ಕೊಪ್ಪಳ | ಟಣಕನಕಲ್ಲ ಗ್ರಾಮದ ದಲಿತ ಕಾಲೋನಿಯ ಬೇಡಿಕೆ ಈಡೇರಿಕೆಗೆ ಒತ್ತಾಯ

Date:

Advertisements

ಕೊಪ್ಪಳದ ಟಣಕನಕಲ್ಲ ಗ್ರಾಮದ ದಲಿತ ಕಾಲೋನಿಯ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕರ್ನಾಟಕ ಗ್ರಾಮ ಪಂಚಾಯತ್ ವಿವಿಧೋದ್ದೇಶ ಸಂಘಟನಾ ಕಾರ್ಯಗಳ ಒಕ್ಕೂಟ ಒತ್ತಾಯಿಸಿದೆ. ಓಜಿನಹಳ್ಳಿ ಗ್ರಾಮ ಪಂಚಾಯತ್ ಪಿಡಿಒ ಅನುಪಸ್ಥಿತಿಯಲ್ಲಿ ಆದಯ್ಯ ಸ್ವಾಮಿ ಹಾಗೂ ಗ್ರಾಂಪಂ ಅಧ್ಯಕ್ಷ ಹುಚ್ಚಪ್ಪ ಯಮನಪ್ಪ ಭೋವಿ ಅವರಿಗೆ ಈ ಕುರಿತು ಮನವಿ ಸಲ್ಲಿಸಲಾಗಿದೆ.

“ಕೊಪ್ಪಳ ತಾಲೂಕಿನ ಓಜಿನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಟಣಕನಕಲ್ಲ ಗ್ರಾಮದ ಎಸ್‌ಸಿ ಕಾಲೋನಿಯಲ್ಲಿ ಮಹಿಳೆಯರಿಗೆ ಯಾವುದೇ ಸಾರ್ವಜನಿಕ ಶೌಚಾಲಯ ಇರುವುದಿಲ್ಲ. ಇದರಿಂದ ಅನಿವಾರ್ಯವಾಗಿ ಮಹಿಳೆಯರು ಬಹಿರ್ದೆಸೆಗೆ ಹೋಗಬೇಕಾಗಿದೆ. ಇದರಿಂದ ತುಂಬಾ ತೊಂದರೆ ಆಗುತ್ತಿದೆ. ಕೂಡಲೇ ಸಾರ್ವಜನಿಕ ಶೌಚಾಲಯ ನಿರ್ಮಿಸಿಕೊಡಬೇಕು. ಕುಡಿಯುವ ನೀರಿಗಾಗಿ ಸಾರ್ವಜನಿಕ ಸ್ಥಳದಲ್ಲಿ ನಳದ ವ್ಯವಸ್ಥೆಯನ್ನೂ ಮಾಡಿಕೊಡಬೇಕು” ಎಂದು ಮನವಿ ಮಾಡಿದ್ದಾರೆ.

“ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಅಡುಗೆ ಮಾಡುವ ಸಿಬ್ಬಂದಿಯಲ್ಲಿ ಯಾವುದೇ ದಲಿತ ಮಹಿಳೆಯರು ಇರುವುದಿಲ್ಲ. ಕೂಡಲೇ ಅಡಿಗೆ ಮಾಡುವ ಸಿಬ್ಬಂದಿಯಲ್ಲಿ ದಲಿತ ಮಹಿಳೆಯರನ್ನು ಆಯ್ಕೆ ಮಾಡಿಕೊಂಡು ಸಾಮಾಜಿಕ ಸಮಾನತೆ ಸಾಧಿಸಬೇಕು. ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು” ಎಂದು ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಹಾಗೂ ಅಧ್ಯಕ್ಷರಿಗೆ ಆಗ್ರಹಿಸಿದರು.

ಇದನ್ನೂ ಓದಿ: ಕೊಪ್ಪಳ | ನಗರಸಭೆ ಅಧ್ಯಕ್ಷರ ಸಹೋದರ & ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಈ ವೇಳೆ ಕರ್ನಾಟಕ ಗ್ರಾಮ ಪಂಚಾಯತ್ ವಿವಿಧೋದ್ದೇಶ ಸಂಘಟನಾ ಕಾರ್ಯಗಳ ಒಕ್ಕೂಟದ ತಾಲೂಕು ಸಂಯೋಜಕ ಸುಂಕಪ್ಪ ಮೀಸಿ, ಟಣಕನಕಲ್ಲ ಗ್ರಾಮಸ್ಥರಾದ ಯಮನೂರಪ್ಪ ಕುಂಜಾಲಿ, ಮಾರುತಿ ಕುಂಜಾಲಿ, ಹನುಮವ್ವ ಕುಂಜಾಲಿ, ಯಮನವ್ವ ಕುಂಜಾಲಿ, ಹನುಮಪ್ಪ ಕುಂಜಾಲಿ, ಪರಶುರಾಮ್ ಕುಂಜಾಲಿ, ದುರಗವ್ವ ಕುಂಜಾಲಿ, ಈರವ್ವ ಕುಂಜಾಲಿ, ಸುರೇಶ ಕುಂಜಾಲಿ, ಗಾಳೆವ್ವ ಕುಂಜಾಲಿ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X