ದಸರಾ ಉದ್ಘಾಟನೆಗೆ ಕ್ಷಣಗಣನೆ: ಬಾನು ಮುಷ್ತಾಕ್‌ ಅವರಿಂದ ಇಂದು ಚಾಲನೆ, ಭಾರಿ ಬಿಗಿ ಭದ್ರತೆ

Date:

Advertisements

ನಾಡಹಬ್ಬ ದಸರಾ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರು ಸೋಮವಾರ (ಸೆ.22) ದಸರಾ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಮೈಸೂರು ದಸರಾ ಉದ್ಘಾಟನೆಗೆ ಮುಸ್ಲಿಂ ಮಹಿಳೆಯನ್ನು ಸರ್ಕಾರ ಆಯ್ಕೆ ಮಾಡಿರುವುದು ಇದೇ ಮೊದಲು. ಬಾನು ಮುಷ್ತಾಕ್‌ ಅವರ ಆಯ್ಕೆ ಮಾಡಿದ್ದಕ್ಕೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಆಕ್ಷೇಪ ವ್ಯಕ್ತಪಡಿಸಿ, ಬಿಜೆಪಿ ನಾಯಕರು ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಎರಡೂ ಕೋರ್ಟ್‌ಗಳು ಬಾನು ಮುಷ್ತಾಕ್‌ ಆಯ್ಕೆ ವಿರೋಧಿಸಿದವರಿಗೆ ಕಪಾಳಮೋಕ್ಷ ಮಾಡಿವೆ.

ದಸರಾ ಉದ್ಘಾಟಿಸಲಿರುವ ಬಾನು ಮುಷ್ತಾಕ್‌ ಅವರು ಖಾಸಗಿ ಹೋಟೆಲಿನಲ್ಲಿ ವಾಸ್ತವ್ಯ ಹೊಂದಿದ್ದು, ಸರ್ಕಾರ ಬಿಗಿ ಭದ್ರತೆ ನೀಡಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಪೊಲೀಸರಿಂದ ಭಾರಿ ಭದ್ರತೆ ನೀಡಲಾಗಿದೆ.

ಸ್ಥಳದಲ್ಲಿ 3 ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಿದ್ದು, ಬೆಳಗ್ಗೆ 9:30ಕ್ಕೆ ಹೋಟೆಲಿನಿಂದ ಬಾನು ಮುಷ್ತಾಕ್‌ ಪೊಲೀಸ್‌ ಎಸ್ಕಾರ್ಟ್‌ ಮೂಲಕ ಚಾಮುಂಡಿ ಬೆಟ್ಟಕ್ಕೆ ತೆರಳಲಿದ್ದಾರೆ. ಮೂರು ಕಡೆ ಚೆಕ್ಕಿಂಗ್‌ ಪಾಯಿಂಟ್‌ ಇದ್ದು ಆಗಮಿಸುವ ಪ್ರತಿಯೊಬ್ಬರನ್ನು ಪರಿಶೀಲಿಸಿದ ಬಳಿಕವಷ್ಟೇ ಬೆಟ್ಟಕ್ಕೆ ಪ್ರವೇಶ ಕಲ್ಪಿಸಲಾಗುತ್ತದೆ.

ಉದ್ಘಾಟಕರ ಸ್ವಾಗತಕ್ಕೆ ಚಾಮುಂಡಿ ಬೆಟ್ಟ ಸಿದ್ಧವಾಗಿದ್ದು ಮಹಿಷಾಸುರ ಮೂರ್ತಿಯಿಂದ ದೇವಾಲಯದವರೆಗೆ ಸಾಂಪ್ರಾದಾಯಿಕ ಸ್ವಾಗತ ನೀಡಲಾಗುತ್ತದೆ. ರಸ್ತೆ ಉದ್ದಕ್ಕೂ ರಂಗೋಲಿ ಬಿಡಿಸಿ, ಬಾಳೆ ಕಂಬ ಕಟ್ಟಿ ಸ್ವಾಗತಿಸಲು ತಯಾರಿ ನಡೆದಿದೆ.

ಸೆ.22ರಿಂದ ಅ.2ರವರೆಗೆ ನಡೆಯುವ ಉತ್ಸವ ಇಂದು ಬೆಳಿಗ್ಗೆ ಬೆಟ್ಟದಲ್ಲಿ ಬೆಳಿಗ್ಗೆ 10.10ರಿಂದ 10.40ರೊಳಗೆ ನಾಡದೇವತೆ ಚಾಮುಂಡೇಶ್ವರಿ ದೇವಿಯ ‘ಅಗ್ರಪೂಜೆ’ಯೊಂದಿಗೆ ಆರಂಭಗೊಳ್ಳಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಜನಪ್ರತಿನಿಧಿಗಳು ಪಾಲ್ಗೊಳ್ಳುವರು. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅಧ್ಯಕ್ಷತೆ ವಹಿಸುವರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X