ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಕೆ ಸುಧಾಕರ್ ಪತ್ನಿ ಡಾ. ಪ್ರೀತಿ ಸುಧಾಕರ್ ಅವರಿಗೆ ಸೈಬರ್ ವಂಚಕರು ಡಿಜಿಟಲ್ ಅರೆಸ್ಟ್ ಮೂಲಕ ವಂಚಿಸಿದ್ದಾರೆ.
ಆಗಸ್ಟ್ 26ರಂದು ಡಾ. ಪ್ರೀತಿ ಸುಧಾಕರ್ ಅವರಿಗೆ ಫೋನ್ ಕರೆ ಬಂದಿದೆ. ಬೆಳಿಗ್ಗೆ 9.30ಕ್ಕೆ ಕರೆ ಮಾಡಿದ್ದ ಸೈಬರ್ ವಂಚರು, ನಾವು ಮುಂಬೈ ಸೈಬರ್ ಇಲಾಖೆಯ ಸಿಬ್ಬಂದಿ ಎಂದು ಹೇಳಿಕೊಂಡು ವಂಚಿಸಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.
ನಿಮ್ಮ ದಾಖಲೆಗಳನ್ನು ಸದ್ಭತ್ ಖಾನ್ ಎಂಬ ಅಪರಿಚಿತ ವ್ಯಕ್ತಿ ಬಳಸಿಕೊಂಡಿದ್ದಾನೆ. ನಿಮ್ಮ ಹೆಸರಲ್ಲಿ ಕ್ರೆಡಿಟ್ ಕಾರ್ಡ್ ಮಾಡಿಸಿ ಅಕ್ರಮ ಟ್ರನ್ಸಾಕ್ಷನ್ ನಡೆಸಿದ್ದಾನೆ. ವಿದೇಶಕ್ಕೆ ಕಾನೂನು ಬಾಹಿರ ಚಟುವಟಿಕೆ ನಡೆಸಲು ಜನರನ್ನ ಕಳುಹಿಸಿದ್ದಾನೆ ಎಂದು ಸೈಬರ್ ಕ್ರಿಮಿಗಳನ್ನು ಕಥೆ ಕಟ್ಟಿದ್ದಾರೆ ಎನ್ನಲಾಗಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಜಿಎಸ್ಟಿ ದರ ಇಳಿಕೆ ಲಾಭ ಗ್ರಾಹಕರಿಗೆ ದೊರೆಯಲಿ!
ಸದ್ಬತ್ ಖಾನ್ನ ಅರೆಸ್ಟ್ ಮಾಡಲಾಗಿದೆ. ಆತನ ಹೇಳಿಕೆಯಲ್ಲಿ ನಿಮ್ಮ ಹೆಸರಿನ ದಾಖಲೆಯಿದೆ. ಇದರ ವಿಚಾರಣೆ ನಡೆಸುವುದಕ್ಕೆ ವಿಡಿಯೋ ಕಾಲ್ ಮಾಡಿದ್ದೀವಿ. ಆತ ನಿಮ್ಮ ದಾಖಲೆ ಹಾಗೂ ವೈಯಕ್ತಿಕ ದಾಖಲೆಗಳನ್ನು ರದ್ದು ಮಾಡುವುದಾಗಿ ಬೆದರಿಕೆ ಹಾಕಿದ್ದ. ನಿಮ್ಮ ಅಕೌಂಟ್ ಅಕ್ರಮ ಆಗಿದ್ದು ಹಣ ಹಾಕಿ ಎಂದು ಬೆದರಿಕೆ ಹಾಕಿದ್ದಾನೆ.
ಇದರಿಂದ ಹೆದರಿದ ಪ್ರೀತಿ ಅವರು 14 ಲಕ್ಷ ಹಣವನ್ನು ವಂಚಕರ ಖಾತೆಗೆ ಹಾಕಿದ್ದಾರೆ. ಆರ್ ಬಿ ಐ ರೂಲ್ಸ್ ಪರಿಶೀಲನೆ ಮಾಡಿ 45 ನಿಮಿಷದಲ್ಲಿ ವಾಪಸ್ ಹಾಕೋದಾಗಿ ವಂಚಕ ತಿಳಿಸಿದ್ದಾನೆ. ಪ್ರೀತಿ ಸುಧಾಕರ್ ಇಂದ 14 ಲಕ್ಷ ಹಣವನ್ನ ಆರ್ ವಂಚಕರು ಆರ್ಟಿಜಿಎಸ್ ಮಾಡಿಸಿಕೊಂಡಿದ್ದಾರೆ. ಹಣ ಹಾಕಿದ ನಂತರ ವಂಚನೆಯಾಗಿರುವುದು ಪತ್ತೆಯಾಗಿದೆ.
ಹಣ ಹಾಕಿದ ನಂತರ ವಂಚನೆಯಾಗಿರೋದು ಪತ್ತೆಯಾಗಿದೆ. ಪ್ರೀತಿ ಸುಧಾಕರ್ ನೀಡಿದ ದೂರಿನ ಮೇರೆಗೆ ಸೈಬರ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಔರಾದ್ನ ಮಾಜಿ ಶಾಸಕ ಗುಂಡಪ್ಪ ವಕೀಲ್ಗೆ ಇತ್ತೀಚಿಗಷ್ಟೆ ವಂಚನೆ ಮಾಡಲಾಗಿತ್ತು. ಆಗಸ್ಟ್ 12ರಂದು ಸಿಬಿಐ ಅಧಿಕಾರಿಗಳು ಅಂತ ಹೇಳಿ ಕರೆ ಮಾಡಿದ್ದ ವಂಚಕರು 30 ಲಕ್ಷ ದೋಚಿದ್ದರು.