ಹಾಸನ | ವಿಡಿಯೋ ಮಾಡಿ ಇನ್ಸ್ಟಾದಲ್ಲಿ ಹರಿಬಿಟ್ಟ ಯುವತಿ; ಮನನೊಂದು ಯುವಕ ಆತ್ಮಹತ್ಯೆ

Date:

Advertisements

ಪ್ರಭಾವೀ ಸೋಷಿಯಲ್‌ ಮೀಡಿಯಾ ಇನ್ಸ್ಟಾಗ್ರಾಂನಲ್ಲಿ ತನ್ನ ವಿಡಿಯೋವನ್ನು ಇನ್ಯಾರೋ ಅಪ್‌ಲೋಡ್‌ ಮಾಡಿ ಹಂಚಿಕೊಂಡರೆಂದು ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಹಾಸನ ತಾಲೂಕಿನ ಕಲ್ಲೇನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಪವನ್‌ ಕೆ (21) ಮೃತ ಯುವಕ.

ಬಿಎ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ ಪವನ್ ಹಾಸನದ ಮಹಾರಾಜ ಪಾರ್ಕ್‌ನಲ್ಲಿ ಇಬ್ಬರು ಸ್ನೇಹಿತೆಯರ ಜೊತೆ ಕುಳಿತಿದ್ದ. ಆ ಸಮಯದಲ್ಲಿ ಒಬ್ಬ ಯುವತಿಯ ಕೈ ಹಿಡಿದು ಆತ್ಮೀಯವಾಗಿ ಮಾತನಾಡುತ್ತಿದ್ದ. ಈ ದೃಶ್ಯವನ್ನು ಅಪರಿಚಿತ ಯುವತಿಯೊಬ್ಬಳು ಮೊಬೈಲ್‌ನಲ್ಲಿ ಚಿತ್ರೀಕರಿಸಿ chinnivasi8 ಎಂಬ ಇನ್ಸ್ಟಾಗ್ರಾಂ ಖಾತೆಯ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಳು.

WhatsApp Image 2025 09 19 at 11.00.28 AM

ವಿಡಿಯೋ ವೈರಲ್‌ ಆಗಿ, ಟೀಕೆ-ವ್ಯಂಗ್ಯಗಳು ಹೆಚ್ಚಾದ ಹಿನ್ನೆಲೆ ಪವನ್‌ ತೀವ್ರ ಮನನೊಂದು, ತಾನು ಜೊತೆಗಿದ್ದ ಯುವತಿಯರಿಗೆ ತೊಂದರೆ ಉಂಟಾಗಬಹುದು ಎಂದು ಭಯಗೊಂಡಿದ್ದಾನೆ. ವಿಡಿಯೋ ಡಿಲೀಟ್‌ ಮಾಡಿಸಲು ಸಹ ಹಲವು ಬಾರಿ ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಇದೇ ಆತಂಕದಲ್ಲಿದ್ದ ಪವನ್‌, ಗುರುವಾರ (ಸೆ.18) ಕಾಲೇಜು ಮುಗಿಸಿಕೊಂಡು ಮನೆಗೆ ಹಿಂತಿರುಗಿ, ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: ಹಾಸನ | ಕೀಳರಿಮೆ ಬಿಟ್ಟು ಮೂಲ ಜಾತಿಯನ್ನು ಗೌರವಿಸಿ: ಲೋಕೇಶ್

ಪವನ್ ತಂದೆಯನ್ನು ಕಳೆದುಕೊಂಡಿದ್ದು, ತಾಯಿ ಪುಟ್ಟಲಕ್ಷ್ಮೀ ಗಾರೆ ಕೆಲಸ ಮಾಡಿ ಮಗನನ್ನು ಸಾಕುತ್ತಿದ್ದರು. ಮಗನ ಸಾವಿನಿಂದ ತೀವ್ರ ಆಘಾತಕ್ಕೊಳಗಾಗಿದ್ದಾರೆ. ಪವನ್ ಸಾವಿಗೆ ಕಾರಣಳಾದ ಅಪರಿಚಿತ ಯುವತಿಯನ್ನು ಬಂಧಿಸಲು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದು, ಮುಂದೆ ಇಂತಹ ಮಾನಹಾನಿ ಯಾರಿಗೂ ಆಗದಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಗೊರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

Download Eedina App Android / iOS

X