ರಾಯಚೂರು | ಒಂದೇ ಮನೆಗೆ ಮೂರು ಬಾರಿ ಜಿಪಿಎಸ್ : ರೈತ ಸಂಘಟನೆಯಿಂದ ಪ್ರತಿಭಟನೆ

Date:

Advertisements

ಲಿಂಗಸೂಗೂರು ತಾಲ್ಲೂಕಿನ ಈಚನಾಳ ಗ್ರಾಮ ಪಂಚಾಯತಿಯಲ್ಲಿ ಪಿಡಿಓ ಹಾಗೂ ಪ್ರಭಾವಿ ವ್ಯಕ್ತಿಗಳ ಅವ್ಯವಹಾರ ಬೆಳಕಿಗೆ ಬಂದಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಫಲಾನುಭವಿಗಳ ಆಯ್ಕೆಯಲ್ಲಿ ಅಕ್ರಮ ನಡೆದಿದ್ದು, ಅರ್ಹ ಫಲಾನುಭವಿಗಳನ್ನು ಬಿಟ್ಟು ಅನರ್ಹರಿಗೆ ಮನೆ ಹಂಚಿಕೆ ಮಾಡಲಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯವರು ಪ್ರತಿಭಟನೆ ನಡೆಸಿದರು.

ಮೂರು ವರ್ಷಗಳಿಂದ ಒಂದೇ ಮನೆಗೆ ಮೂರು ಬಾರಿ ಜಿಪಿಎಸ್ ನಡೆಸಿ, ಮೂವರಿಗೆ ತಲಾ ₹30,000 ಮೊತ್ತ ಪಾವತಿಸಲಾಗಿದೆ. ಲಕ್ಷ್ಮೀ (ಗಂಡ ಬಸವರಾಜ), ಯಶೋದಾ (ಗಂಡ ಶಿವಪ್ಪ) ಹಾಗೂ ವಿಶಾಲಾಕ್ಷಿ (ಗಂಡ ಶರಣಬಸವ) ಎಂಬವರ ಖಾತೆಗಳಿಗೆ ಸರ್ಕಾರದ ಹಣವನ್ನು ವರ್ಗಾವಣೆ ಮಾಡಲಾಗಿದೆ ಎಂದು ರೈತ ಸಂಘಟನೆಯವರು ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ಮನವಿ ಪತ್ರ ಸಲ್ಲಿಸಿದರು.

1000191058

ಸುಳ್ಳು ದಾಖಲೆ ಸೃಷ್ಟಿಸಿ ಸರ್ಕಾರದ ಹಣವನ್ನು ಲೂಟಿ ಮಾಡಲಾಗಿದೆ. ಪಿಡಿಓ ಹಾಗೂ ಪ್ರಭಾವಿ ವ್ಯಕ್ತಿಗಳಿಂದ ಈ ಅವ್ಯವಹಾರ ನಡೆದಿದೆ. ತಕ್ಷಣ ತನಿಖೆ ನಡೆಸಿ ಜವಾಬ್ದಾರರ ವಿರುದ್ಧ ಕಾನೂನು ಕ್ರಮ ಕೈಗೊಂಡು, ಸರ್ಕಾರಕ್ಕೆ ನಷ್ಟವಾದ ಹಣವನ್ನು ವಾಪಸ್ ಪಡೆಯಬೇಕು,” ಎಂದು ರೈತ ಸಂಘಟನೆಯ ನಾಯಕರು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮಳೆಯಿಂದ ಬೆಳೆ ಹಾನಿ : ಪರಿಹಾರಕ್ಕೆ ರೈತರ ಪ್ರತಿಭಟನೆ

ಈ ಬಗ್ಗೆ ರೈತ ಸಂಘದ ಮುಖಂಡ ಶಿವಪುತ್ರಪ್ಪ ಮಾತನಾಡಿ, “ಮೂರು ವರ್ಷಗಳಿಂದ ಒಂದೇ ಮನೆಗೆ ಮೂರು ಬಾರಿ ಜಿಪಿಎಸ್ ಮಾಡಿ ಹಣ ಕಳವು ಮಾಡಿದ ವಿಚಾರವನ್ನು ತಾಲ್ಲೂಕು ಪಂಚಾಯತ್‌ಗೆ ತಿಳಿಸಿದ್ದರೂ ಯಾವುದೇ ಸ್ಪಂದನೆ ಲಭಿಸಲಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಚಿತ್ತಾಪುರಕ್ಕೆ ಭೇಟಿ ನೀಡಿದಾಗ ಲೋಪದೋಷಗಳ ಬಗ್ಗೆ ಮನವಿ ಸಲ್ಲಿಸಲಾಯಿತು ” ಎಂದು ತಿಳಿಸಿದರು.

1000191043
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

Download Eedina App Android / iOS

X