ವಿಜಯಪುರ | ಕೃಷ್ಣಾ ಮೇಲ್ದಂಡೆ ಯೋಜನೆ: ಭೂಸ್ವಾಧೀನಕ್ಕೆ ಒಳಪಡುವ ಸಂತ್ರಸ್ತರ ಪರಿಹಾರ ಧನ ಹೆಚ್ಚಳಕ್ಕೆ ಆಗ್ರಹ

Date:

Advertisements

ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಭೂಸ್ವಾಧೀನಕ್ಕೆ ಒಳಪಡುವ ಸಂತ್ರಸ್ತರಿಗೆ ನೀಡುವ ಪರಿಹಾರ ಧನದ ಮೊತ್ತ ಹೆಚ್ಚಿಸಬೇಕೆಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದಿಂದ ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, “ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಎಕರೆ ಒಣ ಬೇಸಾಯ ಜಮೀನುಗಳು 40 ರಿಂದ 50 ಲಕ್ಷ ರೂಪಾಯಿವರೆಗೆ, ನೀರಾವರಿ ಜಮೀನುಗಳು 60 ರಿಂದ 70 ಲಕ್ಷ ರೂಪಾಯಿವರೆಗೆ ಮಾರಾಟವಾಗುತ್ತಿವೆ. ಆದರೆ, ಸರ್ಕಾರ ಅಲ್ಪ ಮೊತ್ತ ದರ ನಿಗದಿ ಪಡಿಸಿದೆ” ಎಂದು ಅಸಮಾಧಾನ ಹೊರಹಾಕಿದರು.

“ಭವಿಷ್ಯದಲ್ಲಿ ಪ್ರತಿ ಎಕರೆ ಭೂಮಿಗೆ ಕೋಟಿ ಕೊಟ್ಟರೂ ಸಿಗದಂತಹ ಪರಿಸ್ಥಿತಿ ಬರಲಿದೆ. ಹೀಗಿರುವಾಗ ರೈತರು ತಮ್ಮಲಿದ್ದ ಅಲ್ಪಸ್ವಲ್ಪ ಭೂಮಿಯನ್ನು ಕಳೆದುಕೊಂಡು, ಸರ್ಕಾರ ನೀಡುವ ಅಲ್ಪ ಹಣದಲ್ಲಿ ಬದುಕುವುದಾದರೂ ಹೇಗೆ? ಕೆಲವು ರಾಜಕೀಯ ರೈತರ ಅಭಿಪ್ರಾಯ ಪಡೆದು, ಸರ್ಕಾರ ರೈತರಿಗೆ ಮಂಕು ಬೂದಿ ಎರಚಿದೆ. ಹೀಗಾಗಿ ಭೂಮಿಗೆ ಹೆಚ್ಚಿನ ದರ ನಿಗದಿಪಡಿಸಲು, ಮತ್ತೊಮ್ಮೆ ಸಚಿವ ಸಂಪುಟ ಸಭೆ ಕರೆದು ಪರಿಶೀಲಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚನೆ

ತಾಳಿಕೋಟೆ ಹುಣಶ್ಯಾಳದ ಸಂಗನ ಬಸವ ಮಹಾಸ್ವಾಮಿಗಳು, ತಾಲೂಕಧ್ಯಕ್ಷ ಬಾಲಪ್ಪಗೌಡ ಲಿಂಗದಳ್ಳಿ ವಿಠಲ ಬಿರಾದಾರ, ರೈತ ಹೋರಾಟಗಾರ ಮಲ್ಲಿಕಾರ್ಜುನ ಬಟಗಿ, ಜಿಲ್ಲಾ ಸಂಚಾಲಕ ಪಾಂಡು ಹ್ಯಾಟಿ, ಬಸವರಾಜ ಮಸರಕಲ್ಲ, ಗುರುರಾಜ ಪಡಶೆಟ್ಟಿ ಲಾಲಸಾಬ ಹಳ್ಳೂರ, ಮಲಿಗೆಪ್ಪ ಸಾಸಲಗಿ, ಗುರುಲಿಂಗಪ್ಪ ಪಡಸಲಗಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X