ಜಯಪ್ರಿಯ ಯೂಟ್ಯೂಬರ್ ಕ್ವಾಜಾ ಅಲಿಯಾಸ್ ಮುಕಳೆಪ್ಪ ಹಿಂದೂ ಯುವತಿ ಗಾಯತ್ರಿಯನ್ನು ಸುಳ್ಳು ದಾಖಲೆ ಸಲ್ಲಿಸಿ ಮದುವೆ ಆಗಿದ್ದಾನೆ ಎಂದು ಲವ್ ಜಿಹಾದ್ ಆರೋಪದಡಿ ಬಜರಂಗದಳದ ಕಾರ್ಯಕರ್ತರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಹಿಂದೂ ಯುವತಿಯನ್ನು ಮದುವೆಯಾಗಿರುವ ಖ್ವಾಜಾ ತನ್ನ ವೀಡಿಯೊಗಳಲ್ಲಿ ಹಿಂದೂ ಧರ್ಮವನ್ನು ಅವಮಾನಿಸುತ್ತಿದ್ದಾನೆ. ಮುಕಳೆಪ್ಪ ಹಿಂದೂ ಯುವತಿಯರನ್ನು ಪ್ರೀತಿಯ ಬಲೆಗೆ ಬೀಳಿಸಿ ವಂಚಿಸುತ್ತಿದ್ದಾನೆ. ಈ ವರ್ಷ ಜೂನ್ 5ರಂದು ಮುಕಳೆಪ್ಪ ಗಾಯತ್ರಿ ಎಂಬುವರನ್ನು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಉಪ ನೋಂದಣಿ ಕಚೇರಿಯಲ್ಲಿ ವಿವಾಹವಾಗಿದ್ದಾನೆ. ಈ ವಿವಾಹಕ್ಕಾಗಿ, ಮುಸ್ಲಿಮನಾದ ಖ್ವಾಜಾ ಅಲಿಯಾಸ್ ಮುಕಳೆಪ್ಪ ನಕಲಿ ದಾಖಲೆಗಳನ್ನು ನೀಡಿದ್ದಾನೆ ಎಂದು ಆರೋಪಿಸಿ, ಆತನ ಯುಟ್ಯೂಬ್, ಫೇಸ್ಬುಕ್, ಇನ್ಸ್ಟಾಗ್ರಾಂ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ಬ್ಯಾನ್ ಮಾಡಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.
ಈ ಸುದ್ಧಿ ಓದಿದ್ದೀರಾ? ಧಾರವಾಡ | ಸರ್ಕಾರದ ಉಚಿತ ಆರೋಗ್ಯ ಸೇವೆಗಳ ಸದುಪಯೋಗವಾಗಲಿ: ಶಂಕರ ಶೇಳಕೆ
ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಮುಕಳೆಪ್ಪ ಮತ್ತು ಆತನ ಪತ್ನಿ ಗಾಯತ್ರಿ ಅವರನ್ನು ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆಸಿಕೊಂಡಿದ್ದ ಸಂದರ್ಭದಲ್ಲಿ ಗಾಯತ್ರಿ ಪೊಲೀಸರೆದುರು ಮಾತನಾಡಿ, ನನಗೆ ಯಾವುದೇ ರೀತಿಯ ಸಮಸ್ಯೆ. ನಾವಿಬ್ಬರೂ ಪರಸ್ಪರ ಒಪ್ಪಿಕೊಂಡು ಮದುವೆ ಆಗಿದ್ದೆವೆ ಎಂದಿದ್ದಾರೆ. ಈ ಸಂದರ್ಭದಲ್ಲಿ ಕಾರ್ಯಕರ್ತರು ಆಕೆಯ ಮನವೊಲಿಸಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ಅದ್ಧರಿಂದ, ಎಫ್ಐಆರ್ ದಾಖಲಾಗಿಲ್ಲ ಮತ್ತು ಯಾರನ್ನೂ ವಶಕ್ಕೆ ಪಡೆದಿಲ್ಲ ಎಂದು ತಿಳಿದುಬಂದಿದೆ.