ಉಡುಪಿ | ಆತ್ಮ ಯೋಜನೆಯಡಿ ಡ್ರೋನ್ ಮೂಲಕ ಗೊಬ್ಬರ ಸಿಂಪರಣೆ ಪ್ರಾತ್ಯಕ್ಷಿಕೆ

Date:

Advertisements

ಉಡುಪಿ ಜಿಲ್ಲಾ ಪಂಚಾಯತ್ ಉಡುಪಿ, ಕೃಷಿ ಇಲಾಖೆ ಕುಂದಾಪುರ ಹಾಗೂ ರೈತ ಸಂಪರ್ಕ ಕೇಂದ್ರ ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಬಿಜೂರು ಹೋಸ್ಕೋಟೆಉ ಉತ್ಕೃಷ್ಟ ಸಭಾಭವನದಲ್ಲಿ ಆತ್ಮ ಯೋಜನೆಯಡಿ ಡ್ರೋನ್ ಮೂಲಕ ಗೊಬ್ಬರ ಸಿಂಪರಣೆ ಪ್ರಾತ್ಯಕ್ಷಿಕೆ ಮತ್ತು ಕಿಸಾನ್ ಗೋಷ್ಠಿ ಕಾರ್ಯಕ್ರಮವು ನಡೆಯಿತು.

ಈ ಸಂದರ್ಭದಲ್ಲಿ ಉಪ ಯೋಜನಾ ನಿರ್ದೇಶಕ (ಆತ್ಮ) ಡಾ. ರಾಜೇಶ್ ಡಿ.ಪಿ. ಮಾತನಾಡಿ, ಹರಳು ರೂಪದ ಯೂರಿಯಾಗೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಕೆ ಮಾಡುವುದರಿಂದ ರೈತರಿಗೆ ಖರ್ಚು ಕಡಿಮೆಯಾಗಲಿದೆ. ರೈತರು ಕಡಿಮೆ ದರದಲ್ಲಿ ದೊರೆಯುವ ಪರಿಸರ ಸ್ನೇಹಿ ನ್ಯಾನೋ ಯೂರಿಯಾ ಬಳಕೆ ಮಾಡುವುದರಿಂದ ಮಣ್ಣಿನ ಆರೋಗ್ಯ ಫಲವತ್ತತೆಯನ್ನು ಕಾಪಾಡಬಹುದು ಎಂದರು.

ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ಶಾಸ್ತ್ರ ತಜ್ಞ ಡಾ. ನವೀನ್ ನ್ಯಾನೋ ಯೂರಿಯಾ ಉಪಯೋಗಗಳ ಬಗ್ಗೆ, ಸಸ್ಯಗಳಲ್ಲಿ ಅದು ಕಾರ್ಯನಿರ್ವಹಿಸುವ ಬಗ್ಗೆ ಹಾಗೂ ಯೂರಿಯಾ ಬಳಸುವ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಬಿಜೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಚೆನ್ನಮ್ಮ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಂಜಿತ್ ಪೂಜಾರಿ, ಬೈಂದೂರು ಕೃಷಿಕ ಸಮಾಜ ಅಧ್ಯಕ್ಷ ವೆಂಕಟೇಶ ಹೆಚ್, ಜಯರಾಮ್ ಶೆಟ್ಟಿ, ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ. ನಾಗರಾಜ್ ನಾಯಕ್, ಶ್ರೀಧರ್ ಬಿಲ್ಲವ, ಗಾಯತ್ರಿ ದೇವಿ, ಸಹಾಯಕ ತಾಂತ್ರಿಕ ವ್ಯವಸ್ಥಾಪಕಿ ದೀಕ್ಷಿತಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X