ಬೆಳಗಾವಿ : ಹುಕ್ಕೇರಿ ಪಿಕೆಪಿಎಸ್ ಸಭೆ : ಜಾರಕಿಹೊಳಿ ಬಣಕ್ಕೆ ಏಳು ಮತಗಳ ಸಾಥ್

Date:

Advertisements

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ಇನ್ನೂ ಒಂದು ತಿಂಗಳು ಬಾಕಿ ಇರುವಂತೆಯೇ, ಬಣಗಳ ನಡುವಿನ ತಾಕಲಾಟ ತೀವ್ರಗೊಂಡಿದೆ. ಹುಕ್ಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ಪಿಕೆಪಿಎಸ್) ಸಭೆಯಲ್ಲಿ ಏಳು ಮತಗಳು ಜಾರಕಿಹೊಳಿ ಬಣದ ಪಾಲಾಗಿವೆ.

ಸಭೆಯಲ್ಲಿ ಸಂಘದ ಪ್ರತಿನಿಧಿಯಾಗಿ ಮತ ಚಲಾಯಿಸಲು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಬಸಗೌಡ ಶಿವಗೌಡ ಪಾಟೀಲ್ ಅವರಿಗೆ ಸಮ್ಮತಿ ನೀಡಲಾಯಿತು. ಇದರೊಂದಿಗೆ ಸಂಘವು ಅಧಿಕೃತವಾಗಿ ಜಾರಕಿಹೊಳಿ ಬಣದ ತೆಕ್ಕೆಗೆ ಜಾರಿದಂತಾಯಿತು.

ಮೊದಲು ಸಂಘದ ಅಧ್ಯಕ್ಷರು ತಮ್ಮ ನಾಲ್ಕು ನಿರ್ದೇಶಕರೊಂದಿಗೆ ಹೊರಬಂದು ಕತ್ತಿ–ಪಾಟೀಲ್ ಬಣಕ್ಕೆ ಬೆಂಬಲ ಕೋರಿದರೂ, ಉಳಿದವರು ಜಾರಕಿಹೊಳಿ ಪರ ನಿಂತರು. ನಂತರ ಜಾರಕಿಹೊಳಿ ಬೆಂಬಲಿತ ನಿರ್ದೇಶಕರು ಹೊರಬಂದು ತಾವು ಆ ಬಣದ ಪರವೇ ಮತ ಚಲಾಯಿಸುವುದಾಗಿ ಘೋಷಿಸಿದರು.

ಸಭೆಯಲ್ಲಿ ಮುಖಂಡರಾದ ಕಿರಣಸಿಂಗ್ ರಜಪೂತ್, ಮೌನೇಶ್ ಪೋತದಾರ್, ಬಾರ್ಚಿ, ಸಲಿಂ ಕಳಾವಂತ, ಚಂದು ಗಂಗನ್ನವರ, ಅರ್ಬನ್ ಬ್ಯಾಂಕ್ ಅಧ್ಯಕ್ಷ ಚಂದು ಪಾಟೀಲ್, ತಮ್ಮಣ್ಣಗೌಡ ಪಾಟೀಲ್, ಮಾರುತಿ ಪವಾರ್, ಬ್ಯಾಳಿ ಬಸು, ಸೋಮು ಮಠಪತಿ, ಶಿವರಾಜ ನಾಯಿಕ, ಅರವಿಂದ ದೇಶಪಾಂಡೆ, ಅಜ್ಜಪ್ಪ ಅಳವಡೆ, ಮಾಜಿ ಅಧ್ಯಕ್ಷ ಬಸವರಾಜ ನಾಯಿಕ ಸೇರಿದಂತೆ ಹಲವರು ಹಾಜರಿದ್ದರು.

ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ee dina logo with tagline copy
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಜಾರಕಿಹೊಳಿ ಸಹೋದರರಿಂದ ಹುಕ್ಕೇರಿಯಲ್ಲಿ ಮದ್ಯ–ಮಾಂಸ ಬಾಡೂಟ : ರಮೇಶ ಕತ್ತಿ ಆರೋಪ

ಬೆಳಗಾವಿ ಜಿಲ್ಲೆಯ ಸಹಕಾರಿ ಸಂಘಗಳ ಚುನಾವಣಾ ಹಿನ್ನಲೆಯಲ್ಲಿ ಹುಕ್ಕೇರಿ ತಾಲೂಕಿನ ಹಲವು...

ಬೆಳಗಾವಿ : ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬದಲಾವಣೆ ಪ್ರಿಂಟ್ ಮಿಸ್ಟೇಕ್ ? : ಶಾಸಕ ರಾಜು ಕಾಗೆ

ಬೆಳಗಾವಿ ಜಿಲ್ಲೆಯ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಶಾಸಕ ರಾಜು ಕಾಗೆ...

ಬೆಳಗಾವಿ : ಸಭೆಯಲ್ಲಿ ಕಣ್ಣೀರು ಹಾಕಿದ ಮಾಜಿ ಸಂಸದ ರಮೇಶ ಕತ್ತಿ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ದಿವಂಗತ ಮಾಜಿ ಸಚಿವ...

ಬೆಳಗಾವಿ : ನಗರದಲ್ಲಿ ರೈತರ ಪ್ರತಿಭಟನೆ ಎಫ್‌ಐಆರ್ ದಾಖಲು

ಜೈ ಕಿಸಾನ್ ತರಕಾರಿ ಮಾರುಕಟ್ಟೆ ಓಪನ್ ಮಾಡುವಂತೆ ಆಗ್ರಹಿಸಿ ಚೆನ್ನಮ್ಮ ವೃತ್ತದಲ್ಲಿ...

Download Eedina App Android / iOS

X