ಯಾದಗಿರಿ | ಭಾರೀ ಮಳೆಯಿಂದ ಕುಸಿದು ಬಿದ್ದ ಮನೆ; ಪರಿಹಾರದ ನಿರೀಕ್ಷೆಯಲ್ಲಿ ಕುಟುಂಬ

Date:

Advertisements

ನಿನ್ನೆ ಸುರಿದ ಭಾರೀ ಮಳೆಯಿಂದ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಅನವಾರ ಗ್ರಾಮದ ಬಡ ಕುಟುಂಬವೊಂದು ಬೀದಿಗಿ ಬೀಳುವ ಸ್ಥಿತಿಯಲ್ಲಿದೆ. ಮಳೆಯ ತೀವ್ರತೆಗೆ ಭಾಗಶಃ ಮನೆ ಕುಸಿದು ಬಿದ್ದಿದ್ದು, ಉಳಿದ ಭಾಗದಲ್ಲಿ ಮಳೆ ನೀರು ತುಂಬಿಕೊಂಡಿದೆ. ಇದರಿಂದ ಆತಂಕದಲ್ಲಿರುವ ಬಡ ಕುಟುಂಬ ಪರಿಹಾರ ನಿರೀಕ್ಷಿಸುತ್ತಿದೆ.

ಗ್ರಾಮದ ನಿವಾಸಿಗಳಾದ ಮರಿಯಪ್ಪ, ಮರಿಯಮ್ಮ ದಂಪತಿಯು ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದು, ಇವರು ವಾಸವಾಗಿರುವ ಮನೆ ಮಳೆಯಿಂದ ನೆನೆದು ಕುಸಿದು ಬಿದ್ದಿದೆ. ಇದರಿಂದ ಕುಟುಂಬ ಬೀದಿಗೆ ಬೀಳುವ ಸ್ಥಿತಿ ಎದುರಾಗಿದೆ. ಅಲ್ಲದೆ ಮನೆಯೊಳಗೆ ಮಳೆ ನೀರು ತುಂಬಿಕೊಂಡಿದ್ದು, ದವಸಧಾನ್ಯ ಸೇರಿ ಮನೆಯ ಇತರೆ ಸಾಮಗ್ರಿಗಳು ನೀರು ಪಾಲಾಗಿವೆ.

ಇದನ್ನೂ ಓದಿ: ಯಾದಗಿರಿ | ಸತ್ಯ, ನ್ಯಾಯದ ಪರ ನಿಲ್ಲುವುದೇ ನಿಜವಾದ ಧರ್ಮ

ಈ ಕುರಿತು ಸಾಮಾಜಿಕ ಹೋರಾಟಗಾರ ಶರಣರೆಡ್ಡಿ ಹತ್ತೀಗೂಡುರ್ ತಾಲೂಕು ಹಾಗೂ ಜಿಲ್ಲಾಡಳಿತಕ್ಕೆ ಮನವಿ ಮಾಡಿ, ಬಡ ಕುಟುಂಬಕ್ಕೆ ತಕ್ಷಣ ಪರಿಹಾರಧನ, ದವಸಧಾನ್ಯ ವಿತರಣೆ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X