ತುಮಕೂರು | ದಲಿತ ವಿರೋಧಿ ಹೇಳಿಕೆ : ಯತ್ನಾಳರ ಶಾಸಕ ಸ್ಥಾನ ವಜಾಕ್ಕೆ ಭೀಮ್ ಆರ್ಮಿ ಆಗ್ರಹ

Date:

Advertisements

ದಸರಾ ಉದ್ಘಾಟನೆ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರ ಶಾಸಕ ಬಸನಗೌಡ ಯತ್ನಾಳ ಅವರ ದಲಿತ ವಿರೋಧಿ ಮನಸ್ಥಿತಿಯನ್ನು ಭೀಮ್ ಆರ್ಮಿ ಜಿಲ್ಲಾ ಸಂಘಟನೆ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಶ್ರೀನಿವಾಸ್ ಅಯ್ಯನಪಾಳ್ಯ ಅವರು ಹೇಳಿದರು.

ತುಮಕೂರು ನಗರದಲ್ಲಿ ಪತ್ರಿಕಾ ಹೇಳಿಕೆ ನೀಡಿದ ಅವರು, ದಸರಾದಲ್ಲಿ ಚಾಮುಂಡಿ ದೇವಿಗೆ ಸನಾತನ ಧರ್ಮದವರು ಮಾತ್ರ ಹೂ ಮುಡಿಸಬೇಕು ಹೊರತು ದಲಿತ ಮಹಿಳೆಗೂ ಇದಕ್ಕೆ ಅವಕಾಶವಿಲ್ಲ ಎಂದು ಯತ್ನಾಳ್ ಹೇಳಿದ್ದಾರೆ.

ಜನಪ್ರತಿನಿಧಿಯಾಗಿ ಜನಾಂಗೀಯ ದ್ವೇಷ ಬಿತ್ತುವ ಬದಲು ಸರ್ವಜನಾಂಗಗಳನ್ನು ಬೆಸೆಯುವ ಕೆಲಸ ಮಾಡಬೇಕು. ಎಲ್ಲ ಧರ್ಮದವರನ್ನು ಭಾರತೀಯರೆಂದೇ ನೋಡುವಂತೆ ಈಗ ಕೋರ್ಟ್ ಕೂಡ ಚಾಟಿ ಬೀಸಿದೆ. ನಿತ್ಯ ಕೋಮು ಸೌಹಾರ್ದ ಕೆಡಿಸಲು ಪ್ರಯತ್ನಿಸುತ್ತಿರುವ ಬಸನಗೌಡ ಪಾಟೀಲ ಯತ್ನಾಳರನ್ನು ಈಗಾಗಲೇ ಬಿಜೆಪಿ ಪಕ್ಷದಿಂದ ಉಚ್ಛಾಟಿಸಲಾಗಿದ್ದರೂ ಇವರ ನಾಲಿಗೆ ಉದ್ದ ಕಡಿಮೆಯಾಗಿಲ್ಲ. ಆದರೆ, ಈತನನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಸನಾತನ ಧರ್ಮದವರು ಎಂದರೆ ಯಾರು? ಬ್ರಾಹ್ಮಣ, ಲಿಂಗಾಯತರು ಮಾತ್ರವಾ? ದಲಿತರು ಹಿಂದೂಗಳಲ್ಲವೇ? ಹಿಂದುತ್ವವಾದಿಗಳ ನಿಕೃಷ್ಟ ಮನಸ್ಥಿತಿ ಯತ್ನಾಳ್ ಹೇಳಿಕೆಯಿಂದ ಬಹಿರಂಗಗೊಂಡಿದೆ. ದಲಿತರನ್ನು ಅಸ್ಪೃಷ್ಯರನ್ನಾಗಿಯೇ ಉಳಿಸುವ ಆರ್‌ಎಸ್‌ಎಸ್ ಕುತಂತ್ರ ಫಲಿಸದು. ರಾಜ್ಯದ ಯಾವುದೇ ಮೂಲೆಯಲ್ಲಿ ದಲಿತ ವಿರೋಧಿ ಮನಸ್ಥಿತಿಗಳು ಚುನಾವಣೆಗೆ ನಿಂತರೆ ಠೇವಣಿ ಕಳೆದುಕೊಳ್ಳಲಿದ್ದಾರೆ. ಅಂತೆಯೇ ಮುಂದಿ‌ನ ಚುನಾವಣೆಯಲ್ಲಿ ಯತ್ನಾಳ್ ಅವರನ್ನು ಹೀನಾಯವಾಗಿ ಸೋಲಿಸಲಿದ್ದೇವೆ ಎಂದು ಭೀಮ್ ಆರ್ಮಿ ಸಂಘಟನೆ ಜಿಲ್ಲಾಧ್ಯಕ್ಷ ಶ್ರೀನಿವಾಸ್ ಅಯ್ಯನಪಾಳ್ಯ ಅವರು ಎಚ್ಚರಿಕೆ ನೀಡಿದರು.

ಬಹುತ್ವಕ್ಕೆ ಹೆಸರಾಗಿರುವ ಕರ್ನಾಟಕದಲ್ಲಿ ಕೋಮು ದ್ವೇಷ ಹರಡುತ್ತಿರುವ ಇಂಥ ನೀಚ ಮನಸ್ಥಿತಿಯವರನ್ನು ಸರ್ಕಾರ ಗುರುತಿಸಿ ರಾಜ್ಯದಿಂದಲೇ ಗಡಿಪಾರು ಮಾಡಿ ಆದೇಶ ಹೊರಡಿಸಬೇಕು ಹಾಗೂ ಇಂತಹ ಕೋಮು ಕ್ರಿಮಿಗಳ ಬಗ್ಗೆ ಬಾಲಿಷ ಧೋರಣೆ ತಾಳದೆ ಗಂಭೀರವಾಗಿ ಪರಿಗಣಿಸಬೇಕು ಎಂದು ಮುಖ್ಯಮಂತ್ರಿಯವರಿಗೆ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X