ಅಕ್ರಮ ಗಣಿ ಗುತ್ತಿಗೆ ಪರವಾನಗಿ ಆರೋಪ, ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ಕೋರಿದ್ದ ಅರ್ಜಿ ವಜಾ

Date:

Advertisements

ಅಕ್ರಮವಾಗಿ ಗಣಿ ಗುತ್ತಿಗೆ ಪರವಾನಗಿ ನೀಡಿದ್ದಾರೆ ಎನ್ನುವ ಆರೋಪ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ‌ ನೀಡುವಂತೆ ರಾಜ್ಯಪಾಲರಿಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಗುರುವಾರ ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ.

ಪ್ರಕರಣವನ್ನು‌ ಸಿಬಿಐಗೆ ವಹಿಸಬೇಕು, ಅಕ್ರಮ‌ ಗಣಿ ಗುತ್ತಿಗೆಗಳ ಬಗ್ಗೆ ತನಿಖೆ ‌ನಡೆಸಿ ವರದಿ ಸಲ್ಲಿಸಲು ಲೋಕಾಯುಕ್ತರಿಗೆ ನಿರ್ದೇಶನ ನೀಡಬೇಕು, ಎಲ್ಲ ಗುತ್ತಿಗೆ ನವೀಕರಣಗಳನ್ನು ಕಾನೂನುಬಾಹಿರ ಎಂದು ಘೋಷಿಸಬೇಕು ಎಂದು ಬೆಂಗಳೂರಿನ ಉದ್ಯಮಿ ಎಂ ಪಿ ವೇಣುಗೋಪಾಲ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಅವರ ನೇತೃತ್ವದ ವಿಭಾಗೀಯ ಪೀಠ ಗುರುವಾರ ವಿಚಾರಣೆ ನಡೆಸಿ, ಅರ್ಜಿಯನ್ನು ವಜಾಗೊಳಿಸಿದೆ.

ಪ್ರಕರಣವೇನು?

2015 ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಎಂಎಂಡಿಆರ್‌-1957 ಕಾಯ್ದೆಯಲ್ಲಿ ನವೀಕರಣವು 20 ವರ್ಷಗಳ ಅವಧಿಗೆ ಅನ್ವಯವಾಗುತ್ತಿತ್ತು. ಅದರ ಪ್ರಕಾರ ಸರ್ಕಾರವು “ಗಣಿ ಗುತ್ತಿಗೆಯ ನವೀಕರಣಕ್ಕೆ ಫಾರೆಸ್ಟ್‌ ಕ್ಲಿಯರೆನ್ಸ್‌ನ್ನು ಪಡೆದುಕೊಳ್ಳುವ ಸಲುವಾಗಿ ಮಾತ್ರ ಸಿದ್ದರಾಮಯ್ಯ ಸರ್ಕಾರ ಷರತ್ತುಬದ್ಧ ತಾತ್ವಿಕ ಅನುಮೋದನೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

Download Eedina App Android / iOS

X