದಲ್ಲಿ ವಿಠಲಗೌಡರು ಅಧಿಕಾರಿಗಳಿಗೆ ಅಸ್ಥಿಪಂಜರ ಇರುವ ಬಗ್ಗೆ ‌ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಎರಡನೇ ಹಂತದಲ್ಲಿ ಶೋಧ ಕಾರ್ಯ ಪ್ರಾರಂಭಿಸಿದ್ದಾರೆ.

ಬಂಗ್ಲೆಗುಡ್ಡೆಯಲ್ಲಿ ರಾಶಿ ರಾಶಿ ಮೂಳೆಗಳು, ಮೂರ್ನಾಲ್ಕು ತಲೆಬುರುಡೆಯನ್ನು ಸ್ಥಳ ಮಹಜರು ವೇಳೆ ನೋಡಿದ್ದೆ ಎಂದು ವಿಡಿಯೋ ಮಾಡಿ ವಿಠಲಗೌಡ ಹರಿಬಿಟ್ಟಿದ್ದರು. ಎಸ್‌ಐಟಿ ಅಧಿಕಾರಿಗಳ ಸಮ್ಮುಖದಲ್ಲೇ ನೋಡಿದ್ದಾಗಿಯೂ ಹೇಳಿರುವುದರಿಂದ ಬಂಗ್ಲೆಗುಡ್ಡೆ ಸ್ಥಳ ಮಹಜರು ಮಾಡಲು ಎಸ್ಐಟಿ ತಂಡ ಆಗಮಿಸಿದೆ.

ಎಸ್ಐಟಿ ತಂಡದೊಂದಿಗೆ ಧರ್ಮಸ್ಥಳ ಗ್ರಾಮ ಪಂಚಾಯತಿ, soco ತಂಡ, ತಂಡದ ಎಸ್‌ಪಿಗಳಾದ ಜಿತೇಂದ್ರ ಕುಮಾರ್‌ ದಯಾಮ, ಸಿ.ಎ ಸೈಮನ್ ನೇತೃತ್ವದಲ್ಲಿ ಮೂಳೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ತಂಡದಲ್ಲಿ 40 ಜನರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

Download Eedina App Android / iOS

X