ಧಾರವಾಡ | ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಪ್ರತಿ ಕುಟುಂಬವೂ ಭಾಗವಹಿಸಲು ಜಿಲ್ಲಾಧಿಕಾರಿ ಕರೆ

Date:

Advertisements

ಜಿಲ್ಲೆಯಲ್ಲಿ ಸೆ. 22ರಿಂದ ಆರಂಭವಾಗುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪ್ರತಿಯೊಂದು ಕುಟುಂಬವು ಭಾಗವಹಿಸಿ, ಅಗತ್ಯ ಮಾಹಿತಿ ನೀಡುವ ಮೂಲಕ ಸಮೀಕ್ಷೆಗೆ ಸಹಕಾರ ನೀಡಬೇಕೆಂದು ಜಿಲ್ಲಾ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಮನವಿ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಮೀಕ್ಷೆದಾರರಿಗೆ ಈಗಾಗಲೇ ಜಿಲ್ಲಾ ಹಾಗೂ ತಾಲೂಕು ಹಂತದಲ್ಲಿ ತರಬೇತಿ ನೀಡಲಾಗಿದೆ. ಸಮೀಕ್ಷೆ ಮಾಡುವ ಮನೆಗಳಿಗೆ ಈಗಾಗಲೇ ಸ್ಟಿಕರ್ ಸಹ ಆಂಟಿಸಿ, ಸಮೀಕ್ಷೆಗಾಗಿ ಗುರುತಿಸಲಾಗಿದೆ. ಸಮೀಕ್ಷೆ ಮುಗಿಯುವವರೆಗೆ ಮನೆ ಬಾಗಿಲಿಗೆ ಅಂಟಿಸಿರುವ ಸ್ಟಿಕರ್ ತೆಗೆಯಬಾರದು. ಸಮೀಕ್ಷೆದಾರರು ಮನೆಗೆ ಬಂದಾಗ ಕುಟುಂಬದ ಎಲ್ಲ ಸದಸ್ಯರು ಶಿಕ್ಷಣ, ಉದ್ಯೋಗ, ಸೌಲಭ್ಯ ಪಡೆದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ, ಸಮೀಕ್ಷೆ ಕಾರ್ಯ ಯಶಸ್ವಿಯಾಗಿ ಜರುಗುವಂತೆ ಸಹಕರಿಸಬೇಕು. ಈಗಾಗಲೇ ಸಮೀಕ್ಷೆ ಮಾಡುವ ಮನೆಗಳಿಗೆ ಸ್ಟಿಕ್ಕರ್ ಅಂಟಿಸುವಿಕೆ ಹಾಗೂ ಗಣತಿದಾರರಿಗೆ ಯಾವ ಮನೆಗಳ ಸಮೀಕ್ಷೆ ಮಾಡಬೇಕೆಂಬ ಹೊಣೆಗಾರಿಕೆ ನಿಗದಿ ಮಾಡಲಾಗಿದೆ. ಮತ್ತು ಅವರಿಗೆ ತರಬೇತಿಯನ್ನೂ ಸಹ ನೀಡಲಾಗಿದೆ ಎಂದರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಜಾನಪದ ಸಾಹಿತ್ಯದಲ್ಲಿ ಮಹಿಳೆಯರ ಪಾತ್ರವೇ ಪ್ರಧಾನವಾಗಿದೆ: ಜ್ಯೋತಿ ಪಾಟೀಲ್

ಒಂದು ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿದ್ದಲ್ಲಿ, ಪಡಿತರ ಚೀಟಿವಾರು ಪ್ರತ್ಯೇಕ ಕುಟುಂಬವೆಂದು ಪರಿಗಣಿಸಿ ಸಮೀಕ್ಷೆ ನಡೆಸಲಾಗುವುದು. ಜಿಲ್ಲೆಯಲ್ಲಿ ಅಂದಾಜು 5,46,012 ಕುಟುಂಬಗಳ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಲಾಗುತ್ತಿದೆ. ಒಬ್ಬ ಸಮೀಕ್ಷೆದಾರ ಗರಿಷ್ಠ 150 ಕುಟುಂಬಗಳಿಗೆ ಭೇಟಿ ನೀಡಿ, ಮಾಹಿತಿ ದಾಖಲಿಸಲಿದ್ದಾರೆ. 4,880 ಗಣತಿದಾರರು ಸೆ.22 ರಿಂದ ಅ.7 ರ ವರೆಗೆ ಅಂದಾಜು 5,46,012 ಕುಟುಂಬಗಳ ಸಮೀಕ್ಷೆ ಮಾಡಲಿದ್ದಾರೆ. ಕುಟುಂಬಸ್ಥರು ಅಗತ್ಯ ಮಾಹಿತಿ ನೀಡಿ, ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಯಶಸ್ವಿಯಾಗಿ ಕೈಗೊಳ್ಳಲು ಸಾರ್ವಜನಿಕರು ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X