ಕೇಂದ್ರ ಸರ್ಕಾರ ಯಾವುದೇ ರಾಜ್ಯದ ಮೇಲೆ ಭಾಷಾ ಹೇರಿಕೆ ಮಾಡುತ್ತಿಲ್ಲ: ಧರ್ಮೇಂದ್ರ ಪ್ರಧಾನ್

Date:

Advertisements

ಕೇಂದ್ರ ಸರ್ಕಾರವು ಯಾವ ರಾಜ್ಯದ ಮೇಲೂ ಭಾಷಾ ಹೇರಿಕೆಯನ್ನು ಮಾಡುತ್ತಿಲ್ಲ. ಕೇಂದ್ರವು ರಾಜ್ಯಗಳ ಮೇಲೆ ತ್ರಿಭಾಷಾ ನೀತಿಯನ್ನು ಹೇರುತ್ತಿದೆ ಎಂದು ಹೇಳುವವರು ರಾಜಕೀಯ ಮಾಡುತ್ತಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಭಾನುವಾರ ಹೇಳಿದ್ದಾರೆ.

‘ಥಿಂಕ್ ಇಂಡಿಯಾ ದಕ್ಷಿಣಪಥ ಶೃಂಗಸಭೆ 2025’ ರಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಪ್ರಧಾನ್ ಐಐಟಿ ಮದ್ರಾಸ್‌ನ ನಿರ್ದೇಶಕ ಪ್ರೊಫೆಸರ್ ವಿ ಕಾಮಕೋಟಿ ಅವರ ಸಮ್ಮುಖದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ ಶಾಲೆಗಳಲ್ಲಿ ಹಿಂದಿ ಹೇರಿಕೆಗೆ ವಿರೋಧ: ಮತ್ತೆ ಒಂದಾದ ರಾಜ್, ಉದ್ಧವ್ ಠಾಕ್ರೆ

“ನಾವು ಯಾರ ಮೇಲೂ ಯಾವುದೇ ಭಾಷೆಯನ್ನು ಹೇರುತ್ತಿಲ್ಲ. 1 ಮತ್ತು 2ನೇ ತರಗತಿಗಳಿಗೆ ಎರಡು ಭಾಷಾ ಸೂತ್ರ ಇರುತ್ತದೆ. ಒಂದು ಮಾತೃಭಾಷೆ ಇರುತ್ತದೆ. ಇಲ್ಲಿ ಅದು ತಮಿಳು ಭಾಷೆಯಾಗಿರುತ್ತದೆ. ಪ್ರಾಥಮಿಕ ಶಾಲೆಯಲ್ಲಿ ನೀವು ತಮಿಳಿನಲ್ಲಿ ಕಲಿಸಬೇಕು ಎಂಬುದು ಭಾರತ ಸರ್ಕಾರದ ಷರತ್ತು. ನಿಮ್ಮ ಆಯ್ಕೆಯ ಇನ್ನೊಂದು ಭಾಷೆಯನ್ನು ನೀವು ಕಲಿಸಬಹುದು” ಎಂದು ಹೇಳಿದರು.

“ಆರರಿಂದ ಹತ್ತನೇ ತರಗತಿಯವರೆಗೆ ತ್ರಿಭಾಷಾ ಸೂತ್ರವಿದೆ. ಒಂದು ಭಾಷೆ ಮಾತೃಭಾಷೆಯಾಗಿರುತ್ತದೆ. ಉಳಿದ ಎರಡು ನಿಮ್ಮ ಆಯ್ಕೆಯಾಗಿರುತ್ತದೆ. ಯಾವುದೇ ರಾಜ್ಯದ ಮೇಲೆ ಭಾರತ ಸರ್ಕಾರವು ಯಾವುದೇ ಭಾಷೆಯನ್ನು ಹೇರುವುದಿಲ್ಲ” ಎಂದು ತಿಳಿಸಿದರು.

ಇನ್ನು ಉತ್ತರ ಪ್ರದೇಶದಂತಹ ರಾಜ್ಯದಲ್ಲಿ ತ್ರಿಭಾಷಾ ನೀತಿಯನ್ನು ಹೇಗೆ ಜಾರಿಗೆ ತರಲಾಗುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಧಾನ್, “ನಾವು ಆ ರಾಜ್ಯದಲ್ಲೂ ಜಾರಿಗೆ ತರುತ್ತಿದ್ದೇವೆ. ಬಿಜೆಪಿ ಆಡಳಿತದ ರಾಜ್ಯಗಳನ್ನು ಮರೆತು ಅನೇಕ ರಾಜ್ಯ ಸರ್ಕಾರಗಳು ರಾಷ್ಟ್ರೀಯ ಶಿಕ್ಷಣ ನೀತಿಗೆ ಮುಂಚಿತವಾಗಿ ತ್ರಿಭಾಷಾ ನೀತಿಯನ್ನು ಜಾರಿಗೆ ತರುತ್ತಿವೆ” ಎಂದು ಹೇಳಿದರು.

“ಉತ್ತರ ಪ್ರದೇಶದಲ್ಲಿ, ಒಬ್ಬ ವಿದ್ಯಾರ್ಥಿ ಹಿಂದಿಯನ್ನು ಮಾತೃಭಾಷೆಯಾಗಿ ಕಲಿಯುತ್ತಾನೆ. ನಂತರ ಮರಾಠಿ ಮತ್ತು ತಮಿಳು ಕಲಿಯುವ ಆಯ್ಕೆ ಮಾಡಬಹುದು. ಯುಪಿಯಲ್ಲಿ ಕೆಲವು ವಿದ್ಯಾರ್ಥಿಗಳು ತಮಿಳನ್ನು ಮೂರನೇ ಭಾಷೆಯಾಗಿ ತೆಗೆದುಕೊಳ್ಳಬಹುದು. ಯುಪಿ ಸರ್ಕಾರ ತಮಿಳು ಕಲಿಸಲು ಸೌಲಭ್ಯವನ್ನು ಒದಗಿಸಬೇಕು” ಎಂದರು.

ಕೇಂದ್ರ ಸರ್ಕಾರವು ತ್ರಿಭಾಷಾ ನೀತಿಯಡಿಯಲ್ಲಿ ಹಿಂದಿ ಭಾಷೆಯನ್ನು ಹೇರಿಕೆ ಮಾಡುತ್ತಿದೆ ಎಂದು ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳು ಆರೋಪಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

Download Eedina App Android / iOS

X