ರಾಜ್ಯದಲ್ಲಿ ಆನ್‌ಲೈನ್‌ ಗೇಮ್‌ ನಿಷೇಧ ಕಾಯ್ದೆ ಜಾರಿಗೊಳಿಸಿ : ಶಾಸಕ ಶೈಲೇಂದ್ರ ಬೆಲ್ದಾಳೆ

Date:

Advertisements

ಹಣ ಪಣಕ್ಕಿಟ್ಟು ಆಟವಾಡುವ ಎಲ್ಲ ತರಹದ ಆನ್‌ಲೈನ್‌ ಗೇಮ್‌ಗಳ ನಿಷೇಧಕ್ಕೆ ಕೇಂದ್ರ ಸರ್ಕಾರ ಕಠಿಣ ಕಾಯ್ದೆ ರೂಪಿಸಿದ್ದು, ಅಕ್ಟೋಬರ್ 1ರಿಂದ ಜಾರಿಗೆ ಬರಲಿದೆ. ರಾಜ್ಯದಲ್ಲೂ ಈ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೆ ತರಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ರಾಜ್ಯ ಕಾರ್ಯದರ್ಶಿ, ಬೀದರ್ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಒತ್ತಾಯಿಸಿದ್ದಾರೆ.

ʼರಮ್ಮಿ ಜೂಜಾಟ ಸೇರಿದಂತೆ ಆನ್‌ಲೈನ್ ಆಟಗಳನ್ನು ನಿಷೇಧಿಸುವ ಆನ್‌ಲೈನ್ ಗೇಮಿಂಗ್ ನಿಯಂತ್ರಣ ಮಸೂದೆ-2025 ಈಗಾಗಲೇ ಅಂಗೀಕಾರಗೊಂಡಿದ್ದು,  ರಾಷ್ಟ್ರಪತಿಗಳ ಅಂಕಿತವೂ ಬಿದ್ದಿದೆ. ಅ.1ರಿಂದ ಹೊಸ ಕಾಯ್ದೆಯಡಿ ಕಠಿಣ ನಿಯಮ ಜಾರಿಗೊಳ್ಳಲಿವೆ. ಈ ಕಾಯ್ದೆ ಜಾರಿ ಮುಖಾಂತರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕವಾಗಿ ಐತಿಹಾಸಿಕ ದಿಟ್ಟ ಹೆಜ್ಜೆ ಇರಿಸಿದೆʼ ಎಂದು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ʼಆನ್‌ಲೈನ್ ಆ್ಯಪ್ ಗೇಮಿಂಗ್ ನಿಷೇಧ ಕಾಯ್ದೆಯು ಯುವಸಮೂಹ ಈ ಚಟಕ್ಕೆ ದಾಸರಾಗುವುದನ್ನು ತಡೆಗಟ್ಟಲಿದೆ. ಹಣಕಾಸು ವಂಚನೆ, ಅಕ್ರಮ ಹಣ ವರ್ಗಾವಣೆಗೆ ಬ್ರೇಕ್ ಹಾಕಲಿದೆ. ನಿಯಮ ಉಲ್ಲಂಘಿಸಿದವರಿಗೆ ಕಠಿಣ ಜೈಲು ಶಿಕ್ಷೆ ಹಾಗೂ 1 ಕೋಟಿ ರೂಪಾಯಿವರೆಗೆ ದಂಡ  ವಿಧಿಸುವ ಅವಕಾಶ ಕಲ್ಪಿಸಿರುವುದು ಸ್ತುತ್ಯಾರ್ಹವಾಗಿದೆ. ಈ ನಿಷೇಧ ಕಾಯ್ದೆ ಜಾರಿಯಿಂದಾಗಿ ಅನೇಕ ಕುಟುಂಬಗಳ ಆರ್ಥಿಕ ಸ್ಥಿರತೆ ಕಾಪಾಡಲಿದೆ. ವಿಶೇಷವಾಗಿ ಬಡ ಹಾಗೂ ಮಧ್ಯಮ ವರ್ಗದವರಿಗೆ ಈ ಕಾಯ್ದೆ ವರದಾನ ಎನಿಸಿದೆʼ ಎಂದು ಅಭಿಪ್ರಾಯಪಟ್ಟಿದ್ದಾರೆ.

ʼಆನ್‌ಲೈನ್ ಗೇಮಿಂಗ್ ನಲ್ಲಿ ಹಣ ಕಳೆದುಕೊಂಡು ಅಸಂಖ್ಯಾತ ಕುಟುಂಬ ಬೀದಿಗೆ ಬಿದ್ದಿವೆ. ಅನೇಕರು ಆತ್ಮಹತ್ಯೆಯ ಹಾದಿ ತುಳಿದಿದ್ದಾರೆ. ಯುವ ಪೀಳಿಗೆಯ ಭವಿಷ್ಯ ಹಾಳು ಮಾಡುವ ಆನ್‌ಲೈನ್ ಗೇಮಿಂಗ್ ಗಳು ಸಮಾಜದಲ್ಲಿ ಗಂಭೀರ ಸಮಸ್ಯೆ ಸೃಷ್ಟಿಸುತ್ತಿವೆʼ ಎಂದರು.

ಇದನ್ನೂ ಓದಿ : ಪ್ರತ್ಯೇಕ ಧರ್ಮದ ಪ್ರಯತ್ನ ಮುಂದುವರಿಯಲಿದೆ, ವೀರಶೈವ-ಲಿಂಗಾಯತವೇ ನಮ್ಮ ನಿಲುವು: ಈಶ್ವರ ಖಂಡ್ರೆ

ʼಸಾಮಾಜಿಕ ವ್ಯವಸ್ಥೆ ಜೊತೆಗೆ ಶಿಕ್ಷಣ, ಉದ್ಯೋಗ, ಕುಟುಂಬ ಜೀವನಗಳ ಮೇಲೂ ದುಷ್ಪರಿಣಾಮ ಬೀರುವ ಆನ್‌ಲೈನ್ ಗೇಮಿಂಗ್ ವ್ಯಸನದಿಂದ ಸಮಾಜ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಈ  ಕಾಯ್ದೆಯ ಕಠಿಣ ಅನುಷ್ಠಾನಕ್ಕೆ  ರಾಜ್ಯ ಸರ್ಕಾರ ತಕ್ಷಣವೇ ಮುಂದಾಗಬೇಕು. ಇಲ್ಲದಿದ್ದರೆ ಪಕ್ಷ ಜನಹಿತದಿಂದ ಹೋರಾಟ ನಡೆಸುವುದು ಅನಿವಾರ್ಯʼ ಎಂದು ಶಾಸಕ ಬೆಲ್ದಾಳೆ ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

Download Eedina App Android / iOS

X