ಭೀಕರ ಅಪಘಾತದಲ್ಲಿ ಇಬ್ಬರು ಕಾನ್ ಸ್ಟೆಬಲ್ಗಳು ಸೇರಿದಂತೆ ಮೂವರು ದುರ್ಮರಣ ಹೊಂದಿರುವಂತಹ ಘಟನೆ ಗದಗ ತಾಲೂಕಿನ ಹರ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ನಡೆದಿದೆ.
ಗೋವಾ ರಾಜ್ಯಕ್ಕೆ ಸೇರಿದ ಕದಂಬ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇಟಗಿ ಗ್ರಾಮದ ನಿವಾಸಿ ಕೊಪ್ಪಳ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದ ಪೇದೆ ವೀರಣ್ಣ ಉಪ್ಪಾರ (32), ಹಾವೇರಿ ಜಿಲ್ಲೆ ಪೊಲೀಸ್ ಕಂಟ್ರೋಲ್ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದ ಪೇದೆ ಅರ್ಜುನ್ ನೆಲ್ಲೂರ(32) ಹಾಗೂ ಸಹೋದರ ಸಂಬಂಧಿ ರವಿ ನೆಲ್ಲೂರ (35) ಮೃತರು ಎಂದು ತಿಳಿದು ಬಂದಿದೆ.
ಬಸ್ ಚಾಲಕನಿಗೂ ಗಾಯಗಳಾಗಿವೆ. ಕಾರು ಚಾಲಕನ ನಿರ್ಲಕ್ಷ್ಯದಿಂದ ರೋಡ್ ಡಿವೈಡರ್ ದಾಟಿಕೊಂಡು ಎದುರು ಬರುವ ಬಸ್ಗೆ ಢಿಕ್ಕಿ ಹೊಡೆದಿದೆ. ಕಾರು ಚಾಲಕನ ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ.
ಬಸ್ ಮುಂದಿನ ಭಾಗ ಹಾಗೂ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತ ಹಾಗೂ ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.