ಉತ್ತರಾಖಂಡದಲ್ಲಿ ಮುಂದುವರಿದ ಮೇಘಸ್ಫೋಟ, ಇಂದು ಬೆಳಿಗ್ಗೆ ಏಳು ಜನರು ಕಾಣೆ

Date:

Advertisements

ಉತ್ತರಾಖಂಡದಲ್ಲಿ ಮೇಘಸ್ಫೋಟ ಮುಂದುವರಿದ್ದು, ಚಮೋಲಿ ಜಿಲ್ಲೆಯ ನಂದನಗರದಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದ ಮೇಘಸ್ಫೋಟದಿಂದ ಭೂಕುಸಿತ ಉಂಟಾಗಿ ಮನೆಗಳು ಕುಸಿದಿದ್ದು, ಕನಿಷ್ಠ ಏಳು ಜನರು ಕಾಣೆಯಾಗಿದ್ದಾರೆ.

ನಗರ ಪಂಚಾಯತ್ ನಂದನಗರದ ಕುಂತ್ರಿ ವಾರ್ಡ್‌ನಲ್ಲಿ ಭೂಕುಸಿತವಾಗಿ ಆರು ಮನೆಗಳು ನಾಶಪಡಿಸಿವೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ಭೂಕುಸಿತ ಸಂಭವಿಸಿದ ಸಮಯದಲ್ಲಿ ಏಳು ಮಂದಿ ಮನೆಯ ಒಳಗೆ ಇದ್ದರು, ಅವರಲ್ಲಿ ಇಬ್ಬರನ್ನು ರಕ್ಷಿಸಲಾಗಿದೆ, ಇನ್ನೂ ಐವರು ನಾಪತ್ತೆಯಾಗಿದ್ದಾರೆ.

ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ತಂಡಗಳು, ವೈದ್ಯಕೀಯ ತಂಡ ಮತ್ತು ಮೂರು ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿವೆ. ಮೋಖ್ ನದಿಯಲ್ಲಿನ ಪ್ರವಾಹವು ನಂದನಗರ ಪ್ರದೇಶದ ಧುರ್ಮಾ ಗ್ರಾಮದಲ್ಲಿ ಆರು ಮನೆಗಳನ್ನು ನಾಶಪಡಿಸಿದೆ.

ಉತ್ತರಾಖಂಡದಲ್ಲಿ ಅದರಲ್ಲೂ ವಿಶೇಷವಾಗಿ ರಾಜಧಾನಿ ಡೆಹ್ರಾಡೂನ್‌ನಲ್ಲಿ ಸುರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿ, ಈವರೆಗೂ ಬುಧವಾರದ ವರದಿ ಆಧರಿಸಿ 17 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ನಾಪತ್ತೆಯಾಗಿರುವ ವರದಿಯಾಗಿದೆ.

ಸೋಮವಾರ ರಾತ್ರಿಯಿಂದಲೇ ಪ್ರಾರಂಭವಾದ ಸರಣಿ ಮೇಘ ಸ್ಫೋಟಗಳು ಮತ್ತು ನಿರಂತರ ಮಳೆಯಿಂದ ಸಾಕಷ್ಟು ಹಾನಿಯುಂಟಾಗಿದೆ. ರಸ್ತೆಗಳು, ಸೇತುವೆಗಳು ಮತ್ತು ಮನೆಗಳು ಕೊಚ್ಚಿಹೋಗಿವೆ. ನದಿಗಳು ಪ್ರವಾಹಗಳಾಗಿ ಹರಿಯುತ್ತಿವೆ.

25 ರಿಂದ 30 ಸ್ಥಳಗಳಲ್ಲಿ ರಸ್ತೆಗಳು ಸಂಪೂರ್ಣವಾಗಿ ಕೊಚ್ಚಿ ಹೋಗಿವೆ. ಮನೆಗಳು ಭಾರಿ ಪ್ರಮಾಣದಲ್ಲಿ ಹಾನಿಗೊಳಗಾಗಿವೆ. ಸರ್ಕಾರಿ ಆಸ್ತಿಪಾಸ್ತಿಗಳು ಸಹ ಹಾನಿಗೀಡಾಗಿದ್ದು, ಅನೇಕ ಜನರ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಪರಿಸ್ಥಿತಿ ನಿರ್ವಹಣೆಗೆ ಎಲ್ಲಾ ಪ್ರಯತ್ನ ನಡೆಸಲಾಗುತ್ತಿದೆ. ಅನೇಕ ಕಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

Download Eedina App Android / iOS

X