ದಲಿತ ಮಹಿಳೆಯರಿಗೆ ಅವಮಾನ: ಶಾಸಕ ಯತ್ನಾಳ್ ವಿರುದ್ಧ ಕಾನೂನು ಕ್ರಮಕ್ಕೆ ಮಹಿಳಾ ಮುನ್ನಡೆ ಆಗ್ರಹ

Date:

Advertisements

‘ನಾಡಹಬ್ಬ ದಸರಾದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಲು ಬಾನು ಮುಷ್ತಾಕ್‌ಗೆ ಮಾತ್ರವಲ್ಲ, ಯಾವ ದಲಿತ ಮಹಿಳೆಯರಿಗೂ ಅವಕಾಶವಿಲ್ಲ’ ಎಂದು ಕೀಳುಮಟ್ಟದ ಹೇಳಿಕೆ ನೀಡುವ ಮೂಲಕ ದಲಿತ ಮಹಿಳೆಯರಿಗೆ ಅವಮಾನ ಮಾಡಿ, ಅಸ್ಪೃಶ್ಯತೆ ಆಚರಿಸಿರುವ ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಹಿಳಾ ಮುನ್ನಡೆ ಆಗ್ರಹಿಸಿದೆ.

ಶನಿವಾರ ಮಹಿಳಾ ಮುನ್ನಡೆಯ ರಾಜ್ಯ ಸಮಿತಿ ಸದಸ್ಯೆ ಪವಿತ್ರಾ ಪತ್ರಿಕಾ ಹೇಳಿಕೆ ನೀಡಿದ್ದು, ನಮ್ಮ ಭಾರತದ ಸಂವಿಧಾನ ಪ್ರತಿಯೊಬ್ಬ ಪ್ರಜೆಗೂ ಸಮಾನ ಅವಕಾಶಗಳನ್ನು ನೀಡಬೇಕು ಎಂದು ಹೇಳುತ್ತದೆ. ಜವಾಬ್ದಾರಿಯುತ ಶಾಸಕ ಸ್ಥಾನದಲ್ಲಿರುವ ಯತ್ನಾಳ್ ಸಂವಿಧಾನದ ಮೂಲ ಆಶಯಗಳಿಗೆ ತದ್ವಿರುದ್ಧವಾಗಿ ಹೇಳಿಕೆಗಳನ್ನು ನೀಡುತ್ತಾ, ನಾಡಿನ ಜನತೆಯಲ್ಲಿ ಅಸ್ಪೃಶ್ಯತೆ, ಕೋಮುವಾದ, ವಿಷ ಬೀಜವನ್ನು ಬಿತ್ತುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದಾ ಮಹಿಳೆಯರ ಬಗ್ಗೆ ಅಗೌರವದಿಂದಲೇ ಹೇಳಿಕೆ ನೀಡುವ ಇಂತಹ ಶಾಸಕರಿಗೆ ಸರಕಾರ ಮತ್ತು ನ್ಯಾಯಾಲಯ ತಕ್ಕ ಪಾಠ ಕಲಿಸಬೇಕು. ಜಾತಿ, ಧರ್ಮಗಳ ನಡುವೆ ಸೌಹಾರ್ದ ಭಾವನೆಯನ್ನು ಉತ್ತೇಜಿಸುವ ಬದಲಿಗೆ, ಕೋಮುದ್ವೇಷವನ್ನು ಬಿತ್ತುವುದೇ ಆದ್ಯತೆಯನ್ನಾಗಿಸಿಕೊಂಡಿದ್ದಾನೆ. ಇಂತಹ ಮನುಸ್ಮೃತಿ ಮನಸ್ಥಿತಿಯುಳ್ಳ ಯತ್ನಾಳ ಜನಪ್ರತಿನಿಧಿಯಾಗಲು ಯೋಗ್ಯನಲ್ಲ ಎಂದು ಅವರು ಖಂಡಿಸಿದ್ದಾರೆ.

ಇದನ್ನು ಓದಿದ್ದೀರಾ? ಕೆಎಂಎಫ್‌ ಉತ್ಪನ್ನಗಳ ಮೇಲಿನ ದರ ಇಳಿಕೆ, ಹಾಲು & ಮೊಸರಿನ ದರ ಯಥಾಸ್ಥಿತಿ: ಬಿ. ಶಿವಸ್ವಾಮಿ

ದಮನಿತ ಸಮುದಾಯದ ಬಗ್ಗೆ ಮತ್ತು ಮಹಿಳೆಯರ ಬಗ್ಗೆ ಕೀಳು ಮಾನೋಭಾವ ಹೊಂದಿರುವ ಯತ್ನಾಳ್‌ರನ್ನು ಕೂಡಲೇ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಮತ್ತು ಅವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲು ಮಾಡಬೇಕು. ದಲಿತ ಸಮುದಾಯದ ಮಹಿಳೆರಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಮಹಿಳಾ ಮುನ್ನಡೆ ಸಂಘಟನೆಯ ಪವಿತ್ರಾ ಆಗ್ರಹಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

Download Eedina App Android / iOS

X