ಕರ್ನಾಟಕದಲ್ಲೇ ಮೊದಲು ಎನ್ಇಪಿ‌ ಜಾರಿ ಮಾಡುವ ತರಾತುರಿ ಏನಿದೆ: ಡಿಕೆ ಶಿವಕುಮಾರ್ ಪ್ರಶ್ನೆ

Date:

  • ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಮಾಡುವ ನಿರ್ಧಾರದಿಂದ ಹಿಂದೆ ಸರಿಯಲ್ಲ
  • ಗುಜರಾತ್, ಉತ್ತರ ಪ್ರದೇಶದಲ್ಲಿ ಎನ್ಇಪಿ ಜಾರಿ ಏಕೆ ಮಾಡಿಲ್ಲ: ಡಿಕೆಶಿ ಕಿಡಿ

ಅಧಿಕಾರಕ್ಕೆ ಬಂದ ನಂತರ ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಮಾಡುತ್ತೇವೆ ಎಂದು ಮಾತು ಕೊಟ್ಟಿದ್ದೆವು. ಆ‌ ಮಾತಿಗೆ ನಾವು ಬದ್ಧರಾಗಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಪುನರ್‌ ಉಚ್ಚರಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು, “ಕರ್ನಾಟಕದಲ್ಲೇ ಮೊದಲು ಎನ್ಇಪಿ‌ ಜಾರಿ ಮಾಡುವ ತರಾತುರಿ ಏನಿದೆ? ಗುಜರಾತ್, ಉತ್ತರ ಪ್ರದೇಶದಲ್ಲಿ ಎನ್ಇಪಿ ಜಾರಿ ಏಕೆ ಮಾಡಿಲ್ಲ? ಕರ್ನಾಟಕದಲ್ಲಿರುವ ಶಿಕ್ಷಣ ವ್ಯವಸ್ಥೆ ದೇಶಕ್ಕೇ ಮಾದರಿಯಾಗಿದೆ” ಎಂದರು.

“ಬೆಂಗಳೂರು ಐಟಿ ರಾಜಧಾನಿಯಾಗಿದೆ. ರಾಜ್ಯದಲ್ಲಿನ ಅದೆಷ್ಟೋ ಜನ ವಿದೇಶದಲ್ಲಿ ಒಳ್ಳೆ ಸ್ಥಾನದಲ್ಲಿದ್ದಾರೆ. ಇದೆಲ್ಲದಕ್ಕೂ ನಮ್ಮ ಶಿಕ್ಷಣ ವ್ಯವಸ್ಥೆಯೇ ಕಾರಣ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ತಮಿಳುನಾಡಿಗೆ ನೀರು ಬೀಡುವ ವಿಚಾರವಾಗಿ ಪ್ರತಿಕ್ರಿಯಿಸಿ, “ನೀರು ಬೀಡುವ ಬಗ್ಗೆ ಕಾನೂನು, ಸಂವಿಧಾನದಲ್ಲೇ ಇದೆ. ಹೀಗಾಗಿ ನಾವು ನೀರು ಬಿಟ್ಟಿದ್ದೇವೆ. ರೈತರನ್ನು ಕಾಪಾಡುವುದು ನಮ್ಮ ಜವಾಬ್ದಾರಿ. ಸರ್ಕಾರ ಬ್ಯಾಲೆನ್ಸಿಂಗ್ ಆಕ್ಟ್ ಮಾಡಬೇಕಾಗುತ್ತೆ. ನಾವು ಬೋರ್ಡ್‌ಗೆ ಪತ್ರ ಬರೆದಿದ್ದೇವೆ. ದಿನಕ್ಕೆ ಹತ್ತು ಸಾವಿರ ಕ್ಯೂಸೆಕ್ಸ್ ನೀರು ಬಿಟ್ಟ ಬಗ್ಗೆ ಆದೇಶ ಹೊರಡಿಸಿ ಎನ್ನಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಿನ ಯುದ್ಧದಲ್ಲಿ ಮಾನ ಕಳೆದುಕೊಳ್ಳುತ್ತಿರುವ ನಾಯಕರು

ರಾಜ್ಯದಿಂದ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುಗಡೆ ವಿಚಾರವಾಗಿ ಸರ್ವಪಕ್ಷ ಸಭೆ ಕರೆಯುವಂತೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್‌ ಮಾಡಿರುವ ವಿಚಾರವಾಗಿ ಮಾತನಾಡಿ, “ಎಚ್​ ಡಿ ಕುಮಾರಸ್ವಾಮಿ ಕೇಳಿರೋದಲ್ಲಿ ಯಾವುದೇ ತಪ್ಪಿಲ್ಲ. ಕೇವಲ ಕಾವೇರಿ ವಿಚಾರ ಮಾತ್ರವಲ್ಲ, ಮಹದಾಯಿ, ಕೃಷ್ಣಾ ಸೇರಿದಂತೆ ಪ್ರಮುಖ ವಿಚಾರ ಬಗ್ಗೆ ಸರ್ವಪಕ್ಷಗಳ ಜತೆ ಚರ್ಚಿಸುವುದರಲ್ಲಿ ತಪ್ಪಿಲ್ಲ. ಸರ್ವಪಕ್ಷಗಳ ಸಭೆ ನಡೆಸುವ ಬಗ್ಗೆ ನಾವೂ ಆಲೋಚನೆ ಮಾಡಿದ್ದೇವೆ” ಎಂದು ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಜ್ವಲ್ ಪ್ರಕರಣ | ಉಪ್ಪು ತಿಂದವನು ನೀರು ಕುಡಿಯಲೇಬೇಕು: ಎಚ್ ಡಿ ಕುಮಾರಸ್ವಾಮಿ

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ...

ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ...

ಚಿಕ್ಕಬಳ್ಳಾಪುರದಲ್ಲಿ ಶೇ.72 ರಷ್ಟು ಶಾಂತಿಯುತ ಮತದಾನ; ಯಲಹಂಕದಲ್ಲಿ ಡಲ್, ಹೊಸಕೋಟೆಯಲ್ಲಿ ಬಹುತೇಕ ಫುಲ್

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಶುಕ್ರವಾರ ಶೇ.72 ರಷ್ಟು ಮಂದಿ ಮತ ಚಲಾವಣೆ...

ರಾಯಚೂರು | ಬಿಸಿಲಿನ ತಾಪಕ್ಕೆ ನಿರ್ಜಲೀಕರಣ; ಇಬ್ಬರು ಮಕ್ಕಳು ಸಾವು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದೆ. ಭೀಕರ ಬಿಸಿಲಿನ ತಾಪಕ್ಕೆ...