ಬೆಂಗಳೂರು | ₹37,500 ಮೌಲ್ಯದ 550 ಕೆಜಿ ಟೊಮೆಟೊ ಕಳ್ಳತನ

Date:

Advertisements
  • ಹಲಸೂರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲು
  • 22 ಕೆಜಿ ತೂಕದ 30 ಟ್ರೆ ಬಾಕ್ಸ್‌ ಟೊಮೆಟೊ ಖರೀದಿ

ಟೊಮೆಟೊ ಬೆಲೆ ಗಗನಕ್ಕೇರಿದ್ದ ಸಮಯದಲ್ಲಿ ಕಳ್ಳತನ ಪ್ರಕರಣಗಳು ವರದಿಯಾಗಿದ್ದವು. ಇದೀಗ ಬೆಲೆ ಇಳಿಕೆ ಕಂಡಿದೆ. ಆದರೂ, ಕಳ್ಳತನದ ಪ್ರಕರಣಗಳು ಮಾತ್ರ ಮುಂದುವರೆದಿದ್ದು, ಬೆಂಗಳೂರಿನ ಹಲಸೂರು ಮರ್ಫಿ ಟೌನ್‌ನಲ್ಲಿರುವ ತರಕಾರಿ ಅಂಗಡಿಯಿಂದ ಬರೋಬ್ಬರಿ ₹37,500 ಮೌಲ್ಯದ 550 ಕೆಜಿ ಟೊಮೆಟೊ ಕಳ್ಳತನವಾಗಿದೆ ಎಂದು ತಿಳಿದುಬಂದಿದೆ.

ಹಲಸೂರಿನ ಮರ್ಫಿ ಟೌನ್‌ ನಿವಾಸಿ ಪ್ರಶಾಂತ್ ಟಿ ಎಂಬುವವರ ಅಂಗಡಿಯಿಂದ ಟೊಮೆಟೊ ಕಳ್ಳತನವಾಗಿದೆ. ಪ್ರಶಾಂತ್ ಅವರು ಆಗಸ್ಟ್‌ 11ರಂದು ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಶಿವಾಜಿನಗರ ಮಾರುಕಟ್ಟೆಯಿಂದ 22 ಕೆಜಿ ತೂಕದ 30 ಟ್ರೆ ಬಾಕ್ಸ್‌ ಟೊಮೆಟೊ ಖರೀದಿ ಮಾಡಿದ್ದರು.

ಖರೀದಿ ಮಾಡಿ ತಂದ ಟೊಮೆಟೊಗಳನ್ನು ಅವರ ಅಂಗಡಿಯಲ್ಲಿ ಇರಿಸಿದ್ದರು. ಈ 30 ಟ್ರೆ ಟೊಮೆಟೊಗಳಲ್ಲಿ 5 ಟ್ರೆ ಬಾಕ್ಸ್‌ ಟೊಮೆಟೊ ಮಾರಾಟ ಮಾಡಿದ್ದರು. ರಾತ್ರಿ ವೇಳೆ ಸುಮಾರು 11 ಗಂಟೆಗೆ ಮನೆಗೆ ಹೋಗುವಾಗ ತಮ್ಮ ಅಂಗಡಿಯಲ್ಲಿದ್ದ 25 ಟೊಮೆಟೊ ಟ್ರೆ ಬಾಕ್ಸ್‌ಗಳ ಮೇಲೆ ಟಾರ್ಪಲಿನಿಂದ ಮುಚ್ಚಿ ಬಿಗಿಯಾಗಿ ಹಗ್ಗ ಕಟ್ಟಿ ಹೋಗಿದ್ದರು. ಬೆಳಗ್ಗೆ ಬಂದು ನೋಡಿದಾಗ ಅಂಗಡಿಯಲ್ಲಿ ಟೊಮೆಟೊ ಟ್ರೆ ಬಾಕ್ಸ್‌ಗಳು ಕಾಣೆಯಾಗಿದ್ದವು.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಉದ್ಘಾಟನೆ

ಬಳಿಕ ಪಕ್ಕದ ಅಂಗಡಿಯಲ್ಲಿದ್ದ ಸಿಸಿಟಿವಿ ಕ್ಯಾಮರಾ ಪರಿಶೀಲನೆ ಮಾಡಿದಾಗ ಆಗಸ್ಟ್ 12 ರಂದು ಬೆಳಗ್ಗೆ 4.30 ರ ಸುಮಾರಿಗೆ ಇಬ್ಬರು ವ್ಯಕ್ತಿಗಳು ಆಟೋದಲ್ಲಿ ಬಂದು ಟೊಮೆಟೊ ಟ್ರೇ ಬಾಕ್ಸ್‌ಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು ಬೆಳಕಿಗೆ ಬಂದಿದೆ.

ಈ ಬಗ್ಗೆ ಪ್ರಶಾಂತ ಅವರು ಹಲೂಸೂರು ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X