ದೇಗುಲಗಳ ಅನುದಾನಕ್ಕೆ ತಡೆ ನೀಡಿದ್ದ ಆದೇಶ ವಾಪಸ್: ರಾಮಲಿಂಗಾರೆಡ್ಡಿ ಸ್ಪಷ್ಟನೆ

Date:

Advertisements
  • ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ ಆದೇಶ
  • ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದ ಬಿಜೆಪಿ ನಾಯಕರು

ದೇಗುಲಗಳ ಅನುದಾನಕ್ಕೆ ತಡೆ ನೀಡಿದ್ದ ಆದೇಶ ವಾಪಸ್ ಪಡೆಯುವಂತೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಮುಜರಾಯಿ ಇಲಾಖೆ ಆಯುಕ್ತರು ಕನ್​ಫ್ಯೂಸ್​ ಆಗಿದ್ದಾರೆ ಅಷ್ಟೇ. ಇಲಾಖೆಯಲ್ಲಿ ಅಕ್ರಮ ನಡೆದಿದೆ ಎಂಬ ಯಾವ ಅನುಮಾನವೂ ಇಲ್ಲ ಎಂದು ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಯಾವ ದೇವಸ್ಥಾನದ ಕೆಲಸವನ್ನೂ ನಿಲ್ಲಿಸುವುದಕ್ಕೆ ಹೋಗುವುದಿಲ್ಲ. ಸ್ಟೇಟಸ್ ರಿಪೋರ್ಟ್ ಕೇಳಿದ್ದನ್ನು ನಮ್ಮ ಇಲಾಖೆಯ ಆಯುಕ್ತರು ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೆ” ಎಂದು ಸಮಜಾಯಿಷಿ ನೀಡಿದರು.

ದೇವಸ್ಥಾನ ಜೀರ್ಣೋದ್ಧಾರ ಕಾಮಗಾರಿ ಇನ್ನೂ ಪ್ರಾರಂಭ ಆಗದಿದ್ದರೆ ಹಣ ಬಿಡುಗಡೆ ಮಾಡದಂತೆ ಧಾರ್ಮಿಕ ದತ್ತಿ ಇಲಾಖೆ ಆದೇಶದಲ್ಲಿ ಸೂಚಿಸಿತ್ತು. ಇನ್ನು ಶೇ‌.50 ರಷ್ಟು ಹಣ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದರೆ ಅದನ್ನು ತಕ್ಷಣ ತಡೆ ಹಿಡಿದು, ಅನುದಾನ ಬಿಡುಗಡೆ ಮಾಡದಂತೆ ಉಲ್ಲೇಖಿಸಲಾಗಿತ್ತು. ಹಾಗೂ ಅನುದಾನದ ಆಡಳಿತಾತ್ಮಕ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಕೆ ಆಗಿದ್ದರೆ ಆಡಳಿತಾತ್ಮಕ ಮಂಜೂರಾತಿಯನ್ನು ತಡೆಹಿಡಿಯಲು ಸೂಚಿಸಲಾಗಿತ್ತು. ಹೀಗೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಮೂರು ನಿರ್ದೇಶನಗಳನ್ನು ಎಲ್ಲ ಜಿಲ್ಲಾಧಿಕಾರಿಗಳಿಗೆ ಆದೇಶದಲ್ಲಿ ನೀಡಲಾಗಿತ್ತು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಿನ ಯುದ್ಧದಲ್ಲಿ ಮಾನ ಕಳೆದುಕೊಳ್ಳುತ್ತಿರುವ ನಾಯಕರು

ಈ ಆದೇಶ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಬಗ್ಗೆ ಪ್ರತಿಭಟನೆ ನಡೆಸಲು ಬಿಜೆಪಿ ನಾಯಕರು ಸಿದ್ಧತೆ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ ರಾಮಲಿಂಗಾರೆಡ್ಡಿ ಅವರು ಆದೇಶ ವಾಪಸ್​​ ಪಡೆದುಕೊಳ್ಳುವಂತೆ ದತ್ತಿ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಇದರೊಂದಿಗೆ ವಿವಾದ ಇಲ್ಲಿಗೆ ಕೊನೆಗೊಂಡಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಚಪಾತಿ ರೊಟ್ಟಿ ಕಾಯಿಸಿದಂತೆ ಎಫ್‌ಐಆರ್ ಮಾಡ್ತಿದ್ದಾರೆ: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X